Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ: ಬಿಬಿಎಂಪಿ ಮಹತ್ವದ ಮಾಹಿತಿ!

ಬೆಂಗಳೂರಿನಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹತ್ವದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಬೆಂಗಳೂರಿನಲ್ಲಿ 41 ಕಲ್ಯಾಣಿಗಳು ಹಾಗೂ 489 ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)ಗಳ ವ್ಯವಸ್ಥೆ ಮಾಡಿಕೊಂಡಿರುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾವ ವಾರ್ಡ್‌ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

Bengaluru Ganesha Idol Immersion BBMP Announces Timings amp amp Guidelines for Major Lakes and Kalyanis

ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ತಿಳಿಸಿದೆ.

ಪ್ರಮುಖ ಕಲ್ಯಾಣಿಗಳಲ್ಲಿ ಅಗತ್ಯ ವ್ಯವಸ್ಥೆ: ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ ಸೌಲಭ್ಯ ಹಾಗೂ ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇನ್ನು ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಮಾಡಿದ ವೇಳೆ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್‌ಗಳ ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಡಿಯೂರು ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ವ್ಯವಸ್ಥೆ: ಇನ್ನು ಬೆಂಗಳೂರಿನ ಪ್ರಮುಖ ಕಲ್ಯಾಣಿಗಳಲ್ಲಿ ಒಂದಾಗಿರುವ ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಸ್ಟ್‌ 27 ರಿಂದ ಸೆಪ್ಟೆಂಬರ್ 7 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹಲಸೂರು ಕೆರೆ ಅಂಗಳದ ಕಲ್ಯಾಣಿ: ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಆಗಸ್ಟ್‌ 27 ರಿಂದ ಸೆಪ್ಟೆಂಬರ್ 30ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಹೂಳೆತ್ತುವ ಕಾರ್ಯವನ್ನು 01-09-2025, 02-09-2025, 08-09-2025 ಹಾಗೂ 09-09-2025 ರಂದು ನಿರ್ವಹಿಸುವ ಕಾರಣ ಯಾವುದೇ ರೀತಿಯ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

ಹೆಬ್ಬಾಳ‌ ಕೆರೆ ಅಂಗಳದ ಕಲ್ಯಾಣಿ: ಹೆಬ್ಬಾಳ‌ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ 10-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿ: ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 04-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+