ಬೆಂಗಳೂರು ಅಗ್ನಿ ಅವಘಡ: ತನಿಖೆಗೆ ತಂಡ ರಚನೆ ಮಾಡಿದ ಜಿಬಿಎ
ಬೆಂಗಳೂರಿನಲ್ಲಿ ನಡೆದಿರುವ ಪ್ರಮುಖ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಮುಖ ಪಾಲಿಕೆ ಮುಂದಾಗಿದೆ. ಬೆಂಗಳೂರಿನ ಜಯನಗರ 4ನೇ ಬ್ಲಾಕ್ನಲ್ಲಿರುವ ವಾಣಿಜ್ಯ ಸಂಕೀರ್ಣದ 1 ಮತ್ತು 2ನೇ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
ಈ ಅಗ್ನಿ ಅವಘಡದ ಕುರಿತು ಮಾಹಿತಿ ದೊರೆತ ಕೂಡಲೇ ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಾರ್ಯ ಪ್ರವೃತ್ತರಾಗಿರುತ್ತಾರೆ. ಬಹುಮಹಡಿ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ನಂತರ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಜಿಬಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ವೇಳೆ ಕಟ್ಟಡದ ಲಿಫ್ಟ್ ನಲ್ಲಿ ಸಿಲುಕಿದ್ದ ಕೃಷ್ಣೇಗೌಡ ಎಂಬುವವರನ್ನು ರಕ್ಷಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯ ನೌಕರರಾದ ಅರುಣ್ ಪ್ರಸಾದ್ ಅವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಹಾಗೂ ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರರಾವ್, ಆಯುಕ್ತರಾದ ಕೆ.ಎನ್. ರಮೇಶ್ ಹಾಗೂ ಅಪರ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ಸಮಯದಲ್ಲಿ ಕಟ್ಟಡಕ್ಕೆ ಹಾಗೂ ಕಚೇರಿಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ವಿದ್ಯುತ್ ಅವಘಡದಿಂದ ಎಲೆಕ್ಟ್ರಿಕಲ್ ಡಕ್ಟ್ ಹಾನಿಯಾಗಿದೆ.
ಈ ವಿದ್ಯುತ್ ಅವಘಡಕ್ಕೆ ನಿಖರ ಕಾರಣವನ್ನು ತಿಳಿಯುವ ಸಂಬಂಧ ತನಿಖೆ ನಡೆಸಿ ವರದಿ ನೀಡಲು ದಕ್ಷಿಣ ನಗರ ಪಾಲಿಕೆ, ಬೆಸ್ಕಾಂ ಹಾಗೂ ಅಗ್ನಿ ಶಾಮಕ ದಳದ ಅಧಿಕಾರಿಗಳ ಒಂದು ತಂಡವನ್ನು ರಚಿಸಲಾಗಿರುತ್ತದೆ. ನಗರ ಪಾಲಿಕೆಯ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ವಾಣಿಜ್ಯ ಸಂಕೀರ್ಣದ ಸಂಪೂರ್ಣ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಕಟ್ಟಡದ ವಿದ್ಯುತ್ ಲೇನ್ ಸಂಪೂರ್ಣ ಪರಿಶೀಲಿಸಿ ದುರಸ್ತಿಗೊಳಿಸಲು ಕಟ್ಟಡದಲ್ಲಿನ ಎಲ್ಲಾ ಮಳಿಗೆಗಳು ಹಾಗೂ ಕಛೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಕಟ್ಟಡದ ಸುತ್ತಲಿನ ಪಾದಚಾರಿ ಮಾರ್ಗ ಒತ್ತುವರಿ ತೆರವು: ಪರಿಶೀಲನೆ ವೇಳೆ ವಾಣಿಜ್ಯ ಸಂಕೀರ್ಣದ ಸುತ್ತಲೂ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿರುವ ಅನಧಿಕೃತ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿರುತ್ತದೆ.
ದೂರುಗಳ ಪರಿಹಾರಕ್ಕೆ ಜಂಟಿ ಆಯುಕ್ತರು ಉಸ್ತುವಾರಿ
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸೋಮವಾರ (ನವೆಂಬರ್ 24ರಂದು) ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರಿಂದ ನಡೆದ ಫೋನ್ ಇನ್ ಕಾರ್ಯ ಕ್ರಮದಲ್ಲಿ ಆಯುಕ್ತರು ಸಾರ್ವಜನಿಕರಿಂದ ದೂರವಾಣಿ ಮೂಲಕ 37 ಅಹವಾಲು ಆಲಿಸಿದರು. ಈ ವೇಳೆ ಮಾತನಾಡಿದ ಆಯುಕ್ತರು ಸಾರ್ವಜನಿಕರಿಂದ ಸ್ವೀಕರಿಸುವ ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದೆಂದು ಆಯುಕ್ತರು ಅಧಿಕಾರಿಗಳಿಗೆ ಎಚ್ಚರಿಗೆ ನೀಡಿದ್ದಾರೆ.
ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಆಯುಕ್ತರು ಖುದ್ದಾಗಿ ಆಲಿಸಿ, ಸಂಬಂಧಿಸಿದ ದೂರು/ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸ್ಥಳದಲ್ಲಿಯೇ ಹಾಜರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕಾಲಮಿತಿಯೊಳಗಾಗಿ ಸಮಸ್ಯೆಗಳನ್ನು ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
ಫೋನ್-ಇನ್ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ದೂರುಗಳನ್ನು ಪರಿಹರಿಸಲು ವಲಯ 1 ಮತ್ತು ವಲಯ-2 ರ ಜಂಟಿ ಆಯುಕ್ತರುಗಳು ಉಸ್ತುವಾರಿ ವಹಿಸಿಕೊಂಡು ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು ಹಾಗೂ ಸಮಸ್ಯೆ ಪರಿಹರಿಸಿದ ಬಗ್ಗೆ ಮುಂದಿನ ಫೋನ್-ಇನ್ ಕಾರ್ಯಕ್ರಮದ ವೇಳೆಗೆ ವರದಿ ಸಲ್ಲಿಸಿಸಲು ಆಯುಕ್ತರು ಸೂಚಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications