ಬೆಂಗಳೂರಿನ ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ: ಕೆಲವೇ ದಿನಗಳಲ್ಲಿ 4,000 ಕ್ಕೂ ಅಧಿಕ ಪ್ರಕರಣ ವರದಿ- ಲಕ್ಷಣ, ವೈದ್ಯರ ಸಲಹೆ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರು ಮಹಾನಗರದಲ್ಲಿ ಡೆಂಗ್ಯೂ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗಿವೆ. ಕಳೆದ ಕೆಲವು ದಿನಗಳಲ್ಲಿ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಆತಂಕಕಾರಿ ಸಂಗತಿಯೆಂದರೆ, ಮಕ್ಕಳಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.
ಡೆಂಗ್ಯೂ ಪೀಡಿತ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆಯು ಇನ್ನೂ ಅಂಕಿಅಂಶಗಳನ್ನು ಬಿಡುಗಡೆ ಮಾಡಿಲ್ಲ. ಆದರೆ, ವೈದ್ಯರು ನೀಡಿರುವ ಮಾಹಿತಿ ಪ್ರಕಾರ ಮಕ್ಕಳಲ್ಲೇ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.

ಮಕ್ಕಳಲ್ಲಿ 103°F ಹಾಗೂ 104°F ನಡುವೆ ತಾಪಮಾನ ಕಾಣಿಸಿಕೊಳ್ಳುವುದು ಡೆಂಗ್ಯೂ ಸೋಂಕಿನ ಮೊದಲ ಗುಣ ಲಕ್ಷಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ತಾಪಮಾನವನ್ನು ಹೊಂದಿರುವ ಜ್ವರದಿಂದ ದಾಖಲಾಗುವ ಶಿಶುಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವೈದ್ಯರು 'ಟೈಮ್ಸ್ ಆಫ್ ಇಂಡಿಯಾ'ಗೆ ತಿಳಿಸಿದ್ದಾರೆ.
ಪ್ರಸ್ತುತ ನಮ್ಮ ವಾರ್ಡ್ಗಳಲ್ಲಿ 12 ಮಕ್ಕಳು ಡೆಂಗ್ಯೂ ಪೀಡಿತರಾಗಿದ್ದಾರೆ ಎಂದು ಆಟ್ರೆಯಾ ಆಸ್ಪತ್ರೆಯ ಸಂಸ್ಥಾಪಕ ಮತ್ತು ವೈದ್ಯಕೀಯ ನಿರ್ದೇಶಕ ಡಾ.ನಾರಾಯಣಸ್ವಾಮಿ ಮಾಹಿತಿ ನೀಡಿದ್ದಾರೆ.
ತಣ್ಣನೆಯ ಕೈಗಳು ಮತ್ತು ಪಾದಗಳು ಗಂಭೀರ ಅನಾರೋಗ್ಯದ ಸಂಕೇತವಾಗಿದೆ. ಡೆಂಗ್ಯೂ ದೇಹದಲ್ಲಿ ದ್ರವದ ಅಸಮತೋಲನಕ್ಕೆ ಕಾರಣವಾಗುತ್ತದೆ ಎಂದು ಡಿಎಚ್ಇಇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಹಿರಿಯ ಶಿಶುವೈದ್ಯ ಮತ್ತು ಮಕ್ಕಳ ತಜ್ಞೆ ಡಾ. ಸುಪ್ರಜಾ ಚಂದ್ರಶೇಖರ್ ಹೇಳಿದ್ದಾರೆ.
ಡೆಂಗ್ಯೂ ನಿರ್ಣಾಯಕ ಹಂತವನ್ನು ತಲುಪಿದ ನಂತರ, ರಕ್ತನಾಳಗಳಲ್ಲಿನ ದ್ರವಗಳು ಸೋರಿಕೆಯಾಗಲು ಪ್ರಾರಂಭಿಸುತ್ತವೆ. ಇದರ ಪರಿಣಾಮವಾಗಿ ರಕ್ತದ ಪರಿಚಲನೆ ನಿಧಾನವಾಗುತ್ತದೆ. ಈ ಕಾರಣದಿಂದಾಗಿ ಪಾದಗಳು, ಮೂಗಿನ ತುದಿ ಹಾಗೂ ಅಂಗೈಗಳಿಗೆ ಅಸಮರ್ಪಕ ರಕ್ತ ಪೂರೈಕೆಯಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
'ನೀವು ಮಗುವಿನ ಕೈಯನ್ನು ನಿಮ್ಮ ಬೆರಳುಗಳಿಂದ ಹಿಸುಕಿ ಮೂರು ಸೆಕೆಂಡುಗಳ ನಂತರ ಅದನ್ನು ಸಡಿಲಗೊಳಿಸಿದರೆ ಸಾಮಾನ್ಯ ಬಣ್ಣವು ಹಿಂತಿರುಗುವುದನ್ನು ನೀವು ಕಾಣುವುದಿಲ್ಲ. ಇದು ರಕ್ತಪರಿಚಲನೆಯು ಕಳಪೆಯಾಗಿದೆ ಎಂಬುದಾಗಿ ತೋರಿಸುತ್ತದೆ' ಎಂದು ವೈದ್ಯರು ವಿವರಿಸಿದ್ದಾರೆ.
ಈ ಹಂತದಲ್ಲಿ ಮಗುವಿನಲ್ಲಿ ಹೊಟ್ಟೆ ನೋವು ಉಂಟಾಗಬಹುದು. ಇದಕ್ಕೆ ರಕ್ತ ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಮೂರು ಅಥವಾ ಹೆಚ್ಚು ಬಾರಿ ವಾಂತಿಬಹುದು. ದೇಹದಲ್ಲಿ ದದ್ದುಗಳು ಕಾಣಿಸಿಕೊಳ್ಳಬಹುದು. ರಕ್ತಸ್ರಾವವಾಗಬಹುದು. ಇಂತಹ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದ್ದಾರೆ.
ಈ ರೋಗಲಕ್ಷಣಗಳು ಕಂಡುಬಂದ ಮಕ್ಕಳಿಗೆ ವೈದ್ಯಕೀಯ ಮೇಲ್ವಿಚಾರಣೆಯ ಅಗತ್ಯವಿರುತ್ತದೆ. ಐದನೇ ದಿನದ ನಂತರವೂ ಜ್ವರ ಕಡಿಮೆಯಾಗದಿದ್ದರೆ, ಮಗುವನ್ನು ಆಸ್ಪತ್ರೆಯಲ್ಲಿಯೇ ಇಡಬೇಕಾಗುತ್ತದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಡೆಂಗ್ಯೂ ಕಾಣಿಸಿಕೊಳ್ಳುವ ಹೆಚ್ಚಿನ ಮಕ್ಕಳು ಹೆಚ್ಚಿನ ಯಕೃತ್ತಿನ ಸಮಸ್ಯೆಗಳನ್ನು ಹೊಂದಿರುತ್ತಾರೆ. ಸೋಂಕು ಪೀಡಿತ ಮಕ್ಕಳನ್ನು ಹೈಡ್ರೇಟ್ ( ಹೆಚ್ಚು ನೀರಿನ ಅಂಶಗಳುಳ್ಳ ಪಾನೀಯ ಅಥವಾ ಆಹಾರವನ್ನು ಕೊಡುವುದು ) ಆಗಿ ಇಡುವುದು ಮುಖ್ಯ ಎಂದು ತಜ್ಞರು ಹೇಳಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ!












Click it and Unblock the Notifications