Chickpet: ಕ್ಷೇತ್ರದಲ್ಲಿ ಎಎಪಿ ಬ್ರಿಜೇಶ್ ಕಾಳಪ್ಪರಿಂದ ಭರ್ಜರಿ ರೋಡ್ ಶೋ, ಮುಖ್ಯಮಂತ್ರಿ ಚಂದ್ರು ಸಾಥ್
ಬೆಂಗಳೂರು, ಏಪ್ರಿಲ್ 14: ಇತ್ತೀಚೆಗಷ್ಟೆ ರಾಷ್ಟ್ರೀಯ ಸ್ಥಾನಮಾನ ಪಡೆದ ಆಮ್ ಆದ್ಮಿ ಪಕ್ಷ (ಎಎಪಿ) ಬೆಂಗಳೂರಿನಾದ್ಯಂತ ಅಬ್ಬರದ ಪ್ರಚಾರ ಮತ್ತು ಬೈಕ್ ರ್ಯಾಲಿ ಆರಂಭಿಸಿದೆ. ತಮ್ಮದೇ ಆದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮತಯಾಚನೆ ಮಾಡುತ್ತಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿರುವ ಬ್ರಿಜೇಶ್ ಕಾಳಪ್ಪ ಅವರು ಶುಕ್ರವಾರ ಬೃಹತ್ ರೋಡ್ ಶೋ ನಡೆಸಿದರು. ಜೊತೆಗೆ ನಗರದ ಸಜ್ಜನ್ ರಾವ್ ವೃತ್ತದಲ್ಲಿ ನೂತನ ಕಚೇರಿಯನ್ನು ಬ್ರಿಜೇಶ್ ಕಾಳಪ್ಪ ಹಾಗೂ ಅಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ಮುಖ್ಯಮಂತ್ರಿ ಚಂದ್ರು ಅವರು ಉದ್ಘಾಟನೆ ಮಾಡಿದರು.

ಗುರುವಾರ ಬೆಳಗ್ಗೆ 10ಗಂಟೆಗೆ ಆರಂಭವಾದ ಎಎಪಿ ಅಭ್ಯರ್ಥಿಯಾಗಿರುವ ಬ್ರಿಜೇಶ್ ಕಾಳಪ್ಪ ನೇತೃತ್ವದ ರ್ಯಾಲಿ ನಗರದ ಜೆಸಿ ರಸ್ತೆ, ಟೌನ್ ಹಾಲ್, ಕಲಾಸಿಪಾಳ್ಯ ಬಸ್ ನಿಲ್ದಾಣ, ಕಲಾಸಿಪಾಳ್ಯ ಪೊಲೀಸ್ ಠಾಣೆ ರಸ್ತೆ ಸೇರಿದಂತೆ ನಗರದ ಹಲವು ಏರಿಯಾಗಳಲ್ಲಿ ಸಂಚರಿಸಿತು.
ರ್ಯಾಲಿಯಲ್ಲಿ ನೂರಾರು ಕಾರ್ಯಕರ್ತರು ದ್ವಿಚಕ್ರ ವಾಹನ, ಬೊಲೆರೋ ವಾಹನದ ಮೂಲಕ ಸಂಚರಿಸಿದರು. ರಸ್ತೆಯುದ್ಧಕ್ಕು ಎಎಪಿ ಭಾವುಟಗಳು ರಾರಾಜಿಸಿದವು. ಈ ವೇಳೆ ಚಿಕ್ಕಪೇಟೆ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಕಾಳಪ್ಪ, ಅಮ್ ಆಪ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಮತದಾರರಲ್ಲಿ ಮತಯಾಚನೆ ಮಾಡಿದರು.
ಚಿಕ್ಕಪೇಟೆ ಪೋಸ್ಟಿಂಗ್ಗೆ ಕೋಟಿ ಕೊಡಬೇಕು: ಆರೋಪ
ಈ ಸಂದರ್ಭದಲ್ಲಿ ಮಾತನಾಡಿದ, ಚಿಕ್ಕಪೇಟೆ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಕಾಳಪ್ಪ, ಚಿಕ್ಕಪೇಟೆ ಪ್ರದೇಶ ಯಾಕೆ ಹಿನಾಯವಾಗಿ ಇದೆ ಎಂದು ನಾವೇಲ್ಲರು ಯೋಚಿಸಬೇಕಿದೆ. ಹಾಗೆಯೇ ವಿಶ್ವೇಶ್ವರಪುರಂ ಅನ್ನು ಸರ್ ಎಂ ವಿಶ್ವೇಶ್ವರಯ್ಯ ಅವರು ನಿರ್ಮಾಣ ಮಾಡಿ 100 ವರ್ಷವಾಗಿದೆ. ಬಸವನಗುಡಿ ಅಂತ ಹೆಸರಿಟ್ಟಿದ್ದು ಕೆಂಪೇಗೌಡರ ಕಾಲದಲ್ಲಿ. ಚಿಕ್ಕಪೇಟೆಗೆ ಸೇರುವ ಮಿನರ್ವ ಸರ್ಕಲ್ ಮೊದಲ ವಿದ್ಯುತ್ ಲೈಟ್ ಅನ್ನು ಅಳವಡಿಸಲಾಗಿತ್ತು ಎಂದು ಕ್ಷೇತ್ರದ ವಾಸ್ತವ ಅಂಶವನ್ನು ತಿಳಿಸಿದ್ದರು.

ಐತಿಹಾಸಕ ಕರಗ ನಡೆಯೋದು ಈ ಚಿಕ್ಕಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿ. ಚಿಕ್ಕಪೇಟೆ ಸಾಕಷ್ಟು ಐತಿಹ್ಯವಿದೆ. ಆದರೆ ಇಂದಿನ ಸನ್ನಿವೇಶದಲ್ಲಿ ಎಲ್ಲಿ ನೋಡಿದರು ಭ್ರಷ್ಟಚಾರ ತಾಂಡವವಾಡುತ್ತಿದೆ. ಚಿಕ್ಕಪೇಟೆಗೆ ಒಂದು ಪೋಸ್ಟಿಂಗ್ ಆಗಬೇಕಾದರು ಕೋಟಿಗಟ್ಟಲೇ ಹಣ ಸುರಿಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಈ ಕ್ಷೇತ್ರದ ಅಭಿವೃದ್ಧಿಗೆ ಬಂದ ಹಣದಿಂದ ನುಂಗಿ ಹಾಕಿ ಕೊಳ್ಳೆ ಹೊಡೆಯುತ್ತಿದ್ದಾರೆ. ಹಾಗಾಗಿ ಈ ಭಾರೀ ಒಂದು ಬದಲಾವಣೆಯನ್ನ ತರಲು ನಾವು ಬಂದಿದ್ದೇವೆ. ನಮ್ಮ ಆಮ್ ಆದ್ಮಿ ಪಕ್ಷವನ್ನು ಬೆಂಬಲಿ ಮತಹಾಕಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.
ಈ ಬೃಹತ್ ಪ್ರಚಾರ ಮೇರವಣಿಯಲ್ಲಿ ರಾಜ್ಯದ ಮಹಿಳಾ ಕಾರ್ಯದರ್ಶಿ ಸುಷ್ಮಾ ವೀರ್ ಸೇರಿದಂತೆ ಅಮ್ ಆದ್ಮಿ ಪಕ್ಷದ ಮುಖಂಡರು ಸೇರಿದಂತೆ ಅಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಪ್ರಚಾರ ವೇಳೆ ಎಎಪಿ ಕಾರ್ಯಕರ್ತ ಮೇಲೆ ಹಲ್ಲೆ
ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.
ಸಿ.ವಿ.ರಾಮನ್ ನಗರದ ಶಾಸಕ ಬಿಜೆಪಿಯ ಎಸ್.ರಘು ಅವರು ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕ್ಷೇತ್ರದ ಎಎಪಿ ಅಭ್ಯರ್ಥಿಗ ಮೋಹನ್ ದಾಸರಿ ಅವರು ಆರೋಪಿಸಿದ್ದಾರೆ. ಘಟನೆಯಿಂದ ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಸುಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಚಾರದ ವೇಳೆ ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡಿದ್ದಾರೆ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ











Click it and Unblock the Notifications