Get Updates
Get notified of breaking news, exclusive insights, and must-see stories!

ಗಮನಿಸಿ: ಬೆಂಗಳೂರಿನ ವಿವಿಧೆಡೆ ಸೆ.23ರಂದು 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು, ಸೆಪ್ಟಂಬರ್ 20: ಬೆಂಗಳೂರು ಜಲಮಂಡಳಿಯು ತಾತಗುಣಿ 220 ಕೆ.ವಿ. ವಿದ್ಯುತ್‌ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ (Circuit Breaker) ಮತ್ತು ಕಲೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ, ಪರೀಕ್ಷೆ ಕಾರ್ಯ ನಡೆಯಲಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಕಾಮಗಾರಿ ಕೈಗತ್ತಿಕೊಳ್ಳಲಿರುವ ಸಂಬಂಧ ಸೆಪ್ಟಂಬರ್ 23ರಂದು ಬೆಂಗಳೂರಿನ ವಿವಿಧಡೆ ಕುಡಿಯುವ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿಳಿಸಿದೆ.

water-shut-down-on-septermber-23rd

ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಕಾರಣಕ್ಕೆ ಸೆಪ್ಟಂಬರ್ 23ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 2 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಆದ್ದರಿಂದ ಬೆಂಗಳೂರಿನ ನಾಗರಿಕರು/ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವ ಜೊತೆಗೆ ಅಗತ್ಯ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಪ್ರಕಟಣೆಯಲ್ಲಿ ಕೋರಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+