Freedom park: ಬೆಂಗಳೂರಿನ ಹೃದಯಭಾಗದಲ್ಲಿರುವ ಸ್ವಾತಂತ್ರ್ಯ ಉದ್ಯಾನವನ ನವೀಕರಣಕ್ಕೆ ನಿರ್ಧಾರ, ವೆಚ್ಚ ಎಷ್ಟು ಕೋಟಿ?
ಬೆಂಗಳೂರಿನ ಮಧ್ಯಭಾಗ ಅಂದರೆ ಹೃದಯಭಾಗದಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (Freedom park) ಪ್ರತಿಭಟನೆಗಳಿಗೆಂದೇ ಸೀಮಿತವಾಗಿದೆ. ಇದೀಗ ಇದನ್ನು ನವೀಕರಿಸಿ ಪ್ರೇಕ್ಷಣೀಯ ಸ್ಥಳ ಹಾಗೂ ಹೆರಿಟೇಜ್ ಹಬ್ ಮಾಡಲು ಬಿಬಿಎಂಪಿ ಮುಂದಾಗಿದೆ. ಜೊತೆಗೆ ಇದರಿಂದ ಆದಾಯ ಬರುವಂತೆ ಯೋಜನೆ ರೂಪಿಸಿದೆ. ಹಾಗಾದರೆ ಇದರ ನವೀಕರಣಕ್ಕೆ ಎಷ್ಟು ಕೋಟಿ ವೆಚ್ಚ ಮಾಡಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸ್ವಾತಂತ್ರ್ಯ ಉದ್ಯಾನವನ ಪ್ರಸ್ತುತ ಪ್ರತಿಭಟನೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿಬಿಟ್ಟಿದೆ. ಇನ್ನು ಇದೀಗ 21 ಹೆಕ್ಟೇರ್ನಲ್ಲಿರುವ ಇದನ್ನು ನವೀಕರಣ ಮಾಡಲು ಬಿಬಿಎಂಪಿ ₹5 ಕೋಟಿ ಮೀಸಲಿಟ್ಟಿದ್ದು, ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳದ ಜೊತೆ ಹೆರಿಟೇಜ್ ಹಬ್ ಮಾಡಲು ಬಿಬಿಎಂಪಿ ಯೋಜನೆ ಹಾಕಿಕೊಂಡಿದೆ.

ಇನ್ನು ಫ್ರೀಡಂ ಪಾರ್ಕ್ನಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ನವೀಕರಣ, ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಹಾಗೂ ದುರಸ್ತಿಗಾಗಿ ಬಿಬಿಎಂಪಿ ಯೋಜನೆ ರೂಪಿಸಿದೆ. ಜೊತೆಗೆ ಕಟ್ಟಡಗಳಿಗೆ ಹಾನಿ ಸೇರಿದಂತೆ ವಿವಿಧ ಕಾಮಗಾರಿಯೊಂದಿಗೆ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣಕ್ಕೆ ಯೋಜನೆ ನಡೆದಿದೆ.
ಫ್ರೀಡಂ ಪಾರ್ಕ್ ಅನ್ನು 2008ರಲ್ಲಿ ಸಾರ್ವಜನಿಕರಿಗೆ ತೆರೆಯಲಾಯಿತು. ಫ್ರೀಡಂ ಪಾರ್ಕ್ನಲ್ಲಿ ಈ ಹಿಂದಿನ ಕೇಂದ್ರ ಕಾರಾಗೃಹವನ್ನು ಒಳಗೊಂಡಿದೆ. ಆದರೆ ಇದೀಗ ಫ್ರೀಡಂ ಪಾರ್ಕ್ ಸಂಪೂರ್ಣ ಅಯೋಮಯವಾಗಿದೆ. ವಿಶೇಷವಾಗಿ ಕೇಂದ್ರ ಕಾರಾಗೃಹ ಭಾಗ ಸಂಪೂರ್ಣವಾಗಿ ಹದಗೆಟ್ಟಿದೆ. ಸದ್ಯ ಒಳಗಡೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಮುಂದಿನ ದಿನಗಳಲ್ಲಿ ಪಾರ್ಕ್ ನವೀಕರಣ ಮಾಡಿ ವಾಣಿಜ್ಯ ಆದಾಯ ಬರುವಂತೆ ಮಾಡಲು ಪಾಲಿಕೆ ಯೋಜನೆ ರೂಪಿಸಿದೆ.
ಬಿಬಿಎಂಪಿಯು ಫ್ರೀಡಂ ಪಾರ್ಕ್ನ ಅಸ್ತಿತ್ವದಲ್ಲಿರುವ ರಚನೆಗಳ ನವೀಕರಣ, ಅಕೌಸ್ಟಿಕ್ಸ್ ಮತ್ತು ವಿದ್ಯುದ್ದೀಕರಣಕ್ಕಾಗಿ ಟೆಂಡರ್ ಕರೆದಿದೆ. ಸಂಪೂರ್ಣ ಕಾಮಗಾರಿಗೆ 5 ಕೋಟಿ ರೂಪಾಯಿ ವೆಚ್ಚ ಆಗಬಹುದು ಎಂದು ಬಜೆಟ್ ನೀಡಿದೆ. ಕೋವಿಡ್ ಕಾಲದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಿದೆ.
ಈ ಸಮಯದಲ್ಲಿ ಖಾಲಿ ಇದ್ದ ಸ್ಥಳದಲ್ಲಿ ಆಂಫಿ ಥಿಯೇಟರ್, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಹೊಸದಾಗಿ ನಿರ್ಮಾಣ ಮಾಡಲಾಗಿತ್ತು. ಆದ್ರೆ ಕಳಪೆ ಕಾಮಗಾರಿಯಿಂದ ಎಲ್ಲವೂ ಸಂಪೂರ್ಣವಾಗಿ ಹಾಳಾಗಿದೆ. ಜೊತೆಗೆ ಪಾರ್ಕ್ ಒಳಗಿರುವ ಹಳೆಯ ಜೈಲು ಕುಸಿಯುವ ಹಂತದಲ್ಲಿದೆ ಎನ್ನುವ ಮಾಹಿತಿ ಇದೆ.
ಉದ್ಯಾನವನ ನವೀಕರಿಸಲು ಬಿಬಿಎಂಪಿ 8 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ಅಂದಾಜಿಸಿತ್ತು. ಆದರೆ ಇದೀಗ ನವೀಕರಣಕ್ಕೆ 5 ಕೋಟಿ ರೂಪಾಯಿ ಬಜೆಟ್ ಇದೆ. ಆದ್ದರಿಂದ ಆಂಫಿಥಿಯೇಟರ್ವೊಳಗೆ ಹವಾನಿಯಂತ್ರಣ ಮತ್ತು ಅಕೌಸ್ಟಿಕ್ಸ್ ಯೋಜನೆಗಳನ್ನು ಬಿಬಿಎಂಪಿ ಕೈಬಿಟ್ಟಿದೆ ಎನ್ನುವ ಮಾಹಿತಿ ಇದೆ. 60 ಆಸನಗಳ ಆಂಫಿಥಿಯೇಟರ್ ಅನ್ನು ನವೀಕರಿಸುವ ಯೋಜನೆಯನ್ನು ಪಾಲಿಕೆ ಕೈಬಿಟ್ಟಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಪ್ರಸ್ತುತ, ಬಿಬಿಎಂಪಿಯು ಪ್ರವೇಶ ಶುಲ್ಕವಿಲ್ಲದೆ ಫ್ರೀಡಂ ಪಾರ್ಕ್ ಒಳಗೆ ಪ್ರವಾಸಿಗರಿಗೆ ಅವಕಾಶ ನೀಡುತ್ತಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications