Bengaluru Weather Today: ಇಂದು ತಾಪಮಾನ ಮತ್ತಷ್ಟು ಇಳಿಕೆ! ಒಂದು ವಾರ ಭಾರೀ ಚಳಿ ನಿರೀಕ್ಷೆ..
Bengaluru cold wave: ರಾಜಧಾನಿ ಬೆಂಗಳೂರು ಬುಧವಾರ (ಡಿಸೆಂಬರ್10) ದಟ್ಟ ಮಂಜು, ಹೆಚ್ಚು ಚಳಿಗೆ ಸಾಕ್ಷಿ ಅಯಿತು. ನಗರಾದ್ಯಂತ ತಂಪು ವಾತಾವರಣ ದಾಖಲಾಯಿತು. ಬೆಂಗಳೂರಿಗೆ ಶೀತದ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ನಗರ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ಗೆ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರ ಬೆಂಗಳೂರು ಅಕ್ಷರಶಃ ನಡುಗಲಿದೆ ಎಂದು ಹವಾಮಾನ ತಜ್ಞರು ಊಹಿಸಿದ್ದಾರೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಂಜು ಕವಿದಿತ್ತು. ಬೆಳಗ್ಗೆ ದಟ್ಟ ಮಂಜು, ಚಳಿ ಆವರಿಸಿತ್ತು. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹೆಚ್ಚಲಿದೆ. ಅಂದರೆ ಹಗಲು ಹೊತ್ತು ಹೆಚ್ಚಿನ ಉಷ್ಣ ಕಂಡು ಬರಲಿದ್ದು, ಎಲ್ಲೆಡೆ ಒಣಹವೆ ಕಂಡು ಬರಲಿದೆ. ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು, ಚಳಿ ಹೆಚ್ಚಾಗುವ ಸೂಚನೆ ಸಿಕ್ಕಿದೆ. ಹೀಗಾಗಿ ಐಎಂಡಿ ನಗರಕ್ಕೆ ಶೀತದ ಅಲೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ಯಲಹಂಕದ ಜಿಕೆವಿಕೆ ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂತು. ಇಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇತ್ತು. ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಮಂಜು ಕವಿಯುವ ಪ್ರಮಾಣ ಹೆಚ್ಚಾಗಲಿದೆ. ಇಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ವರದಿ ಆಗಿದೆ.
ಅದೇ ರೀತಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ. ಇದೆಲ್ಲ ನೋಡಿದರೆ ಚಳಿ ಪ್ರಮಾಣ ತೀವ್ರ ಸ್ವರೂಪದಲ್ಲಿ ಕುಸಿದಿದೆ. ಶಾಖದ ಅಲೆ ಹೆಚ್ಚಾಗುತ್ತಿರುವುದು ಗೊತ್ತಾಗುತ್ತಿದೆ. ಈಗಾಗಲೇ ಕರ್ನಾಟಕದ ಉತ್ತರ ಭಾಗಕ್ಕೆ ಶೀತ ಅಲೆಗಳ ಪ್ರಭಾವ ಉಂಟಾಗಿದೆ. ಇನ್ನೊದು ವಾರದಲ್ಲಿ ಅದು ಬೆಂಗಳೂರು ಸೇರಿದಂತೆ ರಾಜ್ಯ ಆವರಿಸುವ ಸಾಧ್ಯತೆ ಇದೆ.
ಒಂದು ವಾರದ ಬೆಂಗಳೂರು ಹವಾಮಾನ ವರದಿ
ಮುಂದಿನ ಒಂದು ವಾರದಲ್ಲಿ ನಗರದ ತಾಪಮಾನದಲ್ಲಿ ಭಾರೀ ವ್ಯತ್ಯಾಸವಾಗಲಿದೆ. ಅಂದರೆ ಕನಿಷ್ಠ ತಾಪಮಾನ ಕ್ರಮೇಣ ನಿರಂತರವಾಗಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ವರೆಗೆ ಇಳಿಕೆ ಆಗಲಿದೆ. ಡಿಸೆಂಬರ್ ತಿಂಗಳ ಚಳಿಗೆ ಬೆಂಗಳೂರು ನಡುಗಲಿದೆ. ಹಗಲು ಸ್ಪಷ್ಟ ನೀಲಿ ಆಕಾಶ ಕಂಡು ಬರಲಿದ್ದು, ಒಣಹವೆಯ ವಾತಾವರಣ ಕಂಡು ಬರಲಿದೆ.
ಒಂದು ವೇಳೆ ನಗರದ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದೆ ಆದರೆ ಅದು ಸುಮಾರು 09 ವರ್ಷಗಳ ಹಳೇಯ ದಾಖಲೆಯನ್ನು ಮುರಿಯಲಿದೆ. ಏಕೆಂದರೆ 2016 ರ ಡಿಸೆಂಬರ್ 11ರಂದು ಕನಿಷ್ಠ ತಾಪಮಾನದಲ್ಲಿ ದಾಖಲೆ ಆಗಿತ್ತು. ಡಿಸೆಂಬರ್ ತಿಂಗಳಿನ ಚಳಿ ನೋಡುವುದಾದರೆ 12 ಡಿ.ಸೆ. ದಾಖಲಾದರೆ ಅದು ಇಷ್ಟು ವರ್ಷಗಳ ಕನಿಷ್ಠ ತಾಪಮಾನವಾಗಲಿದೆ ಎಂದು ವರದಿ ಆಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications