Bengaluru vehicles problem: ಬೆಂಗಳೂರಲ್ಲಿ ಪೊಲೀಸ್ ಇಲಾಖೆ ನಿಲ್ಲಿಸಿದ ವಾಹನಗಳಿಂದ ಸಮಸ್ಯೆ: ತುಷಾರ್ ಗಿರಿನಾಥ್ ಹೇಳಿದ್ದೇನು
Bengaluru vehicles problem: ಬೆಂಗಳೂರಿನ ವಿವಿಧ ಭಾಗದಲ್ಲಿ ಪೊಲೀಸ್ ಇಲಾಖೆಯಿಂದ ನಿಲ್ಲಿಸಿರುವ ವಾಹನಗಳಿಂದ ಸಮಸ್ಯೆ ಆಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಂಗಳೂರಿನ ನಿವಾಸಿಗಳು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಾರ್ಯಕ್ರಮ ಶುಕ್ರವಾರ ನಡೆದಿದೆ. ಈ ಸಂದರ್ಭದಲ್ಲಿ ಗಾಂಧಿನಗರದ ಸುಭಾಷ್ ನಗರದ ಹತ್ತಿರ ಬರುವ ರೈಲ್ವೆ ಅಪ್ರೋಚ್ ರಸ್ತೆ(ಮಂತ್ರಿ ಮಾಲ್ ಹತ್ತಿರ) ವಾಹನಗಳನ್ನು ನಿಲ್ಲಿಸಿರುವ ಬಗ್ಗೆ ದೂರು ಕೇಳಿ ಬಂದಿದೆ. ಸಾರ್ವಜನಿಕರು ಪೊಲೀಸರು ನಿಲ್ಲಿಸಿರುವ ವಾಹನಗಳಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಕೆಲವು ಭಾಗದಲ್ಲಿ ಟ್ರಾಫಿಕ್ ಪೊಲೀಸರು ವಶಪಡಿಸಿಕೊಂಡಿರುವ ಹಾಗೂ ವಿವಿಧ ಹಂತದಲ್ಲಿ ಕೇಸ್ ನಡೆಯುತ್ತಿರುವ ವಾಹನಗಳನ್ನು ನಿಲ್ಲಿಸಲಾಗಿದೆ. ಈ ರೀತಿ ನಿಲ್ಲಿಸಿರುವ ವಾಹನಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಶುಕ್ರವಾರ ಬೆಂಗಳೂರಿನ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆದಿದ್ದು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಯಾದ ಮುರಳಿ ಎನ್ನುವವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಷ್ ನಗರ ವ್ಯಾಪ್ತಿಯ ರೈಲ್ವೆ ಅಪ್ರೋಚ್ ರಸ್ತೆ(ಮಂತ್ರಿ ಮಾಲ್ ಹತ್ತಿರ) ಹತ್ತಿರ ಸುಮಾರು 5 ಎಕರೆ ಪ್ರದೇಶದ ಜಕ್ಕರಾಯನ ಕೆರೆ ಆಟದ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ 6000ಕ್ಕೂ ಹೆಚ್ಚು ಅನಾಥ ವಾಹನಗಳನ್ನು ನಿಲ್ಲಿಸಿರುವ ಬಗ್ಗೆ ದೂರಿದ್ದಾರೆ.

ಅಲ್ಲದೇ ಈ ಭಾಗದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದೆ ಇರುವುದರಿಂದ ಅಕ್ಕ-ಪಕ್ಕದ ಮನೆಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಅದನ್ನು ಪಾಲಿಕೆ ವಶಕ್ಕೆ ಪಡೆದು ಇರುವ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. ಇನ್ನು ಸುಭಾಷ್ ನಗರ ರೈಲ್ವೆ ಅಪ್ರೋಚ್ ರಸ್ತೆ ಬಳಿ ಜಕ್ಕರಾಯನ ಕೆರೆ ಆಟದ ಮೈದಾನದಲ್ಲಿ 2 ಎರಡನೇ ಹಂತದ ಕಸ (ಘನತ್ಯಾಜ್ಯ) ವರ್ಗಾವಣೆ ಘಟಕಗಳನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಲಯ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಈ ಮೂಲಕ ಈ ಭಾಗದಲ್ಲಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಗಿದೆ.
ಜಕ್ಕರಾಯನ ಕೆರೆ ಆಟದ ಮೈದಾನದ ಬಗ್ಗೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರು ಪೊಲೀಸ್ ಇಲಾಖೆಯ ಜೊತೆ ಮಾತನಾಡಿ, ಮೈದಾನದಲ್ಲಿ ನಿಲ್ಲಿಸಿರುವ ಎಲ್ಲಾ ವಾಹನಗಳನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಗಾಂಧಿನಗರ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಖವಾಗಿ ದ್ವಿತೀಯ ಹಂತದ ಟ್ರಾನ್ಸ್ಫರ್ ಸ್ಟೇಷನ್ ನಿರ್ಮಾಣ ಮಾಡಬೇಕು ಎಂದಿದ್ದಾರೆ. ಅಲ್ಲದೇ ಗಾರ್ಡನ್ ನಿರ್ಮಾಣ ಮಾಡುವುದಕ್ಕೆ ಪ್ರಸ್ತಾವನೆ ಕಳುಹಿಸಿ ಎಂದಿದ್ದಾರೆ.

67 ದೂರುಗಳ ಸ್ವೀಕಾರ: ಈ ವಲಯದಲ್ಲಿ ಶುಕ್ರವಾರ ಬಿಬಿಎಂಪಿಯು ವಿಶೇಷ ಕಾರ್ಯಕ್ರಮವನ್ನು ನಡೆಸಿದ್ದು ಸಾರ್ವಜನಿಕರಿಂದ 67 ದೂರುಗಳನ್ನು ಸ್ವೀಕರಿಸಿದೆ. ಈ ದೂರುಗಳಿಗೆ ಸಂಬಂಧಿಸಿದಂತೆ ಆಯಾ ಸಂಬಂಧಪಟ್ಟ ಅಧಿಕಾರಿಗಳು ಕಾಲಮಿತಿಯೊಳಗಾಗಿ ಸಮಸ್ಯೆ ಬಗೆಹರಿಸಲು ನಿರ್ದೇಶನ ನೀಡಿದ್ದಾರೆ. ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ಮಾಡುವುದನ್ನು ತೆರವುಗೊಳಿಸಲಾಗಿದೆ. ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲು ಮನವಿ ಮಾಡಿದ್ದಕ್ಕೆ ಉತ್ತರಿಸಿದ ಅವರು, ವ್ಯಾಪಾರ ವಲಯಗಳಲ್ಲದ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿಲ್ಲ. ಪಾಲಿಕೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತ್ಯೇಖವಾಗಿ ವೆಂಡಿಂಗ್ ಜೋನ್ಗಳನ್ನು ಗುರುತಿಸುವ ಕೆಲಸ ಆಗುತ್ತಿದೆ. ಶೀಘ್ರ ಸಮೀಕ್ಷೆ ನಡೆಸಿ ವೆಂಡಿಂಗ್ ಜೋನ್ಗಳನ್ನು ಗುರುತಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಒಂಟಿ ಮನಗೆಳ ಯೋಜನೆಯಡಿ ಅರ್ಧಕ್ಕೆ ನಿಂತಿರುವ ಒಂಟಿ ಮನೆಗಳನ್ನು ಸಮೀಕ್ಷೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ. ಇದನ್ನು ಜಿಪಿಎಸ್ ಸಹಿತ ಛಾಯಾಚಿತ್ರಗಳನ್ನು ತೆಗೆದು ಪಟ್ಟಿ ಸಿದ್ಧಪಡಿಸಬೇಕು. ಅನಂತರ ಅರ್ಧಕ್ಕೆ ನಿಂತಿರುವ ಒಂಟಿ ಮನೆಗಳಿಗೆ ಬಾಕಿ ನೀಡಬೇಕಿರುವ ಅನುದಾನವನ್ನು ಕೂಡಲೇ ನೀಡುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಕೆ.ಆರ್ ಮಾರುಕಟ್ಟೆ ಕಾಂಪ್ಲೆಕ್ಸ್ ಮುಖ್ಯದ್ವಾರದ ಬಳಿಯಿರುವ ರಾಜಕಾಲುವೆ ಮೇಲೆ ಅಂಗಡಿ ನಿರ್ಮಿಸಲಾಗಿದೆ. ಇದರಿಂದ ಸಾರ್ವಜನಿಕರ ಓಡಾಟ ಹಾಗೂ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಅದನ್ನು ಬಗೆಹರಲಿಸಲು ಸಾರ್ವಜನಿಕರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಇದಕ್ಕೆ ವಲಯ ಮುಖ್ಯ ಎಂಜಿನಿಯರ್ ಹಾಗೂ ರಾಜಕಾಲುವೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸ್ಥಳ ಪರಿಶೀಲಿಸಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲು ನಿರ್ದೇಶನ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications