ಒತ್ತುವರಿ ಆರೋಪ; ಮಂತ್ರಿಮಾಲ್ ಸರ್ವೆ ಮಾಡಲು ಮುಂದಾದ ಬಿಬಿಎಂಪಿ
ಬೆಂಗಳೂರು, ಜನವರಿ 7: ಒತ್ತುವರಿ ಆರೋಪ ಕೇಳಿ ಬಂದಿದ್ದ ಬೆಂಗಳೂರಿನ ಜನಪ್ರಿಯ ಶಾಪಿಂಗ್ ಮಾಲ್ 'ಮಂತ್ರಿ ಮಾಲ್' ಸರ್ವೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇದರಿಂದ ಮಂತ್ರಿ ಮಾಲ್ ಇನ್ಮುಂದೆ ಇರುತ್ತಾ? ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಭವವಾಗಿದೆ.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ತೆರಳಿದ ಬಿಬಿಎಂಪಿ ಪೂರ್ವ ವಲಯ ಅಧಿಕಾರಿಗಳ ತಂಡ ಮಂತ್ರಿ ಮಾಲ್ ಜಾಗವನ್ನು ಸರ್ವೆ ನಡೆಸಿತು. 'ಮಂತ್ರಿ ಶಾಪಿಂಗ್ ಮಾಲ್ನ್ನು (ಮಂತ್ರಿ ಸ್ಕ್ವೇರ್) ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದು, ಅದನ್ನು ಸರ್ಕಾರ ವಶಕ್ಕೆ ಪಡೆಯಬೇಕು' ಎಂದು ಬೆಂಗಳೂರು ವಿಭಾಗದ 'ಪ್ರಾದೇಶಿಕ ಆಯುಕ್ತರು ಹಾಗೂ ಸಕ್ಷಮ ಪ್ರಾಧಿಕಾರಿಯವರ ನ್ಯಾಯಾಲಯ' ಜನವರಿ 7 ರಂದು ಆದೇಶ ಮಾಡಿತ್ತು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸೇರಿದ ಜಾಗದಲ್ಲಿ ನಿಯಮಬಾಹಿರವಾಗಿ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಮಳಿಗೆಗಳನ್ನು ತೆರೆದಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಎನ್ ಆರ್ ರಮೇಶ್ ಹಾಗೂ ಇತರರು ಸಕ್ಷಮ ಪ್ರಾಧಿಕಾರಿಯವರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಭಾರಿ ಬೆಲೆಬಾಳುವ ಮಾಲ್
ಬೆಂಗಳೂರಿನ ಪ್ರತಿಷ್ಠಿತ ಮಾಲ್ ಹಾಗೂ ಜನನಿಬಿಡ ಮಾಲ್ ಎಂದು ಪರಿಗಣಿತವಾಗಿರುವ ಈ ಮಾಲ್ ಬೆಂಗಳೂರಿನ ಹೃದಯ ಭಾಗವಾದ ಮಲ್ಲೇಶ್ವರದಲ್ಲಿದೆ.
4.29 ಎಕರೆ ಪ್ರದೇಶದಲ್ಲಿ ಸುಮಾರು 400 ಕೋಟಿ ರುಪಾಯಿ ಬೆಲೆ ಬಾಳುವ ಮಂತ್ರಿ ಶಾಪಿಂಗ್ ಮಾಲ್ ನಿರ್ಮಿಸಲಾಗಿದೆ.

ಮಂತ್ರಿ ಮಾಲ್ ಅನಧಿಕೃತ; ಎನ್ ಆರ್ ರಮೇಶ್
ನ್ಯಾಯಾಲಯದ ಆದೇಶದ ಕುರಿತ ಮಾಧ್ಯಮಗಳೊಂದಿಗೆ ಮಾತನಾಡಿರುವ ದೂರುದಾರ ಎನ್ ಆರ್ ರಮೇಶ್ ಅವರು, ''ಸರ್ವೆ ನಂಬರ್ 56 ರಲ್ಲಿ 3.31 ಎಕರೆ ಬಿಬಿಎಂಪಿ ಸ್ವತ್ತನ್ನು ಒತ್ತುವರಿ ಮಾಡಿಕೊಂಡು ಮಂತ್ರಿ ವಸತಿ ಸಮುಚ್ಚಯ ನಿರ್ಮಿಸಿದ್ದಾರೆ. ಅದರಲ್ಲಿ ಶೇ 20 ರಷ್ಟು ತೆರವುಗೊಳಿಸಬೇಕಾಗುತ್ತದೆ. ಜಕ್ಕರಾಯನಕೆರೆಯ 37 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಮಂತ್ರಿ ಮಾಲ್ ಕಟ್ಟಲಾಗಿದೆ. ಅದರಲ್ಲಿ ಶೇ 15 ರಷ್ಟು ತೆರವುಗೊಳಿಸಬೇಕಾಗುತ್ತದೆ. ಸಕ್ಷಮ ಪ್ರಾಧಿಕಾರಿ ನ್ಯಾಯಾಲಯಕ್ಕೆ ನಮ್ಮ ದೂರು ಮನವರಿಕೆಯಾಗಿ ಈ ಆದೇಶ ನೀಡಿದೆ'' ಎಂದು ಹೇಳಿದ್ದಾರೆ.

ಕೇವಿಯಟ್ ಅರ್ಜಿ ಸಲ್ಲಿಸಲಿದ್ದೇವೆ
''ಮಂತ್ರಿ ಮಾಲ್ ಕಡೆಯವರು ಪ್ರಾಧಿಕಾರಿ ನ್ಯಾಯಾಲಯದ ಈ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವ ಸಂಭವವಿದೆ. ಆದರೆ, ಅರ್ಜಿದಾರರಾದ ನಾವು ಕೂಡ ಹೈಕೋರ್ಟ್ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಲಿದ್ದೇವೆ ಎಂದು ಎನ್ ಆರ್ ರಮೇಶ್ ಹೇಳಿದ್ದಾರೆ. ಹಾಗಾಗಿ ಮಂತ್ರಿ ಮಾಲ್ ಭವಿಷ್ಯ ಅಡಕತ್ತರಿಯಲ್ಲಿ ಸಿಲುಕಿಕೊಂಡಿದೆ.

ಕೊಚ್ಚಿ ಮಾದರಿಯಲ್ಲಿ ತೆರವು ಮಾಡಲಿ
''ಕೆರೆ ಒತ್ತುವರಿ ಮಾಡಿ ಬೃಹತ್ ಮಾಲ್ ಕಟ್ಟಿರುವುದು ಸಕ್ಷಮ ಪ್ರಾಧಿಕಾರಿಯವರ ನ್ಯಾಯಾಲಯದಿಂದ ಸಾಭೀತಾಗಿದೆ. ಇತ್ತೀಚೆಗೆ ಅಕ್ರಮವಾಗಿ ನಿಯಮಾವಳಿಗಳನ್ನು ಮೀರಿ ಕೊಚ್ಚಿಯಲ್ಲಿ ಕಟ್ಟಿದ್ದ ಬೃಹತ್ ಅಪಾರ್ಟ್ಮೆಂಟಿನ ರೀತಿಯೇ ಮಂತ್ರಿ ಮಾಲ್ ಮೇಲೂ ಕ್ರಮ ಜರುಗಿಸಬೇಕು. ಒತ್ತುವರಿ ಮಾಡುವವರಿಗೆ ಇದೊಂದು ಪಾಠ ಆಗಲಿ'' ಎಂದು ಎನ್ ಆರ್ ರಮೇಶ್ ಒತ್ತಾಯಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications