ಬೆಂಗಳೂರು ಚುನಾವಣೆ 2023: ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಬಿಬಿಎಂಪಿಯಿಂದ ಮತದಾನ ಜಾಗೃತಿ
ಬೆಂಗಳೂರು, ಏಪ್ರಿಲ್ 12: ರಾಜ್ಯದಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಎಂದರೆ ಅದು ಬೆಂಗಳೂರು ನಗರ ಜಿಲ್ಲೆ. ಈ ಕಾರಣದಿಂದ ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾಧಿಕಾರಿಗಳು ನಿರಂತರ ಪ್ರಯತ್ನ ನಡೆಸಿದ್ದಾರೆ.
ಬಿಬಿಎಂಪಿ, ಸ್ವೀಪ್ ಕಾರ್ಯಕ್ರಮದಡಿ ORRCA ಸಹಯೋಗದೊಂದಿಗೆ ಹೆಬ್ಬಾಳ ಕ್ಷೇತ್ರದ ಜೊತೆಗೆ ಮಹಾದೇವಪುರ ವ್ಯಾಪ್ತಿಯ ಐಟಿ ಬಿಟಿ ಕಂಪನಿಗಳ ಜೊತೆ 'ಮತದಾನ ಜಾಗೃತಿ' ಕಾರ್ಯಕ್ರಮ ನಡೆಯಿತು.

ಈ ವೇಳೆ ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಮಾತನಾಡಿ, ಪ್ರಜಾಪ್ರಭುತ್ವವು ಪ್ರಜೆಗಳಿಗಾಗಿಯೇ ರಚಿತವಾಗಿದೆ. ಅದಕ್ಕಾಗಿ ನಾವೆಲ್ಲರೂ ಕೈಜೋಡಿಸಿದರೆ ಮಾತ್ರ ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಮತದಾನ ಕರ್ತವ್ಯದ ಅರಿವು ಮೂಡಿಸಿದರು.
ಈ ಬಾರಿ ಬೆಂಗಳೂರಿನಲ್ಲಿ ಕಳೆದ ವಿಧಾನಸಭಾ ಚುನಾವಣೆಗಿಂತಲೂ ಹೆಚ್ಚು ಯುವ ಮತದಾರರಿದ್ದಾರೆ. ಎಲ್ಲರೂ ತಪ್ಪದೆ ಮತದಾನ ಮಾಡುವ ಜೊತೆಗೆ ಬೇರೆಯವರಿಗೂ ತಪ್ಪದೆ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.
ನೋಟಾ ಆಯ್ಕೆ ಸಹ ಇದೆ: ಚಲಾಯಿಸಬಹುದು
ಮತದಾನ ಮಾಡಲು ಇಷ್ಟವಿಲ್ಲದವರಿಗೆ ನೋಟಾ(NOTA) ಎಂಬ ಆಯ್ಕೆ ಇದೆ. ಅದನ್ನು ಚಲಾಯಿಸಬಹುದಾಗಿದೆ. ಆದ್ದರಿಂದ ಮತದಾನದ ದಿನ ಅನ್ಯ ಕಾರ್ಯಗಳಿಗೆ ತೆರಳದೆ ಮತದಾನ ಮಾಡಲು ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಂಡರು.

ಐಟಿ-ಬಿಟಿ ಸಂಸ್ಥೆಗಳ ಸಿ.ಇ.ಒಗಳು ಮತದಾನ ಚಲಾಯಿಸುವ ಬಗ್ಗೆ ತಮ್ಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಬೇಕು. ನಮ್ಮ ಬೆಂಗಳೂರು ನಗರವು ಎಲ್ಲಾ ಕ್ರೇತ್ರದಲ್ಲೂ ಮುಂದಿದ್ದು, ಇನ್ನಷ್ಟು ಉತ್ತಮ ಸ್ಥಾನಕ್ಕೇರಬೇಕಾದರೆ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸುವುದು ಅತ್ಯಗತ್ಯ. ಈ ಸಂಬಂಧ ತಾವುಗಳು ತಮ್ಮ ಸಹದ್ಯೋಗಿಗಳಿಗೆ ಮತ ಚಾಲಾಯಿಸಲು ಹೇಳಬೇಕು ಎಂದು ತಿಳಿಸಿದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರ: ಬಿಬಿಎಂಪಿಯಿಂದ ಜಾಗೃತಿ ಜಾಥ
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ನಾಗೇಶೆಟ್ಟಿ ಹಳ್ಳಿ ಬಸ್ ನಿಲ್ದಾಣದಿಂದ ಸಂಜಯ್ ನಗರ ಬಸ್ ನಿಲ್ದಾಣದವರೆಗೆ ನಡೆದ ಮತದಾನ ಜಾಗೃತಿ ಜಾಥಾಗೆ ವಲಯ ಆಯುಕ್ತರು ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಪಿ.ಎನ್.ರವೀಂದ್ರ ರವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ಮತದಾನದ ಪ್ರಾಮುಖ್ಯತೆಯನ್ನು ಅರಿತು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜಾಗೃತಿ ನಾಟಕಗಳನ್ನು ಅಯೋಜಿಸಲಾಗುತ್ತಿದೆ ಎಂದರು.
ಮೇ 10ರಂದು ಮತದಾನದ ದಿನ ನಿಮ್ಮ ಕುಟುಂದಲ್ಲಿರುವವರು ಹಾಗೂ ಸ್ನೇಹಿತರಲ್ಲರೂ ಮತನಾದ ಮಾಡುವಂತೆ ಪ್ರೇರೇಪಿಸಬೇಕು. ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಮತದಾನ ಮಾಡಲು ಮನವಿ ಮಾಡಿದರು.
ಜಾಥಾ ಕಾರ್ಯಕ್ರಮದಲ್ಲಿ ಬಿಬಿಎಂಪಿ ಅಧಿಕಾರಿಗಳಾದ ಶ್ರೀನಿವಾಸ ಮೂರ್ತಿ, ಅಮೃತ್ ರಾಜ್, ಕಂದಾಯ ಅಧಿಕಾರಿಗಳು, ಪೌರಕಾರ್ಮಿಕರಕು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಜಂಟಿ ಆಯುಕ್ತ ಲಿಂಗಮೂರ್ತಿ, ನಮ್ಮ ಬೆಂಗಳೂರು ಐಕಾನ್ ಆದ ಮೋಹನ್ ಕುಮಾರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications