ಬೆಂಗಳೂರಿನ ಅಧೀನ ನ್ಯಾಯಾಲಯಗಳಲ್ಲಿ ಶೀಘ್ರವೇ ಸಿಸಿಟಿವಿ ಅಳವಡಿಕೆ
ಬೆಂಗಳೂರು, ಡಿಸೆಂಬರ್ 4 : ಸುಗಮ ಹಾಗೂ ಪಾರದರ್ಶಕ ಕಲಾಪಕ್ಕಾಗಿ ನ್ಯಾಯಾಂಗವು ಬೆಂಗಳೂರಿನ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಿದೆ.
ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು ಅಧೀನ ನ್ಯಾಯಾಲಯಗಳಾದ ಮೆಟ್ರೊ ಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಸಿಟಿ ಸಿವಿಲ್ ಕೋರ್ಟ್, ಲೋಕಾಯುಕ್ತ ವಿಶೇಷ ನ್ಯಾಯಲಯ, ಲೇಬರ್ ನ್ಯಾಯಾಲಯದಲ್ಲಿ ಆಡಿಯೋ ರಹಿತ ಸಿಸಿಟಿವಿ ಅಳವಡಿಸಲಾಗುತ್ತದೆ.

ಸಿಟಿ ನ್ಯಾಯಾಲಯ ಬೆಳಗ್ಗೆ 11 ರಿಂದ ಮಧ್ಯಾಹ್ 2 ಹಾಗೂ ಮಧ್ಯಾಹ್ನ 3 ರಿಂದ ಸಂಜೆ5.30 ರವರೆಗೆ ಕಾರ್ಯ ನಿರ್ವಹಿಸಲಿದೆ. ನ್ಯಾಯಾಂಗ ಅಧಿಕಾರಿಗಳು ಕೋರ್ಟ್ ಗೆ ಬರುವ ವೇಳೆ ಹಾಗೂ ಅಲ್ಲಿಂದ ತೆರಳುವ ವೇಳೆಯನ್ನು ಸಿಸಿಟಿವಿ ಅಳವಡಿಕೆಯಿಂದ ತಿಳಿಯಬಹುದಾಗಿದೆ. ಅದರೆ ಜತೆಗೆ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗಳಿಗೆ ಯಾವುದೇ ಅಡೆತಡೆ ಬರದಂತೆ ತಡೆಯಲು ಸಿಸಿಟಿವಿ ಅಳವಡಿಸಲಾಗುತ್ತಿದೆ.
ಪಾರದರ್ಶಕ ಹಾಗೂ ಭದ್ರತಾ ದೃಷ್ಟಿಯಿಂದ ನೋಡುವುದಾದರೆ ವಿಚಾರಣೆ ನಡೆಯುವ ಸಂದರ್ಭದಲ್ಲಿ ಬಾರ್ ಹಾಗೂ ನ್ಯಾಯಪೀಠ ನಡುವೆ ಸಂಘರ್ಷಗಳು ಉಂಟಾದರೆ ಆ ಸಂದರ್ಭದಲ್ಲಿ ನ್ಯಾಯಾಂಗ ಅಧಿಕಾರಿಗಳು, ವಕೀಲರು, ಸಿಸಿಟಿವಿ ಫೂಟೋಜ್ ಗಳನ್ನು ಬಳಸಿ ನ್ಯಾಯಾಧೀಶರ ಮುಂದೆ ತಮ್ಮ ವಾದ ಮಂಡಿಸಬಹುದು.
ಸಾರ್ವಜನಿಕ ಕಾರ್ಯ ಇಲಾಖೆಯು, ನಗರಾದ್ಯಂತ ಇರುವ ಅಧೀನ ನ್ಯಾಯಾಲಯಗಳಲ್ಲಿ ಒಟ್ಟು 600 ಸಿಸಿಟಿವಿ ಅಳವಡಿಸಲು ತೀರ್ಮಾನಿಸಿದೆ. ಆದರೆ ಸಿಸಿಟಿವಿ ಫೂಟೇಜ್ ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಒಂದೊಮ್ಮೆ ಫೂಟೇಜ್ ಅವಶ್ಯಕತೆ ಇದ್ದಲ್ಲಿ ಆರ್ ಟಿ ಐ ಮೂಲಕ ಪಡೆದುಕೊಳ್ಳಬಹುದು.
ನ್ಯಾಯಾಲಯದ ಪ್ರವೇಶ ದ್ವಾರ ಹಾಗೂ ನ್ಯಾಯಾಲಯದಿಂದ ಹೊರ ಹೋಗುವ ದ್ವಾರದ ಬಳಿ, ಕೋರ್ಟ್ ಕಾರಿಡಾರ್ ಹಾಗೂ ಕೆಲವು ನ್ಯಾಯಾಲಯದ ವಿಭಾಗಗಳಲ್ಲಿ ಅಳವಡಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶವನ್ನು ವಕೀಲರು ಸ್ವಾಗತಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಸಿಸಿಟಿವಿ ಅಳವಡಿಕೆಯಿಂದ ಪಾರದರ್ಶಕತೆ ಇರುತ್ತದೆ. ಇದು ವಕೀಲರು, ನ್ಯಾಯಾಧೀಶರು ಹಾಗೂ ದಾವೇದಾರರ ನಿಯಂತ್ರಕವಾಗಿ ಕೆಲಸ ಮಾಡಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಹೈಕೋರ್ಟ್ ಸಮ್ಮತಿ ಇಲ್ಲದೆ ಆರ್ ಟಿ ಐ ಮೂಲಕ ಸಿಸಿಟಿವಿ ಫೂಟೇಜ್ ಗಳನ್ನು ಪಡೆಯುವಂತಿಲ್ಲ. ಅಗತ್ಯವಿದ್ದರೆ ಉನ್ನತ ನ್ಯಾಯಾಂಗದಲ್ಲಿ ಒಪ್ಪಿಗೆ ಪಡೆದುಕೊಳ್ಳಬೇಕು. ಈಗ ಸದ್ಯಕ್ಕೆ ಪ್ರಯೋಗಾತ್ಮಕವಾಗಿ ಆಡಿಯೋ ರಹಿತ ಸಿಸಿಟಿವಿಯನ್ನು ಅಳವಡಿಸಲಾಗುತ್ತದೆ. ನಂತರದಲ್ಲಿ ಹೈ ರೆಸಲ್ಯೂಷನ್ ಇರುವ ಆಡಿಯೋ ಹಾಗೂ ವಿಡಿಯೋ ಎರಡೂ ಇರುವ ಸಿಸಿಟಿವಿಯನ್ನು ಅಳವಡಿಸಲಾಗುತ್ತದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications