ರೆಸ್ಟೋರೆಂಟ್ ಗಳ ಪರಿಶೀಲನೆಗೆ ಅಗ್ನಿ ಶಾಮಕ ಇಲಾಖೆ ಸೂಚನೆ
ಬೆಂಗಳೂರು, ಡಿಸೆಂಬರ್ 30 : ಮುಂಬೈನ ಕಮಲ ಮಿಲ್ಸ್ ಕಟ್ಟಡದ ಮೇಲಿನ ಪಬ್ ನಲ್ಲಿ ನಡೆದ ಅಗ್ನಿ ದುರಂತದ ನಂತರ ಎಚ್ಚೆತ್ತ ರಾಜ್ಯ ಅಗ್ನಿಶಾಮಕ ಇಲಾಖೆ, ಬೆಂಗಳೂರಿನ ಬಹುಮಹಡಿ ಕಟ್ಟಡಗಳ ಮೇಲಿರುವ ಓಪನ್ ಪಬ್, ರೆಸ್ಟೋರೆಂಟ್ ಗಳ ಪರಿಶೀಲನೆಗೆ ಮುಂದಾಗಿದೆ.
ನಗರದ ಬಹುಮಹಡಿ ಕಟ್ಟಡಗಳ ಮೇಲೆ ಹಲವು ಓಪನ್ ರೆಸ್ಟೋರೆಂಟ್ ಗಳು, ಪಬ್ ಗಳು ಕಾರ್ಯ ನಿರ್ವಹಿಸುತ್ತಿದ್ದು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಾಣಿಜ್ಯ ಕೇಂದ್ರಗಳಿಗೆ ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿರುವ ಬಹುಮಹಡಿಗಳಲ್ಲಿರುವ ತೆರೆದ ಪಬ್ ರೆಸ್ಟೋರೆಂಟ್ ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಪರಿಶೀಲನೆ ನಡೆಸಬೇಕು. ಅಗ್ನಿ ಸುರಕ್ಷತಾ ಕ್ರಮ ಇಲ್ಲದಿದ್ದರೆ ನೋಟಿಸ್ ನೀಡಿ ಸುರಕ್ಷಿತಾ ಕ್ರಮ ಪಾಲಿಸುವಂತೆ ತಿಳಿಸಿ ಇಲ್ಲದಿದ್ದರೆ ಕ್ರಮ ಜರುಗಿಸಿ ಎಂದು ಅಗ್ನಿಶಾಮಕ ಇಲಾಖೆ ಮಹಾನಿರ್ದೇಶಕ ಎಂ.ಎನ್, ರೆಡ್ಡಿ, ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ವೈಟ್ ಫೀಲ್ಡ್ ನಲ್ಲಿರುವ ವರ್ಜೀನಿಯಾ ಮಾಲ್ ಮಹಡಿ ಮೇಲೆ ಅಗ್ನಿ ಸುರಕ್ಷತಾ ಕ್ರಮ ಉಲ್ಲಂಘಿಸಿ ರೆಸ್ಟೋರೆಂಟ್ ಹಾಗೂ ಇನ್ನಿತರೆ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಂಡು ಮುಂದಾಗಬಹುದಾದ ಅನಾಹುತಗಳನ್ನು ತಡೆಯಿರಿ ಎಂದು ಎಂ.ಎನ್. ರೆಡ್ಡಿಯವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇಂದಿರಾನಗರ ೧೦೦ ಅಡಿ ರಸ್ತೆಯಲ್ಲಿರುವ ಹಲವು ಪಬ್ ಗಳಲ್ಲಿ ತುರ್ತು ಅಗ್ನಿ ನಿರ್ಗಮನ ದ್ವಾರ ಇಲ್ಲ ಎಂದು ಅಲ್ಲಿನ ಸ್ಥಳೀಯರೊಬ್ಬರು ಮನವಿ ಮಾಡಿದ್ದಾರೆ. 15 ಮೀಟರ್ ಗಿಂತ ಎತ್ತರದ ಕಟ್ಟಡಗಳನ್ನು ಬಹುಮಹಡಿ ಕಟ್ಟಡ ಗಳು ಎಂದು ಪರಿಗಣಿಸಲಾಗುತ್ತದೆ. ಅಂತಹ ಕಟ್ಟಡಗಳಲ್ಲಿ ಕಡ್ಡಾಯವಾಗಿ ತುರ್ತು ನಿರ್ಗಮನ ದ್ವಾರ ಇರಬೇಕು.
ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಅಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಹಿವಾಟು ನಡೆಸುತ್ತಿರುವ ಓಪನ್ ರೆಸ್ಟೋರೆಂಟ್ ಮತ್ತು ಪಬ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಂ.ಎನ್. ರೆಡ್ಡಿ ತಿಳಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications