'ನಮ್ಮ ಬೆಂಗಳೂರು ಹಬ್ಬಕ್ಕೆ' ವಿಧಾನಸೌಧ ಅಂಗಳ ಸಜ್ಜು
'ಬೆಂಗಳೂರು, ಡಿಸೆಂಬರ್ 22 : ರಾಜ್ಯದ ಶಕ್ತಿ ಸೌಧವಾದ ವಿಧಾನಸೌಧದ ಅಂಗಳದಲ್ಲಿ ತಿಂಡಿ, ತಿನಿಸು, ಮೋಜು ನಂಬಲಾಗುತ್ತಿಲ್ಲವೇ ಮೊಟ್ಟ ಮೊದಲ ಬಾರಿಗೆ ಬರುವ ಭಾನುವಾರ ಡಿಸೆಂಬರ್ 24 ರಂದು ನಡೆಯುವ 'ನಮ್ಮ ಬೆಂಗಳೂರು' ಹಬ್ಬದಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದು.
ಹಾಗೆಯೇ ಮುಕ್ತವಾಗಿ ಭಾಗವಹಿಸಿ ನಾನಾ ಮೋಜಿನ ಆಟಗಳಲ್ಲಿ ಪಾಲ್ಗೊಳ್ಳಲು ಸದವಕಾಶವನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ನೀಡಿದೆ. ಪ್ರತಿ ವರ್ಷ ಕ್ರಿಸ್ ಮಸ್ ಹಬ್ಬದ ಅಂಗವಾಗಿ ಎಂಜಿ ರಸ್ತೆಯಲ್ಲಿ, ಎಚ್ ಎಸ್ ಆರ್ ಲೇಔಟ್ ನಲ್ಲಿ ಹೀಗೆ ನಗರದ ನಾನಾ ಕಡೆಗಳಲ್ಲಿ ನಡೆದಿದೆ. ಇದೇ ಮೊದಲ ಬಾರಿಗೆ ವಿಧಾನ ಸೌಧ ಎದುರು ಬೆಂಗಳೂರು ಓಪನ್ ಸ್ಟ್ರೀಟ್ ಫೆಸ್ಟಿವಲ್ ನಡೆಯುತ್ತಿದೆ. ವಿಧಾನ ಸೌಧ ಮುಂಭಾಗ, ಅಂಬೇಡ್ಕರ್ ರಸ್ತೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಬೆಂಗಳೂರು ಹಬ್ಬದಲ್ಲಿ ಏನೇನಿದೆ?
ಯೋಗ, ಜೂಂಬಾ, ಕರ್ನಾಟಕದ ಸಂಸ್ಕೃತಿಯನ್ನು ಸಾರುವಂತಹ ಕಾರ್ಯಕ್ರಮಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ತರಬೇತಿ ಕಾರ್ಯಾಗಾರ ಹೀಗೆ ಇಡೀ ದಿನ ಮೋಜು ಮಸ್ತಿಯಿಂದ ಕೂಡಿರುತ್ತದೆ. ಸಾರ್ವಜನಿಕರಿಗೆ ಮುಕ್ತವಾದ ಅವಕಾಶವಿರುತ್ತದೆ. ಲಾಂಛನ ಹಾಗೂ ಮೊಬೈಲ್ ಅಪ್ಲಿಕೇಷನ್ ಕಾರ್ಯಕ್ರಮ ವಿಧಾನಸೌಧ ಮೆಟ್ಟಿಲುಗಳ ಮೇಲೆ ನಡೆಸಲಾಗುತ್ತದೆ. ಭಾನುವಾರ ಡಿ.24 ರಂದು ಬೆಳಗ್ಗೆ ಸಿದ್ದರಾಮಯ್ಯ ಲಾಂಛನ ಲೋಕಾರ್ಪಣೆ ಮಾಡಲಿದ್ದಾರೆ.
ನಮ್ಮ ಮೆಟ್ರೋ ಬೆಳಗ್ಗೆ 7 ರಿಂದಲೇ ಸಂಚಾರ ಆರಂಭ:
ವಿಧಾನ ಸೌಧದ ಆವರಣದಲ್ಲಿ ಭಾನುವಾರ ನಡೆಯುವ ನಮ್ಮ ಬೆಂಗಳೂರು ಹಬ್ಬದಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಸೇವೆಯನ್ನು ಬೆಳಗ್ಗೆ 7 ರಿಂದಲೇ ಪ್ರಾರಂಭಿಸಲಿದೆ.

ಅಲ್ಲದೇ ದಿನವಿಡೀ ಮೆಟ್ರೋ ರೈಲುಗಳ ಸಂಚಾರದ ಪ್ರಮಾಣವನ್ನೂ ಹೆಚ್ಚಳ ಮಾಡಲು ತೀರ್ಮಾಣಿಸಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳ ಗಮನಿಸಿ ಸಂಚಾರವನ್ನೂ ವಿಸ್ತರಿಸಲಾಗುವುದು ಎಂದು ಬಿಎಂಆರ್ ಸಿಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಭಾನುವಾರದ ಕಾರ್ಯಕ್ರಮಗಳ ವಿವರ:
ಯೋಗದಿಂದ ಬೆಳಗ್ಗಿನ ಕಾರ್ಯಕ್ರಮ 7 ಗಂಟೆಗೆ ಪ್ರಾರಂಭವಾಗಲಿದೆ. ಜೂಂಬಾ ಫಿಟ್ ನೆಸ್, ಶಾಸ್ತ್ರೀಯ ಸಂಗೀತ, ಪೊಲೀಸ್ ಬ್ಯಾಂಡ್, ಲಾಂಛನ ಬಿಡುಗಡೆ, ಡೊಳ್ಳು ಕುಣಿತ, ಪರದೆ ಹಾಗೂ ಗೊಂಬೆ ಆಟ, ಕಂಸಾಳೆ, ಪೂಜಾ ಕುಣಿತ, ಹುಲಿವೇಶ, ವೀಣಾ ವಾದನ ಕಾರ್ಯಕ್ರಮಗಳು ನಡೆಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications