ಕಡ್ಲೆಕಾಯಿ ಪರಿಷೆ ಉದ್ಘಾಟನೆ ವಿಶೇಷವೇನು?
ಬೆಂಗಳೂರು, ನ.17: ಬಸವನಗುಡಿ ಕಡ್ಲೆಕಾಯಿ ಪರಿಷೆ ಉದ್ಘಾಟನೆಯೇ ವಿಭಿನ್ನ. ಬಸವಣ್ಣನಿಗೆ ಕಡ್ಲೆಕಾಯಿ ತುಲಾಭಾರ ಮಾಡಿದ ಮೇಲೆಯೆ ಪರಿಷೆಗೆ ವಿಧ್ಯುಕ್ತ ಚಾಲನೆ ದೊರೆಯುತ್ತದೆ ಎಂಬ ಸಂಗತಿ ಅನೇಕರಿಗೆ ಗೊತ್ತಿರಲಕ್ಕಿಲ್ಲ.
ಬಸವಣ್ಣನ ಪಂಚಲೋಹದ ಮೂರ್ತಿಯೊಂದನ್ನು ತುಲಾಭಾರಕ್ಕೆ ಬಳಸಿಕೊಳ್ಳಲಾಗುತ್ತದೆ. ತಕ್ಕಡಿಯ ಒದು ಭಾಗದಲ್ಲಿ ಬಸವಣ್ಣನ ಮೂರ್ತಿ ಇನ್ನೊಂದು ಭಾಗದಲ್ಲಿ ಕಡ್ಲೆಕಾಯಿ ಸುರಿಯಲಾಗುವುದು. ಮೂರ್ತಿಯ ಭಾರವನ್ನು ಕಡ್ಲೆಕಾಯಿ ಮೀರಿದಾಗ ಪರಿಷೆಗೆ ಚಾಲನೆ ಸಿಕ್ಕಂತಾಗುತ್ತದೆ. ಈ ತುಲಾಭಾರದಲ್ಲಿ ಪಾಲ್ಗೊಂಡ ಕಡ್ಲೆಕಾಯಿ ಶ್ರೇಷ್ಠ ಎಂಬುದು ಜನರ ನಂಬಿಕೆ.[ಕಡ್ಲೆಕಾಯಿ ಪರಿಷೆಗೆ ರಾಷ್ಟ್ರೀಯ ಮಾನ್ಯತೆ: ಅನಂತಕುಮಾರ್]

ಬಸವಣ್ಣನ ಕತೆಗಳು
ನೂರಾರು ವರ್ಷಗಳ ಹಿಂದೆ ಬಸವನಗುಡಿಯ ಸುತ್ತ ಮುತ್ತಲ ಪ್ರದೇಶದಲ್ಲಿ ವ್ಯಾಪಕವಾಗಿ ಕಡ್ಲೆಕಾಯಿ ಬೆಳೆಯಲಾಗುತ್ತಿತ್ತು. ಆದರೆ ಫಸಲು ಬಿಡುವ ವೇಳೆಗೆ ಯಾವುದೋ ಒಂದು ಪ್ರಾಣಿ ಆಗಮಿಸಿ ಕಡ್ಲೆಕಾಯಿ ತಿಂದು ಮಾಯವಾಗುತ್ತಿತ್ತು. ಇದರಿಂದ ಗೊಂದಲಕ್ಕೆ ಬಿದ್ದ ರೈತರು ಒಂದು ರಾತ್ರಿ ಪ್ರಾಣಿಯನ್ನು ಹಿಡಿಯಲು ಮುಂದಾಗುತ್ತಾರೆ.

ಎಂದಿನಂತೆ ಕಡ್ಲೆಕಾಯಿ ತಿನ್ನಲು ಬಂದ ಎತ್ತೊಂದು ರೈತರನ್ನು ನೋಡಿ ಓಟಕ್ಕಿಳುತ್ತದೆ. ಈಗಿರುವ ದೊಡ್ಡ ಬಸವನ ದೇವಾಸ್ಥಾನದ ಬೆಟ್ಟ ಏರಿ ಶಿಲಾಮೂರ್ತಿಯಾಗಿ ನಿಲ್ಲುತ್ತದೆ. ಅಂದಿನಿಂದ ರೈತರು ನೀನು ಪರಶಿವನ ವಾಹನವೇ ಇರಬೇಕು ಎಂದು ಧನ್ಯತಾ ಭಾವದಿಂದ ಕಡ್ಲೆಕಾಯಿ ಪರಿಷೆ ಆರಂಭಿಸುತ್ತಾರೆ ಎಂದು ಧಾರ್ಮಿಕ ಕತೆ ಹೇಳುತ್ತದೆ.[ಬಸವನಗುಡಿಯಲ್ಲಿ ಕಡ್ಲೇ ಕಾಯಿ ಪರಿಷೆ ಕ್ರೇಜ್ ಶುರು]
ಬೆಳೆದ ಕಡ್ಲೆಕಾಯಿಗೆ ಸೂಕ್ತ ಮಾರುಕಟ್ಟೆ ಇಲ್ಲದೇ ಕಂಗಾಲಾಗಿದ್ದ ವೇಳೆ ಹುಟ್ಟಿಕೊಂಡ ಜಾನಪದ ಜಾತ್ರೆಯೊಂದಿಗಿನ ಸಂತೆಯೇ ಕಡ್ಲೆಕಾಯಿ ಪರಿಷೆ ಎಂದೂ ಹೇಳಲಾಗುತ್ತದೆ. 1786ರಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಈಗಿರುವ ದೇವಾಲಯ ನಿರ್ಮಿಸಿದ ಎಂದು ಇತಿಹಾಸದ ಪುಟಗಳು ಹೇಳುತ್ತವೆ.[ಪರಿಷೆಯ ಮತ್ತಷ್ಟು ಚಿತ್ರಗಳು]
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications