ಯುವತಿಯರಿಗೆ ಅಶ್ಲೀಲ ಸಂದೇಶ ರವಾನಿಸುತ್ತಿದ್ದ ಅರಕಲಗೂಡಿನ ವ್ಯಕ್ತಿ ಸೆರೆ
ಬೆಂಗಳೂರು ಫೆ. 18: ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ ಅಲಕಲಗೂಡು ಮೂಲದ ವ್ಯಕ್ತಿಯನ್ನು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಅರಕಲಗೂಡು ಮೂಲದ ಹರೀಶ್ ಬಂಧಿತ ಆರೋಪಿ. ಈತ ಫೇಸ್ಬುಕ್ ಮತ್ತು ವಾಟ್ಸಪ್ ಮೂಲಕ ಅಪರಿಚಿತ ಯುವತಿಯರ ನಂಬರ್ ಪಡೆದು ಅವರಿಗೆ ಅಶ್ಲೀಲ ವಿಡಿಯೋ ರವಾನಿಸುತ್ತಿದ್ದ. ಈ ಕುರಿತು ಮಹಿಳೆಯೊಬ್ಬರು ದೂರು ನೀಡಿದ್ದರು. ದೂರನ್ನಾಧರಿಸಿ ತನಿಖೆ ನಡೆಸಿದ ಸಿಇಎನ್ ಠಾಣೆಯ ಇನ್ಸ್ಪೆಕ್ಟರ್ ಯೋಗೀಶ್ ಮತ್ತು ತಂಡ ಆರೋಪಿ ಹರೀಶ್ನನ್ನು ಸಿಡಿಆರ್ ಕರೆ ಆಧರಿಸಿ ಬಂಧಿಸಿದ್ದಾರೆ. ಬಂಧಿತನ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಹತ್ತಕ್ಕೂ ಹೆಚ್ಚು ಯುವತಿಯರಿಗೆ ಅಶ್ಲೀಲ ವಿಡಿಯೋ ಮತ್ತು ಫೋಟೋ ರವಾನಿಸಿರುವ ವಿಚಾರ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ಜೆಸಿಬಿ ಚಾಲಕನಾಗಿದ್ದು, ಈತನ ವಿರುದ್ಧ ಸೈಬರ್ ಅಪರಾಧದಡಿ ಕೇಸು ದಾಖಲಿಸಲಾಗಿದೆ.
ಅಶ್ಲೀಲ ವಿಡಿಯೋ ಮತ್ತು ಪೋಟೋ ರವಾನಿಸುವುದು ಸೈಬರ್ ಅಪರಾಧ. ಈ ರೀತಿಯ ಸಂದೇಶಗಳನ್ನು ರವಾನಿಸಿದಲ್ಲಿ, ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ತಿಳಿಸಿದ್ದಾರೆ.

ಗಾಂಜಾ ಸೇವನೆ ಹಿಂದೂಗಳ ಹಕ್ಕು: ಪುನೀತ್ ಕೆರೆಹಳ್ಳಿ ವಿರುದ್ಧ ದೂರು
ಗಾಂಜಾ ಸೇದುವುದು ನಮ್ಮ ಹಕ್ಕು. ಅದು ಹಿಂದೂಗಳ ಸಂಪ್ರದಾಯ ಎಂದು ಪುನೀತ್ ಕೆರೆಹಳ್ಳಿ ಎಂಬಾತ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿವಾದಾತ್ಮಕ ಹೇಳಿಕೆ ನೀಡಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಹೇಳಿಕೆ ಸಂಬಂಧದ ವಿಡಿಯೋವನ್ನು ನಗರ ಪೊಲೀಸ್ ಆಯುಕ್ತರಾದ ಕಮಲ್ಪಂತ್ ಅವರಿಗೆ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಕಳುಹಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಯುವಕರಿಗೆ ಗಾಂಜಾ ಸೇವನೆ ಮಾಡುವಂತೆ ಪ್ರಚೋದಿಸುವ ಹೇಳಿಕೆ ಇದಾಗಿದ್ದು, ಈ ಸಂಬಂಧ ವಿಡಿಯೋ ಸಂದೇಶವನ್ನು ಪೊಲೀಸ್ ಆಯುಕ್ತರಿಗೆ ರವಾನಿಸಿದ್ದೇನೆ ಎಂದು ರಮೇಶ್ ಹೇಳಿದ್ದಾರೆ.
ಯುವಜನ ಮಾದಕ ವಸ್ತು ಉಪಯೋಗಿಸಿ ಅವರ ಜೀವನ ದಿಕ್ಕೆಟ್ಟುಹೋಗುತ್ತಿದೆ. ಇಂತಹ ವಿಡಿಯೋಗಳಿಂದ ಗಾಂಜಾ ಸೇವನೆ ಪ್ರಚೋದಿಸುವಂತೆ ಮಾಡುತ್ತಿದೆ. ಈ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications