ರಾಜಕಾಲುವೆ ತೆರವು: ಮಾನ್ಯತಾ ಟೆಕ್ ಪಾರ್ಕ್ ಮೇಲೆ ಬಿಬಿಎಂಪಿ ಕಣ್ಣು
ಬೆಂಗಳೂರು, ಆಗಸ್ಟ್, 18: ರಾಜ ಕಾಲುವೆ ಒತ್ತುವರಿ ತೆರವು ಹಲವು ಗೊಂದಲಗಳ ನಡುವೆಯೂ ಬೆಂಗಳೂರಿನಲ್ಲಿ ಮುಂದುವರಿದೇ ಇದೆ. ಬೆಂಗಳೂರಿನ ಅತಿದೊಡ್ಡ ಟೆಕ್ ಪಾರ್ಕ್ ಗಳಲ್ಲಿ ಒಂದಾದ ಮಾನ್ಯತಾ ಟೆಕ್ ಪಾರ್ಕ್ ಸಹ ಸರ್ವೆಗೆ ಒಳಗಾಗಬೇಕಿದೆ.
ಆದ್ಯತೆ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮಾನ್ಯತಾ ಟೆಕ್ ಪಾರ್ಕ್ ಗೆ ಸಂಬಂಧಿಸಿದ ಜಾಗಗಳ ಸರ್ವೆ ಮಾಡಲು ಮುಂದಾಗಿದ್ದಾರೆ. ಎಲ್ಲಿಯಾದರೂ ಒತ್ತುವರಿ ನಡೆದಿದೆಯೇ ಎಂಬುದನ್ನು ಪರಿಶೀಲನೆ ಮಾಡಲಿದ್ದಾರೆ.[ರಾಜಕಾಲುವೆ ಒತ್ತುವರಿ ವಿವರ ಈಗ ವೆಬ್ಸೈಟ್ನಲ್ಲಿ ಲಭ್ಯ]

'ನಾವು ಕಾಲುವೆ ಸಂಬಂಧಿಸಿದ ಜಾಗದ ಸರ್ವೆ ಮಾಡಲಿದ್ದೇವೆ. ಮಾನ್ಯತಾ ಟೆಕ್ ಪಾರ್ಕ್ ಇಲ್ಲಿ ಒತ್ತುವರಿ ಮಾಡಿಕೊಂಡ ಅನುಮಾನಗಳು ಇದ್ದು ಪರಿಶೀಲನೆ ಮಾಡಲಾಗುತ್ತದೆ' ಎಂದು ಯಲಹಂಕ ವಲಯದ ಜಂಟಿ ಆಯುಕ್ತ ಸರ್ಫ್ ರಾಜ್ ಖಾನ್ ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]
ಕಳೆದ ವರ್ಷ ಬಿಬಿಎಂಪಿ ಮಾನ್ಯತಾ ಟೆಕ್ ಪಾರ್ಕ್ ಗೆ ಸಂಬಂಧಿಸಿದ ಸೇತುವೆಯನ್ನು ಒತ್ತುವರಿ ಹೆಸರಿನಲ್ಲಿ ಕೆಡವಿತ್ತು. ಕಾಲುವೆ ದಿಕ್ಕನ್ನು ಬದಲಿಸಿ ಟೆಕ್ ಪಾರ್ಕ್ ನಿರ್ಮಿಸಲಾಗಿದೆ ಎಂಬ ಅನುಮಾನಗಳು ವ್ಯಕ್ತವಾಗಿದೆ.
2015 ರ ಅಕ್ಟೊಬರ್ 7 ರಂದು 14 ವರ್ಷದ ಹುಡುಗನೊಬ್ಬ ಇದೇ ಟೆಕ್ ಪಾರ್ಕ್ ಬಳಿಯ ಕಾಲುವೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದು ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಟೆಕ್ ಪಾರ್ಕ್ ಮೇಲೆ ಕ್ರಿಮಿನಲ್ ಮೊಕದ್ದಮೆಯೂ ದಾಖಲಾಗಿತ್ತು.
ಸಿಎಂ ಸಿದ್ದರಾಮಯ್ಯ ಸಹ ಒತ್ತುವರಿ ತೆರವಿಗೆ ಸ್ಪಷ್ಟ ಆದೇಶ ನೀಡಿದ್ದಾರೆ. ನಾವು ಆದ್ಯತೆ ಮೇರೆಗೆ ಮಾನ್ಯತಾ ಟೆಕ್ ಪಾರ್ಕ್ ಒತ್ತುವರಿಗೆ ಸಂಬಂಧಿಸಿ ಸರ್ವೆ ಮಾಡಲಿದ್ದೇವೆ. ಒಂದು ವೇಳೆ ಕಾಲುವೆ ಒತ್ತುವರಿಯಾಗಿದ್ದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡುತ್ತೇವೆ ಎಂದು ಯಲಹಂಕ ವಲಯದ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ತಿಳಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications