Bengaluru Power Cut: ನವೆಂಬರ್ 10 ರಿಂದ 12ರ ತನಕ ವಿದ್ಯುತ್ ಕಟ್, ಸಮಯ-ಪ್ರದೇಶಗಳ ವಿವರ
ಬೆಂಗಳೂರು, ನವೆಂಬರ್ 09: ಸಿಲಿಕಾನ್ ಸಿಟಿ ಬೆಂಗೂರಿನಲ್ಲಿ ನಾಳೆ ಭಾನುವಾರ ನವೆಂಬರ್ 10ರಿಂದ ಮೂರು ದಿನಗಳ ಕಾಲ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು' ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ' (BESCOM) ಮಾಹಿತಿ ನೀಡಿದೆ. ನಿಮ್ಮ ಬಡಾವಣೆಗಳಲ್ಲಿ ಯಾವಾಗ ವಿದ್ಯುತ್ ಕಡಿತಗೊಳ್ಳಲಿದೆ, ಪ್ರದೇಶಗಳು ಹಾಗೂ ಸಮಯದ ಮಾಹಿತಿ ಇಲ್ಲಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ಮತ್ತು ವಿತರಣೆ ನಿಗಮ ಕಂಪನಿ (KPTCL) ವ್ಯಾಪ್ತಿಯ ಬೆಸ್ಕಾಂ ವಿಭಾಗದಲ್ಲಿ ಬರುವ ಪೀಣ್ಯ ಉಪವಿಭಾಗದಲ್ಲಿ ಭಾನುವಾರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ನಗರದ ಕೆಲವು ಬಡಾವಣೆಗಳಲ್ಲಿ ಬೆಳಗ್ಗೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನವೆಂಬರ್ 10ರಿಂದ ನವೆಂಬರ್ 12ರವರೆಗೆ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 03:30 ಗಂಟೆವರೆಗೆ ಕೆಲವು ಪ್ರದೇಶಗಳಲ್ಲಿ ಸಂಜೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ.
ವಿದ್ಯುತ್ ಕಡಿದ ಪ್ರದೇಶಗಳ ವಿವರ
ನಾಳೆ ನವೆಂಬರ್ 10ರಂದು ಪೀಣ್ಯ ಇಸ್ರೋ ಕಚೇರಿಯಲ್ಲಿ (ISRO) ವಿದ್ಯುತ್ ಕಡಿತಗೊಳ್ಳಲಿದೆ. ಇದರೊಂದಿಗೆ ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಬಡಾವಣೆ, ಎಸ್ಎಂ ರಸ್ತೆ, ಕೆಂಪಯ್ಯ ಬಡಾವಣೆ, ಜಿ.ಜಿ ಪಾಳ್ಯ, ನಾರಾಯಣಪುರ, ಎನ್.ಟಿ.ಟಿ.ಎಫ್ ವೃತ್ತ, ಗಣಪತಿನಗರ ಮತ್ತು ಪೊಲೀಸ್ ಠಾಣೆ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಆಕಾಶ್ ಚಿತ್ರಮಂದಿರ ರಸ್ತೆ, ವಿ.ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಬಡಾವಣೆ ಸೇರಿದಂತೆ ವಿವಿಧೆಡೆ ಭಾನುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ನವೆಂಬರ್ 11, 12 ರಂದು ವಿವಿಧೆಡೆ ಕರೆಂಟ್ ಕಟ್
ಇನ್ನೂ ಬೆಂಗಳೂರು ಹೊರತುಪಡಿಸಿದರೆ, ನವೆಂಬರ್ 11 ಹಾಗೂ ನವೆಂಬರ್ 12ರಂದು ಚಿಂತಾಮಣಿ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ, ವೈ ಹುಣಸೆಹಳ್ಳಿ, ಪಲಿಚೆರ್ಲು, ದಿಬ್ಬೂರಹಳ್ಳಿ, ಶಿಡ್ಲಘಟ್ಟ ವಿದ್ಯುತ್ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳಲಿದೆ.
ಅದೇ ರೀತಿ ವಿಜಯಪುರ ಪಟ್ಟಣ, ಯಲುವಹಳ್ಳಿ, ಗುರಪ್ಪನಮಠ, ಮಿತ್ತನಹಳ್ಳಿ, ಕೋಲಾರ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications