Bengaluru:ಕೆಲಸ ಬೇಕು ಅಂತ ಬೆಂಗಳೂರಿಗೆ ಬಂದಿರೆನು? ಪಂಗನಾಮ ಹಾಕ್ತಾರೆ ಜೋಕೆ!
ಬೆಂಗಳೂರು ಫೆಬ್ರವರಿ 21: ಕೆಲಸ ಬೇಕು ಅಂತ ಅದೆಷ್ಟೋ ಜನ ಊರು ಬಿಟ್ಟು ಬೇರೆ ಸ್ಥಳಗಳಿಗೆ ಹೋಗುತ್ತಾರೆ. ದೇವರಿಗೆ ಹರಕೆ ಕಟ್ಟಿಕೊಳ್ಳುತ್ತಾರೆ. ನಿತ್ಯ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಕೆಲಸವನ್ನು ಅರಸಿ ಬೆಂಗಳೂರಿಗೆ ಬರುವ ಜನರ ಸಂಖ್ಯೆ ತುಂಬಾ ಹೆಚ್ಚು. ಇಂಥಹವರಿಗೆ ಚಳ್ಳೇಹಣ್ಣು ತಿನಿಸುವ ಗ್ಯಾಂಗ್ ಈಗ ಪೊಲೀಸರ ಬಲೆಗೆ ಬಿದ್ದಿದೆ.
ಹೌದು.. ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿತ್ಯ ಉದ್ಯೋಗ ಬಯಸಿ ನೂರಾರು ಸಂಖ್ಯೆಯಲ್ಲಿ ಜನ ಬರುತ್ತಾರೆ. ಅಂಥವರನ್ನೇ ಟಾರ್ಗೆಟ್ ಮಾಡುವ ಕಿಲಾಡಿ ಜೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಈ ಕಿಲಾಡಿ ದಂಪತಿ ಮಾಡುತ್ತಿದ್ದ ಕೆಲಸ ಏನು? ಯಾಕಾಗಿ ಇವರನ್ನು ಬಂಧಿಸಲಾಯ್ತು ಎನ್ನುವ ಸುದ್ದಿ ತಿಳಿದರೆ ನೀವೆಲ್ಲಾ ದಂಗಾಗಿ ಹೋಗ್ತೀರಾ.

ಬೆಂಗಳೂರಿನಲ್ಲಿ ಕೆಲಸ ಕೊಡಿಸ್ತೀವೆಂದು ಹೇಳಿ ಒಂದು ಸಾವಿರ ಅಲ್ಲ, ಒಂದು ಲಕ್ಷವಲ್ಲ ಬರೋಬ್ಬರಿ 34 ಲಕ್ಷ ರೂಪಾಯಿ ಹಣವನ್ನು ದಂಪತಿಗಳು ವಂಚಿಸಿದ್ದಾರೆ. ಅಷ್ಟಕ್ಕೂ ಇವರಿಗೆ ಇಷ್ಟೊಂದು ದುಡ್ಡು ಕೊಡುವವರು ಎಲ್ಲಿಂದ ಸಿಕ್ಕರು ಅಂತ ಕೇಳಿದ್ರೆ ನಿಮಗೆ ಶಾಕ್ ಆಗೋದು ಗ್ಯಾರಂಟಿ. ಈ ದಂಪತಿಗಳಿಗೆ ಕೆಲಸ ಬಯಸಿ ಬರುವವರು ಸಿಗುವುದು ದೇವಸ್ಥಾನದಲ್ಲಿ.
ಮೊದಲು ದೇವಸ್ಥಾನಕ್ಕೆ ಬರುವವರನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಳ್ತಾರೆ. ಆಮೇಲೆ ನಮಗೆ ಅವರು ಗೊತ್ತು, ಇವರು ಗೊತ್ತು ಅಂತ ನಂಬಿಸಿಬಿಡ್ತಾರೆ. ಹೀಗೆ ಮೂವರಿಂದ ಬರೋಬ್ಬರಿ 34 ಲಕ್ಷ ಹಣವನ್ನು ನಂಬಿಸಿ ವಂಚಿಸಿದ್ದಾರೆ. ಇದು ಪೊಲೀಸ್ ತನಿಖೆಯಿಂದ ಒಂದೊಂದಾಗಿ ಬಯಲಾಗುತ್ತಿದೆ.

ಕಿಲಾಡಿ ದಂಪತಿಗಳ ಖತರ್ನಾಕ್ ಸ್ಕೆಚ್ ಕಂಡು ಪೊಲೀಸರೇ ಆಶ್ಚರ್ಯಗೊಂಡಿದ್ದಾರೆ. ನಿರುದ್ಯೋಗಿಗಳನ್ನೇ ಟಾರ್ಗೇಟ್ ಮಾಡುವ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಸತ್ಯ ಹೊರಹಾಕಿಸುತ್ತಿದ್ದಾರೆ.
ಅಂದಹಾಗೆ ಇವರಿಬ್ಬರು ವಿದ್ಯಾರಣ್ಯಪುರದವರು. ವಂಚನೆ ಮಾಡಿದ ಹಣದಿಂದ ಇವರಿಬ್ಬರು ಚಿನ್ನಾಭರಣವನ್ನು ಖರೀದಿಸಿದ್ದರು ಎನ್ನಲಾಗುತ್ತಿದೆ. ಸದ್ಯ ವಂಚನೆಯ ಹಣದಲ್ಲಿ ಖರೀದಿ ಮಾಡಿದ ಚಿನ್ನಾಭರಣ, ಮೊಬೈಲ್, ಡೆಬಿಟ್ ಕಾರ್ಡ್ಗಳು ಹಾಗೂ ನಕಲಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ವಿದ್ಯಾರಣ್ಯಪುರದಲ್ಲಿ ದೂರು ದಾಖಲಾಗಿದೆ.
ಬೆಂಗಳೂರಿನಲ್ಲಿ ಮತ್ತೊಂದು ಹಣ ವಂಚನೆ ಕೇಸ್
ಬ್ಯಾಂಕ್ ಖಾತೆ ತೆರೆದು ಸಾಮಾಜಿಕ ಜಾಲತಾಣಗಳಲ್ಲಿ ಅಮಾಯಕರನ್ನು ಸಂಪರ್ಕ ಮಾಡಿ ಲಾಭದ ಆಮಿಷ ನೀಡಿ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ನಗರ ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಬಂಧನ ಮಾಡಿ ಕೃತ್ಯಕ್ಕೆ ಬಳಸಿದ ಪರಿಕರಗಳು ಹಾಗೂ ಐದು ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ.
ಲೋನ್ ಆಪ್ ಮೂಲಕ ಹಂತ ಹಂತವಾಗಿ ಹೂಡಿಕೆ ಮಾಡಿಸಿಕೊಂಡು ಒಟ್ಟು 8,50,000 ಹಣವನ್ನು ಪಡೆದುಕೊಂಡು ಮೋಸ ಮಾಡಿದ್ದ ಕುರಿತಾಗಿ ಬೆಂಗಳೂರು ನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರುದಾರರು ದಿ ವೈನ್ ಗ್ರೂಪ್ ಆಪ್ನಲ್ಲಿ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಅಸಲಿಯಾಗಲಿ ಬಡ್ಡಿಯನ್ನಾಗಲಿ ನೀಡದೆ ಮೋಸ ಮಾಡಲಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications