ರಂಗಕರ್ಮಿ ಎ ಎಸ್ ಮೂರ್ತಿ ಸ್ಮರಣೆಗೆ ಕಲೋತ್ಸವ
ಬೆಂಗಳೂರು, ಡಿಸೆಂಬರ್, 16: ರಂಗಕರ್ಮಿ ಎ ಎಸ್ ಮೂರ್ತಿ ಅವರ ಸ್ಮರಣೆ ಹಿನ್ನೆಲೆಯಲ್ಲಿ ಕಲಾಮಂದಿರ ಅಭಿನಯ ತರಂಗ ಮತ್ತು ಹನುಮಂತನಗರ ಬಿಂಬದ ಆಶ್ರಯದಲ್ಲಿ ಎರಡು ದಿನಗಳ 'ಕಲೋತ್ಸವ 2015' ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ. ಡಿಸೆಂಬರ್ 19 ಮತ್ತು 20 ರಂದು ಹನುಮಂತನಗರದ ಕಲಾಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಮಕ್ಕಳು ಮತ್ತು ಹಿರಿಯರಿಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರ ಬಿಡಿಸುವುದು, ಫೋಟೋ ಮತ್ತು ಪ್ರಾತ್ಯಕ್ಷಿಕೆ ಪ್ರದರ್ಶನ, ಜಾನಪದ ಗೀತೆ ಮತ್ತು ನೃತ್ಯ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಂವಾದ, ಕವಿಗಳ ಸಭೆ, ಜಾದೂ ಪ್ರದರ್ಶನ, ಬೀದಿ ನಾಟಕಗಳು, ಮೂಕಾಭಿನಯ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ.['ಕಿರಣ್ ಸುಬ್ಬಯ್ಯ' ಕೈಯಿಂದ ಮೂಡಿದ ಶಿಲ್ಪಗಳು ಮಾತಾಡ್ತಾವೆ]

ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ, ಕಲಾವಿದ ಎಸ್ ಜಿ ವಸುದೇವ್, ವಿಮರ್ಶಕ ಎಂ ಎಸ್ ಕೃಷ್ಣಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ಕಾರ್ಯಕ್ರಮಗಳನ್ನು ರಂಗಕರ್ಮಿ ಎ ಎಸ್ ಮೂರ್ತಿ ಅವರಿಗೆ ಅರ್ಪಣೆ ಮಾಡುತ್ತಿದ್ದೇವೆ ಎಂದು ಕಲೋತ್ಸವ ಸಮಿತಿ ಗೌರವಾಧ್ಯಕ್ಷ ಅ ರಾ ಮಿತ್ರ ತಿಳಿಸಿದ್ದಾರೆ.[ಅಗಲಿದ ನೆನಪು ಮರೆಸಿ ಶಾಶ್ವತ ಸಂತಸ ಬೆಸೆಯುವ 3ಡಿ ಕಾಸ್ಟಿಂಗ್]
ನಟ ಎಚ್ ಎಸ್ ಸೋಮಶೇಖರ್ ಕಲೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಖ್ಯಾತ ಗಾಯಕಿ ಎಂ ಡಿ ಪಲ್ಲವಿ ಸಂಗೀತ ರಸದೌತಣ ನೀಡಲಿದ್ದಾರೆ. ಎರಡನೇ ದಿನ ಹಿರಿಯ ಕವಿ ಎಚ್ ಎಸ್ ವೆಂಕಟೇಶ್ ಮೂರ್ತಿ ಸಂವಾದ ನಡೆಸಿಕೊಡಲಿದ್ದಾರೆ. ಅಭಿನಯತರಂಗದ ವಿದ್ಯಾರ್ಥಿಗಳಿಂದ ನಾಟಕ ಮತ್ತು ರಘು ದೀಕ್ಷಿತ್ ತಂಡ ಸಂಗೀತ ಸಂಜೆ ನಡೆಸಿಕೊಡಲಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications