ಬೆಂಗಳೂರು: ಶಾಲೆಗಳಲ್ಲಿ ನಕಲಿ ಪಠ್ಯಕ್ರಮ ಬೋಧನೆ, ಇಲಾಖೆ ಕ್ರಮ
ಬೆಂಗಳೂರಿನ ಹಲವು ಶಾಲೆಗಳಲ್ಲಿ ನಕಲಿ ಪಠ್ಯಕ್ರಮವನ್ನು ಮಕ್ಕಳಿಗೆ ಬೋಧಿಸುತ್ತಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ರಾಜ್ಯ ಶಿಕ್ಷಣ ಇಲಾಖೆ ಅದರ ಕಡಿವಾಣಕ್ಕೆ ಮುಂದಾಗಿದೆ.
ಬೆಂಗಳೂರು, ಫೆಬ್ರವರಿ 12: ಬೆಂಗಳೂರಿನ ಹಲವು ಶಾಲೆಗಳಲ್ಲಿ ನಕಲಿ ಪಠ್ಯಕ್ರಮವನ್ನು ಮಕ್ಕಳಿಗೆ ಬೋಧಿಸುತ್ತಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ರಾಜ್ಯ ಶಿಕ್ಷಣ ಇಲಾಖೆ ಅದರ ಕಡಿವಾಣಕ್ಕೆ ಮುಂದಾಗಿದೆ.
ಕರ್ನಾಟಕ ರಾಜ್ಯದಲ್ಲಿ ನೋಂದಾಯಿಸದ ಹಾಗೂ ನೋಂದಾಯಿತ ಎಂಬ ಎರಡು ವಿಧದ ಶಾಲೆಗಳಿವೆ. ನೋಂದಣಿ ಆಗದ ಶಾಲೆಗಳಲ್ಲಿ ಅನುಮೋದನೇ ಆಗದ ಪಠ್ಯಕ್ರಮವನ್ನು ಮಕ್ಕಳಿಗೆ ಬೋಧಿಸಲಾಗುತ್ತಿದೆ. ಹೀಗಾಗಿ ಅಂತಹ ಶಾಲೆಗಳನ್ನು ಮುಚ್ಚಬೇಕು. ಜೊತೆಗೆ ಇಲಾಖೆಯಡಿ ನೋಂದಾಯಿತ ಶಾಲೆಗಳಲ್ಲಿ ಅನುಮೋದನೆ ಆಗದ ಪಠ್ಯಕ್ರಮ ಬೋಧನೆ ಸಮಸ್ಯೆ ಪರಿಹರಿಸಿ ಅನುಮೋದಿತ ಸಿಲೆಬಸ್ ಪಾಠ ಮಾಡುವಂತೆ ಇಲಾಖೆ ಖಡಕ್ ಸೂಚನೆ ನೀಡಿದೆ.
ಈ ಕುರಿತು ಸಾರ್ವಜನಿಕರಿಗೆ ಶಾಲೆ ಪಠ್ಯಕ್ರಮ ಯಾವುದಿದೆ. ಮಕ್ಕಳು ಏನು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಲು ಇಲಾಖೆ ವೆಬ್ಸೈಟ್ನಲ್ಲಿ ಶಾಲಾ ವಿವರ ಹಾಕಲು ಸರ್ಕಾರವನ್ನು ಅನುಮತಿ ಕೇಳಲಾಗುವುದು. ಈಗಾಗಲೇ 500 ಶಾಲೆಗಳಿಗೆ ಅನುಮೋದಿತವಲ್ಲದ ಪಠ್ಯಕ್ರಮ ಬೋಧನೆಗಾಗಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿತ್ತು.

ನೋಟಿಸ್ ಜಾರಿ ಮಾಡಿದ್ದ ಪ್ರಕರಣದ ಮುಂದುವರಿದು ಇಲಾಖೆ ಖಡ್ಕ ಸಂದೇಶ ನೀಡಿದೆ. ಸರ್ಕಾರದ ಜತೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು. ರಾಜ್ಯ ಮಂಡಳಿಯನ್ನು ಹೊರತುಪಡಿಸಿ ಇತರ ಮಂಡಳಿಗಳ ಜತೆ ಸಂಯೋಜಿತವಾಗಿರದ ಶಾಲೆಗಳನ್ನು ಗುರುತಿಸಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ತಿಳಿಸಿದರು.
ಕೇವಲ ನೋಟಿಸ್ ಜಾರಿ ಮಾಡಿ ಪ್ರಯೋಜನ ಆಗಲ್ಲ. ಈ ಕಾರಣಕ್ಕೆ ಶಿಕ್ಷಣ ಇಲಾಖೆ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪ್ರತಿ ತಿಂಗಳು ಶಾಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸಲು ಅಥವಾ ಮುಚ್ಚಲು ಇಲಾಖೆಯು ನೋಟಿಸ್ ಕಳುಹಿಸುತ್ತಿದ್ದೆವೆ ಎಂದರು.

ಎಸ್ಎಸ್ಎಲ್ಸಿ ಮಂಡಳಿಯಡಿಯಲ್ಲಿ ಬರುವ ಶಾಲೆಗಳ ವಿವರ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅದೇ ರೀತಿ ಪೋಷಕರಿಗೆ ಮಕ್ಕಳು ಕಲಿಯುವ ಪಾಠದ ಮಾಹಿತಿ, ಪಾರದರ್ಶಕತೆ ಸಲುವಾಗಿ ಶಾಲೆಗಳ ವೆಬ್ಸೈಟ್ನಲ್ಲಿ ಪಠ್ಯಕ್ರಮದ ಮಾಹಿತಿ ಅಳವಡಿಕೆ ಮಾಡಲು ಸೂಚಿಸಲಾಗಿದೆ. ಪಠ್ಯಕ್ರಮಕ್ಕೆ ಅನುಮತಿ ಪಡೆದು ಸಿಬಿಎಸ್ಇ/ಐಪಿಎಸ್ಇ ಪಠ್ಯಕ್ರಮ ಬೋಧನೆ ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವ ಧೋನಿ ಗ್ಲೋಬರ್ ಶಾಲೆ ಸೇರಿದಂತೆ ನಗರದ ನೂರಾರು ಶಾಲೆಗಳಿಗೆ ನೋಟಿಸ್ ನೀಡಿದ್ದೇವೆ. ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ












Click it and Unblock the Notifications