ಒಳ ಉಡುಪು ಧರಿಸಲ್ಲ: ಹಸುಗಳ ಕೆಚ್ಚಲು ಕೊಯ್ದು ಆರೋಪಿ ಮನಸ್ಥಿತಿ ಎಂತಹದ್ದು ಗೊತ್ತಾ?
ಬೆಂಗಳೂರು, ಜನವರಿ 14: ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಘಟನೆಯಿಂದ ನಗರದಾದ್ಯಂತ ಹಸುಗಳನ್ನು ಸಾಕುವವರು ಆತಂಕಕ್ಕೊಳಗಾಗಿದ್ದಾರೆ. ವ್ಯಕ್ತಿಯೊಬ್ಬ ರಾತ್ರಿ ವೇಳೆ ಕುಡಿದ ಮತ್ತಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ.
ರಾಜ್ಯಾದ್ಯಂತ ಸದ್ದು ಮಾಡಿದ ಈ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಈಗಾಗಲೇ ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೈಯದ್ ನಸ್ರು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆದರೆ ಓರ್ವ ಆರೋಪಿಯಿಂದ ಇದು ಸಾಧ್ಯವಿಲ್ಲ ಎನ್ನುವ ಆರೋಪದ ಮೇಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಸದ್ಯ ಬಂಧಿತ ಆರೋಪಿಯನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಆತನ ಮನಸ್ಥಿತಿ ಹಾಗೂ ಜೀವನ ನಡೆಸುವ ರೀತಿ ಕೇಳಿ ಶಾಕ್ ಆಗಿದ್ದಾರೆ.

ಆರೋಪಿ ಸೈಯದ್ ನಸ್ರು ಬೆಂಗಳೂರಿನ ಹಳೆ ಪೆನ್ಷನ್ ಮೊಹಲ್ಲದಲ್ಲಿ ಸಣ್ಣದೊಂದು ಪ್ಲಾಸ್ಟಿಕ್ ಹಾಗೂ ಬಟ್ಟೆ ಬ್ಯಾಗ್ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿಯೇ ಆಶ್ರಯ ಪಡೆದಿದ್ದ ಸೈಯದ್ ನಸ್ರು ಕುಡಿತದ ಚಟಕ್ಕೆ ದಾಸನಾಗಿದ್ದ. ಅಲ್ಲದೇ ನೀಲಿ ಚಿತ್ರಗಳನ್ನು ಹೆಚ್ಚಾಗಿ ನೋಡುತ್ತಿದ್ದನಂತೆ. ಈತ ಒಂದು ವರ್ಷದ ಹಿಂದೆ ಕೂಡ ಹಸುಗಳ ಜೊತೆಗೆ ವಿಚಿತ್ರವಾಗಿ ನಡೆದುಕೊಂಡಿದ್ದ ಎನ್ನುವುದು ತನಿಖೆಯಲ್ಲಿ ತಿಳಿದು ಬಂದಿದೆ.
ವಾರಕ್ಕೊಮ್ಮೆ ಸ್ನಾನ ಮಾಡುವ ಸೈಯದ್ ನಸ್ರು, ಒಳ ಉಡುಪು ಧರಿಸದೇ ಕೇವಲ ಲುಂಗಿ ಧರಿಸಿ ಎಲ್ಲೆಂದರಲ್ಲಿ ಓಡಾಡುತ್ತಿದ್ದ. ಇನ್ನು ಈ ಬಾರಿಯೂ ಕುಡಿದ ಅಮಲಿನಲ್ಲಿ ಹಸುಗಳ ಕೆಚ್ಚಲಿಗೆ ಚಾಕು ಹಾಕಿರುವುದಾಗಿ ಆರೋಪಿ ಸೈಯದ್ ನಸ್ರು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಕಾಟನ್ಪೇಟೆ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಸುವಿನ ಮಾಲೀಕರ ಆರೋಪವೇನು?
ಇನ್ನು ಆರೋಪಿ ಸೈಯದ್ ನಸ್ರು ಬಂಧನದ ಬಗ್ಗೆ ಹಸುವಿನ ಮಾಲೀಕ ಕರ್ಣ ಪ್ರತಿಕ್ರಿಯಿಸಿದ್ದು, ಬಂಧಿತ ಆರೋಪಿಯನ್ನು ಈಗ ಮಾನಸಿಕ ಅಸ್ವಸ್ಥ ಎನ್ನುತ್ತಿದ್ದಾರೆ. ಮಾನಸಿಕ ಅಸ್ವಸ್ಥ ಆಗಿದ್ದರೆ ಈ ಕೃತ್ಯ ಎಸಗಲು ಸಾಧ್ಯನಾ? ಮೊದಲು ಅವನನ್ನು ಕೆಲಸದಲ್ಲಿ ಇಟ್ಟುಕೊಂಡಿರುವ ಅಂಗಡಿ ಮಾಲೀಕನನ್ನು ಬಂಧಿಸಬೇಕು. ಈ ಕೃತ್ಯ ಒಬ್ಬನೇ ಮಾಡಲು ಸಾಧ್ಯ ಇಲ್ಲ. ಇದರ ಹಿಂದೆ ಯಾರೋ ಇದ್ದಾರೆ. ಆರೋಪಿಯನ್ನು ತನಿಖೆಗೆ ಒಳಪಡಿಸದೇ ಒಂದೇ ದಿನಕ್ಕೆ ತರಾತುರಿಯಲ್ಲಿ ಜೈಲಿಗೆ ಹಾಕಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗೂ ಪ್ರಕರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications