ಕಡ್ಲೆಕಾಯಿ ಪರಿಷೆ ಉದ್ಘಾಟನೆ ವಿಶೇಷವೇನು?
ಬೆಂಗಳೂರು, ನ.17: ಬಸವನಗುಡಿ ಕಡ್ಲೆಕಾಯಿ ಪರಿಷೆ ಉದ್ಘಾಟನೆಯೇ ವಿಭಿನ್ನ. ಬಸವಣ್ಣನಿಗೆ ಕಡ್ಲೆಕಾಯಿ ತುಲಾಭಾರ ಮಾಡಿದ ಮೇಲೆಯೆ ಪರಿಷೆಗೆ ವಿಧ್ಯುಕ್ತ ಚಾಲನೆ ದೊರೆಯುತ್ತದೆ ಎಂಬ ಸಂಗತಿ ಅನೇಕರಿಗೆ ಗೊತ್ತಿರಲಕ್ಕಿಲ್ಲ.
ಬಸವಣ್ಣನ ಪಂಚಲೋಹದ ಮೂರ್ತಿಯೊಂದನ್ನು ತುಲಾಭಾರಕ್ಕೆ ಬಳಸಿಕೊಳ್ಳಲಾಗುತ್ತದೆ. ತಕ್ಕಡಿಯ ಒದು ಭಾಗದಲ್ಲಿ ಬಸವಣ್ಣನ ಮೂರ್ತಿ ಇನ್ನೊಂದು ಭಾಗದಲ್ಲಿ ಕಡ್ಲೆಕಾಯಿ ಸುರಿಯಲಾಗುವುದು. ಮೂರ್ತಿಯ ಭಾರವನ್ನು ಕಡ್ಲೆಕಾಯಿ ಮೀರಿದಾಗ ಪರಿಷೆಗೆ ಚಾಲನೆ ಸಿಕ್ಕಂತಾಗುತ್ತದೆ. ಈ ತುಲಾಭಾರದಲ್ಲಿ ಪಾಲ್ಗೊಂಡ ಕಡ್ಲೆಕಾಯಿ ಶ್ರೇಷ್ಠ ಎಂಬುದು ಜನರ ನಂಬಿಕೆ.[ಕಡ್ಲೆಕಾಯಿ ಪರಿಷೆಗೆ ರಾಷ್ಟ್ರೀಯ ಮಾನ್ಯತೆ: ಅನಂತಕುಮಾರ್]

ಬಸವಣ್ಣನ ಕತೆಗಳು
ನೂರಾರು ವರ್ಷಗಳ ಹಿಂದೆ ಬಸವನಗುಡಿಯ ಸುತ್ತ ಮುತ್ತಲ ಪ್ರದೇಶದಲ್ಲಿ ವ್ಯಾಪಕವಾಗಿ ಕಡ್ಲೆಕಾಯಿ ಬೆಳೆಯಲಾಗುತ್ತಿತ್ತು. ಆದರೆ ಫಸಲು ಬಿಡುವ ವೇಳೆಗೆ ಯಾವುದೋ ಒಂದು ಪ್ರಾಣಿ ಆಗಮಿಸಿ ಕಡ್ಲೆಕಾಯಿ ತಿಂದು ಮಾಯವಾಗುತ್ತಿತ್ತು. ಇದರಿಂದ ಗೊಂದಲಕ್ಕೆ ಬಿದ್ದ ರೈತರು ಒಂದು ರಾತ್ರಿ ಪ್ರಾಣಿಯನ್ನು ಹಿಡಿಯಲು ಮುಂದಾಗುತ್ತಾರೆ.

ಎಂದಿನಂತೆ ಕಡ್ಲೆಕಾಯಿ ತಿನ್ನಲು ಬಂದ ಎತ್ತೊಂದು ರೈತರನ್ನು ನೋಡಿ ಓಟಕ್ಕಿಳುತ್ತದೆ. ಈಗಿರುವ ದೊಡ್ಡ ಬಸವನ ದೇವಾಸ್ಥಾನದ ಬೆಟ್ಟ ಏರಿ ಶಿಲಾಮೂರ್ತಿಯಾಗಿ ನಿಲ್ಲುತ್ತದೆ. ಅಂದಿನಿಂದ ರೈತರು ನೀನು ಪರಶಿವನ ವಾಹನವೇ ಇರಬೇಕು ಎಂದು ಧನ್ಯತಾ ಭಾವದಿಂದ ಕಡ್ಲೆಕಾಯಿ ಪರಿಷೆ ಆರಂಭಿಸುತ್ತಾರೆ ಎಂದು ಧಾರ್ಮಿಕ ಕತೆ ಹೇಳುತ್ತದೆ.[ಬಸವನಗುಡಿಯಲ್ಲಿ ಕಡ್ಲೇ ಕಾಯಿ ಪರಿಷೆ ಕ್ರೇಜ್ ಶುರು]
ಬೆಳೆದ ಕಡ್ಲೆಕಾಯಿಗೆ ಸೂಕ್ತ ಮಾರುಕಟ್ಟೆ ಇಲ್ಲದೇ ಕಂಗಾಲಾಗಿದ್ದ ವೇಳೆ ಹುಟ್ಟಿಕೊಂಡ ಜಾನಪದ ಜಾತ್ರೆಯೊಂದಿಗಿನ ಸಂತೆಯೇ ಕಡ್ಲೆಕಾಯಿ ಪರಿಷೆ ಎಂದೂ ಹೇಳಲಾಗುತ್ತದೆ. 1786ರಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಈಗಿರುವ ದೇವಾಲಯ ನಿರ್ಮಿಸಿದ ಎಂದು ಇತಿಹಾಸದ ಪುಟಗಳು ಹೇಳುತ್ತವೆ.[ಪರಿಷೆಯ ಮತ್ತಷ್ಟು ಚಿತ್ರಗಳು]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications