ಕುತೂಹಲ ಕೆರಳಿಸಿದ ಆನಂದ್ ಸಿಂಗ್ -ಡಿಕೆಶಿ ಭೇಟಿ
Recommended Video

ಬೆಂಗಳೂರು, ಮೇ 22: ಕಳೆದೊಂದು ವಾರದ ರಾಜ್ಯ ರಾಜಕಾರಣ ಪತ್ತೇದಾರಿ ಕಾದಂಬರಿಯೇ ಸರಿ! ಆ ಕಾದಂಬರಿಯ ನಾಯಕ ಆನಂದ್ ಸಿಂಗ್!
ಇದೀಗ ಅವರನ್ನು ಕಾಂಗ್ರೆಸ್ ಮುಖಂಡ ಡಿಕೆಶಿ ಭೇಟಿ ಮಾಡಿದ್ದು ಕುತೂಹಲ ಕೆರಳಿಸಿದೆ. ಸದ್ಯಕ್ಕೆ ಬೆಂಗಳೂರಿನ ದೊಮ್ಲೂರಿನಲ್ಲಿರುವ ಹಿಲ್ಟನ್ ಹೋಟೆಲ್ ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಾದ ಆನಂದ್ ಸಿಂಗ್ ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕರು.
ಅವರನ್ನು ಇಂದು ಭೇಟಿ ಮಾಡಿರುವ ಮಾಜಿ ಇಂಧನ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಕುಶಲೋಪರಿ ವಿಚಾರಿಸಿದರು! ಬಿಜೆಪಿಯಲ್ಲಿದ್ದ ಆನಂದ್ ಸಿಂಗ್ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿ ಟಿಕೆಟ್ ಗಿಟ್ಟಿಸಿಕೊಂಡು ಗೆದ್ದಿದ್ದು ಈಗ ಹಳೇ ವಿಷಯ. ಆದರೆ ಬಿಜೆಪಿಗೆ ಸರ್ಕಾರ ರಚಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಒದಗಿಸಿಕೊಡುವಲ್ಲಿ ಆನಂದ್ ಸಿಂಗ್ ಸಮರ್ಥರು ಎಂಬುದನ್ನು ಬಲ್ಲ ಕಾಂಗ್ರೆಸ್ ನಾಯಕರು ಅವರ ಮೇಲೊಂದು ಹದ್ದಿನ ಕಣ್ಣಿಟ್ಟಿರುವುದು ಸುಳ್ಳಲ್ಲ.

ಮೇ 15 ರಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಕಾಣೆಯಾದ ಆನಂದ್ ಸಿಂಗ್ ನಂತರ ಪತ್ತೆಯಾಗಿದ್ದು ಮೇ 19 ರ ವಿಶ್ವಾಸಮತ ಪ್ರಕ್ರಿಯೆಯ ನಿಗದಿತ ಸಮಯಕ್ಕೂ ಕೆಲವೇ ಕ್ಷಣ ಮೊದಲು! ಅಲ್ಲಿಯವರೆಗೂ ಆನಂದ್ ಸಿಂಗ್ ಎಲ್ಲಿದ್ದರು, ಅವರನ್ನು ಬಿಜೆಪಿಯವರೇ ಕೂಡಿಟ್ಟಿದ್ದರೇ? ಅಥವಾ ಅವರೇ ಬಿಜೆಪಿ ಪರ ಒಂದಷ್ಟು ಶಾಸಕರನ್ನು ಕರೆತರಲು ತೆರೆಮರೆಯ ಯತ್ನ ನಡೆಸುತ್ತಿದ್ದರೆ ಎಂಬಲ್ಲಿ ಪ್ರಶ್ನೆಗಳು ನಿಗೂಢವಾಗಿಯೇ ಇವೆ.
ಇಷ್ಟು ದಿನ ಆನಂದ್ ಸಿಂಗ್ ಎಲ್ಲಿದ್ದರು ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸುತ್ತೇನೆ ಎಂದು ಸ್ವತಃ ಡಿ ಕೆ ಶಿವಕುಮಾರ್ ಹೇಳಿದ್ದರು. ಅದೇನೇ ಇದ್ದಿರಲಿ, ಯಾವತ್ತಾದರೊಂದು ದಿನ ಒಂದಷ್ಟು ಶಾಸಕರು ಗುಂಪು ಕಟ್ಟಿಕೊಂಡು ಹೊರನಡೆಯಲು ಆನಂದ್ ಸಿಂಗ್ ಸಿದ್ಧರಾಗಿಯೇ ಇದ್ದಾರೆ ಎಂಬುದನ್ನು ಬಲ್ಲ ಕಾಂಗ್ರೆಸ್ ಅವರಿಗೆ ಸಚಿವ ಸ್ಥಾನ ನೀದಲು ಚಿಂತಿಸುತ್ತಿದೆಯೇ? ಅವರನ್ನು ಕಾಂಗ್ರೆಸ್ಸಿನಲ್ಲಿಯೇ ಹಿಡಿದಿಡಲು ಇದೊಂದು ರಣತಂತ್ರವೇ? ಡಿಕೆಶಿ ಮತ್ತು ಆನಂದ್ ಸಿಂಗ್ ಭೇಟಿ ಇದೀಗ ಅಂಥದೊಂದು ಅನುಮಾನಕ್ಕೆ ಹಾದಿಮಾಡಿಕೊಟ್ಟಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications