ಬೆಂಗಳೂರಿಗರೇ ಗಮನಿಸಿ: ಡಿಸೆಂಬರ್ 17ರಂದು ಇಡೀ ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ, ಎಲ್ಲೆಲ್ಲಿ?
Water Supply Cut in Bengaluru: ರಾಜಧಾನಿ ಬೆಂಗಳೂರು ನಗರದ ಕೆಲವು ಭಾಗಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕಾವೇರಿ 5ನೇ ಹಂತದ ನೀರು ಸರಬರಾಜು ಪೈಪಿನಲ್ಲಿ ಸೋರಿಕೆ ಉಂಟಾಗಿದೆ. ಈ ಸಮಸ್ಯೆಯನ್ನು ತುರ್ತು ದುರಸ್ತಿ ಮಾಡಲು ಬೆಂಗಳೂರು ನೀರು ಸಬರಾಜು ಮತ್ತು ಒಳಚರಂಡಿ ಜಲಮಂಡಳಿ (BWSSB) ಮುಂದಾಗಿದೆ. ಹೀಗಾಗಿ ಡಿಸೆಂಬರ್ 17ರಂದು ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಂಗಳವಾರ ತಿಳಿಸಿದ್ದಾರೆ. ಯಾವೆಲ್ಲ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ? ಅನ್ನುವ ವಿವರ ಇಲ್ಲಿದೆ.
ಕಾವೇರಿ 5ನೇ ಹಂತದ 3 ಸಾವಿರ ಎಂಎಂ ವ್ಯಾಸದ ಟ್ರಾನ್ಸ್ ಮಿಷನ್ ಲೈನ್ (Transmission line) ನ ಸ್ಕವರ್ ವಾಲ್ವ್ ಹಾನಿಯಾಗಿ ನೀರು ಸೋರಿ ಪೋಲಾಗುತ್ತಿದೆ. ಈ ಸೋರಿಕೆಯನ್ನು ತಡೆಗಟ್ಟಿ ಬೆಂಗಳೂರು ಮಹಾನಗರಕ್ಕೆ ಸುಗಮ ಮತ್ತು ಸುಲಲಿತವಾಗಿ ನೀರು ಸರಬರಾಜು ಮಾಡಬೇಕಿದೆ. ಆದ್ದರಿಂದ ಡಿಸೆಂಬರ್ 17ರಂದು ಬುಧವಾರ) ಬೆಳಗ್ಗೆ 7ರಿಂದ ರಾತ್ರಿ 10ರವರೆಗೆ ಕಾವೇರಿ 5ನೇ ಹಂತದ ನೀರು ಸರಬರಾಜು ಆಗುವ ಪ್ರದೇಶಗಳಲ್ಲಿ ನೀರಿನ ವ್ಯತ್ಯಯವಾಗಲಿದೆ ಎಂದು ಹೇಳಿದರು.

ಯಾವೆಲ್ಲ ಪ್ರದೇಶಗಳಲ್ಲಿ ನೀರು ಪೂರೈಕೆ ಆಗಲ್ಲ?
ನಗರದ ಅನಂತಪುರ, ದೊಡ್ಡಬೆಟ್ಟಹಳ್ಳಿ, ಚಿಕ್ಕಬೆಟ್ಟಹಳ್ಳಿ ಹಾರೋಹಳ್ಳಿ, ಮಂಚೇನಹಳ್ಳಿ, ಕಟ್ಟಿಗೇನಹಳ್ಳಿ, ಶ್ರೀನಿವಾಸಪುರ, ಬೆಳ್ಳಳ್ಳಿ, ತಿರುಮೆನಹಳ್ಳಿ, ಚೊಕ್ಕನಹಳ್ಳಿ, ದಾಸರಹಳ್ಳಿ, ಕೆಂಚನಹಳ್ಳಿ, ಗೋವಿಂದಪುರ, ವಾಸುದೇವಪುರ, ರಾಚೇನಹಳ್ಳಿ, ಥಣೀಸಂದ್ರ, ಚಳ್ಳೆಕೇರೆ, ಹೊರಮಾವು, ಆಗರ, ಅಮಾನಿ ಭೈರತಿಖಾನೆ, ಗೆದ್ದಲಹಳ್ಳಿ, ಕೊತ್ತನೂರು, ನಾರಾಯಣಪುರ, ಬಳಗೆರೆ, ಬೆಳ್ಳಂದೂರು ಅಮಾನಿಕೆರೆ, ಬೆಳತ್ತೂರು, ಕೊತ್ತನೂರು, ಎನ್.ನಾಗೇನಹಳ್ಳಿ, ಕೈಲಾಸನ ಹಳ್ಳಿ, ಭೈರತಿ, ಬಿಳಿಶಿವಹಳ್ಳಿ, ಚೆನ್ನಸಂದ್ರ, ದೇವರಬೀಸನಹಳ್ಳಿಯಲ್ಲಿ ಕುಡಿಯುವ ನೀರು ಬರುವುದಿಲ್ಲ.
ಮಾತ್ರವಲ್ಲದೇ ಗುಂಜೂರು, ಹಗದೂರು, ಕಾಡಬೀಸನಹಳ್ಳಿ, ಕಾಯಮ್ಮನ ಅಗ್ರಹಾರ, ಕಾಡೋಗೋಡಿ ಪ್ಲಾಂಟೆಸನ್ ಕುಂಬೇನ ಅಗ್ರಹಾರ, ಸೋರಹುಣಸೆ, ತುಬರಹಳ್ಳಿ, ವರ್ತೂರು, ಕಲ್ಕರೆ, ಹೋರಮಾವು. ಕೆ. ಚೆನ್ನಸಂದ್ರ, ವಾರಣಾಸಿ, ವಸಂತಪುರ, ಉಲ್ಲಾಳ ಸೋಣ್ಣೆನಹಳ್ಳಿ, ನಾಗೋಂಡಹಳ್ಳಿ, ಪಣತ್ತೂರು, ರಾಮಗೊಂಡನಹಳ್ಳಿ, ಸಿದ್ದಾಪುರ, ಗಾಣಾಕಲ್ಲು, ಹೆಮ್ಮಿಗೆಪುರ, ಸೋಮಪುರ, ವಾರಸಂದ್ರ, ಲಿಂಗದೀರನಹಳ್ಳಿ, ಹೊಸಹಳ್ಳಿ, ಅರೇಹಳ್ಳಿ, ವಡ್ಡರಪಾಳ್ಯ ಉತ್ತರಹಳ್ಳಿ, ಸುಬ್ರಮಣ್ಯಪುರ.
ಬೇಗೂರು, ಬೆಳ್ಳಂದೂರು, ಚಂದ್ರಶೇಖರಪುರ, ದೊಡ್ಡಕಲ್ಲಸಂದ್ರ, ಗೊಲ್ಲಹಳ್ಳಿ, ಗೊಟ್ಟಿಗೆರೆ, ಗುಬ್ಬಲಾಳ, ತುರಹಳ್ಳಿ, ದೊಡ್ಡಬಿದರಕಲ್ಲು, ಕಮ್ಮನಹಳ್ಳಿ, ಕಸವನಹಳ್ಳಿ, ಗಿಡದಕೋನೆನಹಳ್ಳಿ, ಆಲಹಳ್ಳಿ, ಅಂಬಲಿಪುರ, ಅಂಜನಾಪುರ, ಬಸವನಪುರ, ಅರಳೂರು ಜುನಸಂದ್ರ, ಕೈಕೋಂಡನಹಳ್ಳಿ, ಕಾಳೇನಾ ಅಗ್ರಹಾರ, ಕಂಬತ್ತಹಳ್ಳಿ, ತಿಪ್ಪಸಂದ್ರ, ವಾಜರಹಳ್ಳಿ, ಯಲೇನಹಳ್ಳಿ, ಭರತೇನ ಅಗ್ರಹಾರ, ಬೋಗನಹಳ್ಳಿ, ಚಿಕ್ಕಬೆಳ್ಳಂದೂರು, ಚಿಕ್ಕತೇಗೂರು, ದೊಡ್ಡಕನ್ನಹಳ್ಳಿ, ದೊಡ್ಡತೆಗೂರು, ನಾಗನಾತಪುರ, ಅಬ್ಬಿಗೇರೆ, ಚಿಕ್ಕಸಂದ್ರ, ಶೆಟ್ಟಹಳ್ಳಿ, ಕರಿಹೋಬನಹಳ್ಳಿ, ಅಂದ್ರಹಳ್ಳಿ, ಮ್ಯಾಡರಹಳ್ಳಿ, ಕೂಡಲು, ಪರಪ್ಪನ ಅಗ್ರಹಾರ, ಪಿಳ್ಳಗಾನಹಳ್ಳಿ, ರಘುವನಹಳ್ಳಿ, ತಲಘಟ್ಟಪುರ, ಲಿಂಗಧೀರನಹಳ್ಳಿ ಬಿ, ಹೆರೋಹಳ್ಳಿ, ಹೊಸಹಳ್ಳಿಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ಜಲಮಂಡಳಿ ಮಾಹಿತಿ ನೀಡಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications