ಬೊಮ್ಮನಹಳ್ಳಿ: ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಪ್ರತಿಭಟನೆ
ಬೆಂಗಳೂರು, ಏಪ್ರಿಲ್, 18: ಕೇಂದ್ರ ಸರ್ಕಾರದ ಹೊಸ ಪಿಎಫ್ ನೀತಿ ಖಂಡಿಸಿ ಗಾರ್ಮೆಂಟ್ಸ್ ಕಾರ್ಮಿಕರು ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಲಾಠಿ ಚಾರ್ಜ್ ಮಾಡಲಾಗಿದೆ.
ಘರ್ಷಣೆ ವೇಳೆ ಅನೇಕ ಪೊಲೀಸರಿಗೂ ಗಂಭೀರ ಗಾಯಗಳಾಗಿದೆ. ಇಬ್ಬರು ಪೊಲೀಸರ ಸ್ಥಿತಿ ಗಂಭಿರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗದೆ.['ಗಾರ್ಮೆಂಟ್ ಫ್ಯಾಕ್ಟರಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್']

ಶಶಿ ಎಕ್ಸಪೋರ್ಟ್, ಕೆ. ಮೋಹನ್ ಆಂಡ್ ಕೋ,ಜಾಕಿ ಘಟಕ ಮತ್ತು ಇತರೆ ಚಿಕ್ಕ ಪುಟ್ಟ ಘಟಕದ ನೌಕರರು ಪ್ರತಿಭಟನೆ ಆರಂಭಿಸಿದ್ದರು.
ಮೊದಲು ಶಾಂತರೀತಿಯಿಂದ ನಡೆಯುತ್ತಿದ್ದ ಪ್ರತಿಭಟನೆ ಏಕಾಏಕಿ ಹಿಂಸಾರೂಪ ಪಡೆದುಕೊಂಡಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ.
ಸದಾ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದ ಜಾಗದಲ್ಲಿ ಇಂದು ಪ್ರತಿಭಟನೆಯ ಪರಿಣಾಮ ಮತ್ತಷ್ಟು ಸಂಕಷ್ಟ ಎದುರಿಸುವಂತಾಯಿತು. ಸುಮಾರು 20 ಕಿಲೋ ಮೀಟರ್ ದೂರ ಟ್ರಾಫಿಕ್ ಜಾಮ್ ಆಗಿದೆ. ಸದ್ಯ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಣಕ್ಕೆ ತಂದಿದ್ದು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡಲಾಗುತ್ತಿದೆ.[ಜಯನಗರದಲ್ಲಿದೆ ಶಿವನ ಪಾದ ಸೇರಲು ಶಾರ್ಟ್ಕಟ್!]
ಈ ವೇಳೆ ಕೆಲವು ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಪೊಲೀಸರು ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಘರ್ಷಣೆಯಲ್ಲಿ 5 ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಅವರು, ಸದ್ಯ ಬೊಮ್ಮನಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಯಾಕಾಗಿ ಪ್ರತಿಭಟನೆ?
ಕೇಂದ್ರ ಸರ್ಕಾರ ಎಂಪ್ಲಾಯ್ ಪ್ರಾವಿಡೆಂಟ್ ಫಂಡ್ ನೀತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 1952 ರ ಪಿಎಫ್ ಶಾಸನಕ್ಕೆ ತಿದ್ದುಪಡಿ ಮಾಡಲಾಗಿದೆ.
ಒಂದು ವೇಳೆ ಕಾರ್ಮಿಕರೊಬ್ಬರು ತಮ್ಮ ಪಿಎಫ್ ಹಣವನ್ನು ವಿತ್ ಡ್ರಾ ಮಾಡಲು ಮುಂದಾದರೆ ಅವರ ಖಾತೆಯಿಂದ ಮುರಿದುಕೊಂಡ ಹಣ ಮಾತ್ರ ಪಡೆದುಕೊಳ್ಳಲು ಸಾಧ್ಯ. ಕಂಪನಿಯ ಕಾಂಟ್ರಿಬ್ಯುಶನ್ ಅನ್ನು ಪಡೆದುಕೊಳ್ಳಲು ವ್ಯಕ್ತಿ 58 ವರ್ಷಗಳವರೆಗೆ ಕಾಯಬೇಕು. ಇದನ್ನೇ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications