ಗರ್ಭಿಣಿ ಮಹಿಳೆಗೆ ಮಿಡಿದ ಪೊಲೀಸ್ ಹೃದಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ
ಗರ್ಭಿಣಿ ಮಹಿಳೆಯ ಗಾಡಿ ಹಾಳಾಗಿದ್ದನ್ನು ರಾತ್ರಿ ಪಾಳಿಯಲ್ಲಿದ್ದ ಅರಸಯ್ಯ ನೋಡಿದ್ದಾರೆ. ನೋಡಿದವರೇ ತಮ್ಮ ವಾಹನದಲ್ಲಿ ಮಹಿಳೆ ಮತ್ತು ಮಹಿಳೆಯ ಪತಿಯನ್ನು ಕೂರಿಸಿಕೊಂಡು ರಾಜಾಜಿನಗರದ ಅವರ ಮನೆ ಬಳಿ ಬಿಟ್ಟು ಬಂದಿದ್ದಾರೆ.
ಬೆಂಗಳೂರು, ಫೆಬ್ರವರಿ 8: ಆಕೆ ಹೆಸರು ಭುವನ ಕೆ. ಡಿ; ಗರ್ಭಿಣಿ. ಕೆಲವು ದಿನದ ಹಿಂದೆ ಆಕೆ ರಾತ್ರಿ ತನ್ನ ಗಂಡನ ಜತೆ ರಾಜಾಜಿನಗರ ಮನೆ ಕಡೆ ಹೊರಟಿದ್ದರು. ಟ್ರಿನಿಟಿ ವೃತ್ತದ ಬಳಿ ಆಕೆಯ ಕಾರು ಕೈಕೊಟ್ಟಿತು. ಇದರಿಂದ ಟ್ರಾಫಿಕ್ ಜಾಮ್ ಕೂಡಾ ಉಂಟಾಯಿತು. ಆ ಸಂದರ್ಭ ಆಕೆಯ ಸಹಾಯಕ್ಕೆ ಬಂದಿದ್ದು ಹಲಸೂರು ಟ್ರಾಫಿಕ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಅರಸಯ್ಯ.
ಗರ್ಭಿಣಿ ಮಹಿಳೆಯ ಕಾರು ಹಾಳಾಗಿದ್ದನ್ನು ರಾತ್ರಿ ಪಾಳಿಯಲ್ಲಿದ್ದ ಅರಸಯ್ಯ ನೋಡಿದ್ದಾರೆ. ನೋಡಿದವರೇ ಆಕೆಯ ಕಾರನ್ನು ಟ್ರಾಫಿಕ್ ಮಧ್ಯದಿಂದ ತೆಗೆಸಿದ್ದಾರೆ. ನಂತರ ತಮ್ಮ ವಾಹನದಲ್ಲಿ ಮಹಿಳೆ ಮತ್ತು ಮಹಿಳೆಯ ಪತಿಯನ್ನು ಕೂರಿಸಿಕೊಂಡು ರಾಜಾಜಿನಗರದ ಅವರ ಮನೆ ಬಳಿ ಬಿಟ್ಟು ಬಂದಿದ್ದಾರೆ. ಈ ಮೂಲಕ ಮಹಿಳೆಗೆ ರಾತ್ರಿ ಹೊತ್ತು ನೆರವಾಗಿದ್ದಾರೆ.[ಬಸ್ಸು ಕೆಟ್ಟು ನಿಂತಾಗ ಆಪದ್ಬಾಂಧವನಾದ ಟ್ರಾಫಿಕ್ ಪೊಲೀಸ್!]

ಪೊಲೀಸ್ ಇನ್ಸ್ ಪೆಕ್ಟರ್ ಸಹಾಯವನ್ನು ಕೊಂಡಾಡಿರುವ ಮಹಿಳೆ "ಬೆಂಗಳೂರು ಮಹಿಳೆಯರಿಗೆ ಸುರಕ್ಷಿತ ನಗರ ಮತ್ತು ಪೊಲೀಸರು ಜನರ ಜತೆ ಸ್ನೇಹದಿಂದ ಇದ್ದಾರೆ," ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.[ಶೂಟೌಟ್ ಕೇಸ್ : 'ಅಗ್ನಿ' ಶ್ರೀಧರ್ ಆರೋಪಿ ನಂ. 8]

ಮಹಿಳೆಗೆ ರಾತ್ರಿ ಹೊತ್ತು ಸಹಾಯ ಮಾಡಿ ಮಾನವೀಯತೆ ಮೆರೆದ ಎಎಸ್ಐ ಅರಸಯ್ಯರಿಗೆ ಈಗ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಅರಸಯ್ಯ ಅವರ ಕೆಲಸವನ್ನು ಮೆಚ್ಚಿಕೊಂಡಿರುವ ಡಿಜಿಪಿ ರೂಪಕ್ ಕುಮಾರ್ ದತ್ತಾ ಪ್ರಶಂಸಾ ಪತ್ರ ನೀಡಿದ್ದಾರೆ. ನಿಮ್ಮ ಒಳ್ಳೆಯ ಕೆಲಸವನ್ನು ನಾನು ಮೆಚ್ಚಿಕೊಂಡಿದ್ದೇನೆ. ಎಎಸ್ಐ ಅವರ ಕೆಲಸ ಪೊಲೀಸ್ ಪಡೆಗಳಿಗೆ ಹೆಚ್ಚಿನ ಉತ್ಸಾಹ ನೀಡಿದೆ ಎಂದು ಗುಣಗಾನ ಮಾಡಿದ್ದಾರೆ.
ಮಹಿಳೆ ಪೊಲೀಸ್ ಅಧಿಕಾರಿಗೆ ಫೇಸ್ ಬುಕ್ ನಲ್ಲಿ ಧನ್ಯವಾದ ಹೇಳಿದ್ದು ಅದರ ಪುರ್ಣ ಪಾಠ ಇಲ್ಲಿದೆ..
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ










Click it and Unblock the Notifications