ಗಣಪನ ಎತ್ತರದ ಮೇಲಿನ ನಿರ್ಬಂಧ ಹಿಂತೆಗೆದ ಮಾಲಿನ್ಯ ಮಂಡಳಿ
ಬೆಂಗಳೂರು, ಸೆಪ್ಟೆಂಬರ್ 3: ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಐದು ಅಡಿಗಿಂತ ಹೆಚ್ಚು ಎತ್ತರದ ವಿಗ್ರಹಗಳನ್ನು ಪ್ರತಿಷ್ಠಾಪಿಸಬಾರದೆಂದು ಆಗ್ರಹಿಸಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ.
ಸೋಮವಾರ ಬೆಂಗಳೂರು ಗಣೇಶ ಉತ್ಸವ ಮಂಡಳಿ ನಡೆಸಿದ ಪ್ರತಿಭಟನೆ ನಂತರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳ ತಯಾರಿ ಮತ್ತು ಮಾರಾಟಕ್ಕೆ ನಿಷೇಧ ಹೇರಿರುವುದನ್ನು ವಿರೋಧಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಐದು ಅಡಿ ಎತ್ತರಕ್ಕೆ ಮೂರ್ತಿ ಎತ್ತರ ಸೀಮಿತ ಸೇರಿದಂತೆ ಆರ್ವಿ ರಸ್ತೆ ಬಳಿ ಮೂರ್ತಿಗಳನ್ನು ವಶಪಡಿಸಿಕೊಂಡಿತ್ತು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಮಿತಿ ಪಿಒಪಿ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದೆ.

ಪಿಒಪಿ ಮೂರ್ತಿಗಳಿಂದ ಪರಿಸರಕ್ಕೆ ಹಾನಿಯಾಗದಂತೆ ಕ್ರಮ ಕೈಗೊಳ್ಳುವುದು ಮಂಡಳಿಯ ಜವಾಬ್ದಾರಿ, ಬಳಕೆ ಮತ್ತು ಮಾರಾಟದ ಮೇಲೆ ನಿಯಂತ್ರಣ ಹೇರುವುದರಿಂದ ಸಮಸ್ಯೆ ಪರಿಹಾರ ದೊರಕುವುದಿಲ್ಲ ಎನ್ನುವುದು ಮೂರ್ತಿ ತಯಾರಕರ ವಾದವಾಗಿತ್ತು.
ಐದು ಅಡಿಗೂ ಎತ್ತರದ ಗಣೇಶನನ್ನು ಕೂರಿಸದಂತೆ ಆದೇಶ ಹೊರಡಿಸಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶವನ್ನು ಹಿಂಪಡೆಯುವಂತೆ ನಗರದ ಮಾವಳ್ಳಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿವರೆಗೆ ಪ್ರತಿಭಟನೆ ನಡೆಯಿತು. ಹತ್ತು ಅಡಿ ಗಣೇಶನನ್ನು ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಈ ಹಿಂದೆ ಹೊರಡಿಸಿದ್ದ ಆದೇಶ ಕಡ್ಡಾಯವಲ್ಲ, ಇದೊಂದು ಮಾರ್ಗ ಸೂಚಿ ಅಷ್ಟೇ, ಹಸಿರು ನ್ಯಾಯಾಧೀಕರಣ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ಗಣೇಶ ಉತ್ಸವ ಸಮಿತಿ ಪ್ರತಿಭಟನೆ ಮಣಿದು ನಿಯಮದಲ್ಲಿ ಸಡಿಲಿಕೆ ಮಾಡಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications