ನಾಯಿ ಮಾಂಸ ಸಾಗಾಟ ಆರೋಪ: ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ಆಹಾರ ಇಲಾಖೆ ನೋಟಿಸ್
ಬೆಂಗಳೂರು, ಜುಲೈ 28: ಕಳಪೆ ಮಾಂಸ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಆಹಾರ ಇಲಾಖೆಯಿಂದ ತನಿಖೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಅಬ್ದುಲ್ ರಜಾಕ್ನಿಂದ ಮಾಂಸ ಪಡೆಯುತ್ತಿದ್ದ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಇಲಾಖೆ ನೋಟಿಸ್ ನೀಡಿದೆ ಎನ್ನಲಾಗಿದೆ.
ಬೆಂಗಳೂರಿಗೆ ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದು, ಕೋಲ್ಡ್ ಸ್ಟೋರೇಜ್ನಲ್ಲಿರುವ ಮತ್ತು ಅಂಗಡಿಗಳಲ್ಲಿನ ಮಾಂಸಗಳ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ. -18 ಡಿಗ್ರಿ ಸ್ಟೋರೇಜ್ನಲ್ಲಿಟ್ಟ ಮಾಂಸ ಹಾನಿಕಾರಕವಲ್ಲ. ಆದರೆ ಅದಕ್ಕೆ ಬಳಸುವ ರಾಸಾಯನಿಕ ಅಪಾಯಕಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಮಾಂಸದ ಮಾದರಿಗಳನ್ನು ಸಂಗ್ರಹಿಸುವಂತೆ ಆಹಾರ ಇಲಾಖೆ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮೊದಲ ಹಂತವಾಗಿ ಬೆಂಗಳೂರಿನ 9 ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದ್ದು, ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಸೋಮವಾರದಂದು ಆಹಾರ ಇಲಾಖೆಯ ಅಧಿಕಾರಿಯಾಗಿರುವ ಡಾ. ಜಗನ್ನಾಥ್ ಅವರ ನೇತೃತ್ವದಲ್ಲಿ ಕೂಡ ತನಿಖೆ ನಡೆಯಲಿದೆ. ಅಬ್ದುಲ್ ರಜಾಕ್ ನಗರದ ಸುಮಾರು ನೂರಕ್ಕೂ ಹೆಚ್ಚು ಹೊಟೇಲ್ ಹಾಗೂ ರೆಸ್ಟೋರೆಂಟ್ಗಳಿಗೆ ಮಾಂಸ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ.
ಇನ್ನು ರೈಲಿನಲ್ಲಿ ಮಾಂಸ ಸಾಗಾಟ ಮಾಡಿದ ಆರೋಪದ ಕಾರಣ ರೈಲ್ವೆ ಇಲಾಖೆಗೂ ಕೂಡ ಪತ್ರ ಬರೆದಿರುವ ಪೊಲೀಸರು, ಮಾಂಸ ಯಾವ ರೈಲಿನಲ್ಲಿ ಬರುತ್ತಿತ್ತು. ಯಾವ ರಾಜ್ಯದಿಂದ ಬರುತ್ತಿತ್ತು. ಪಾರ್ಸೆಲ್ ಪಡೆಯಲು ಯಾರು ಬರುತ್ತಿದ್ದರು ಎನ್ನುವ ಮಾಹಿತಿ ಕಲೆ ಹಾಕಲು ರೈಲ್ವೆ ಫ್ಲಾಟ್ ಫಾರ್ಮ್ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆ ರೈಲ್ವೆ ಇಲಾಖೆ ಬಳಿ ಮನವಿ ಮಾಡಿದೆ ಎಂದು ತಿಳಿದು ಬಂದಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications