ಹೆಲಿ ಟ್ಯಾಕ್ಸಿಯಲ್ಲಿ ತೆರಳಬೇಕೆ? ಹಾಗಾದರೆ ಬುಕಿಂಗ್ ಹೇಗೆ?
ಬೆಂಗಳೂರು, ಫೆಬ್ರವರಿ 22: ಬೆಂಗಳೂರಿನ ಬಹುನಿರೀಕ್ಷಿತ ಹೆಲಿ ಟ್ಯಾಕ್ಸಿ ಸೇವೆ ಆರಂಭಗೊಳ್ಳಲು ಕ್ಷಣಗಣನೆ ಆರಂಭಗೊಂಡಿದ್ದು ಮುಂದಿನ ವಾರದಲ್ಲಿ ಹೆಲಿ ಟ್ಯಾಕ್ಸಿ ಸೇವೆ ಲೋಕಾರ್ಪಣೆಗೊಳ್ಳಲಿದೆ.
ಥಂಬಿ ಏವಿಯೇಷನ್ ಕಂಪನಿ ಹೆಲಿ ಟ್ಯಾಕ್ಸಿ ಸೇವೆಯನ್ನು ಆರಂಭಿಸಲಿದ್ದು ಈಗಾಗಲೇ ಎರಡು ಬೆಲ್ 407ಎಎಲ್ ವಿಮಾನ ನಿಲ್ದಾಣಕ್ಕೆ ಎಲೆಕ್ಟ್ರಾನಿಕ್ ಸಿಟಿಯಿಂದ ಸೇವೆಯನ್ನು ಒದಗಿಸಲಾಗುತ್ತದೆ.
ಇದರಿಂದ ಎಲೆಕ್ಟ್ರಾನಿಕ್ ಸಿಟಿಯಿಂದ ನಗರದ ಯಾವುದೇ ವಿಮಾನ ನಿಲ್ದಾಣಕ್ಕೆ ಕೇವಲ15 ನಿಮಿಷದ ಅವಧಿಯಲ್ಲಿ ತಲುಪಬಹುದಾಗಿದೆ. ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಜನಸಂದಣಿ ವೇಳೆ ಎಲೆಕ್ಟ್ರಾನಿಕ್ ಸಿಟಿಯಿಂದ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಬೆಳಗ್ಗೆ 6.30 ರಿಂದ 9.30 ರ ವೇಳೆ ಮೂರು ಟ್ರಿಪ್ ಗಳಲ್ಲಿ ಹಾಗೂ ಮಧ್ಯಾಹ್ನ3 ರಿಂದ ಸಂಜೆ 6.15 ರ ನಡುವಿನ ಅವಧಿಯಲ್ಲಿ ಮೂರು ಟ್ರಿಪ್ ಗಳಲ್ಲಿ ಹೆಲಿ ಟ್ಯಾಕ್ಸಿ ಪ್ರಯಾಣಿಕರಿಗೆ ಲಭ್ಯವಾಗಲಿದೆ.

ಈ ಅವಧಿಯಲ್ಲಿ ಅತಿ ಹೆಚ್ಚು ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ ಎಂದು ಅಂದಾಜಿಸಲಾಗಿದೆ. ನಾಲ್ಕು ಬ್ಲೇಡ್ ಸಾಮರ್ಥ್ಯದ ಸಿಂಗಲ್ ಎಂಜಿನ್ ನ ಬೆಲ್ 407 ಚಾಪರ್ ಹೆಲಿ ಟ್ಯಾಕ್ಸಿ ಸೇವೆಗೆ ಬಳಸಲಾಗುತ್ತಿದೆ. ಅದರ ಒಳಾಂಗಣ ಅನುಕೂಲತೆಗಳನ್ನು ಕಲ್ಪಿಸಲಾಗಿದೆ.
ಹೆಲಿ ಟ್ಯಾಕ್ಸಿಗೆ ಶುಲ್ಕವೆಷ್ಟು: ಪ್ರತಿಯೊಬ್ಬ ಪ್ರಯಾಣಿಕರಿಗೆ 3,500 ಶುಲ್ಕ ಹಾಗೂ ಜಿಎಸ್ ಟಿ ಸೇರಿದಂತೆ 4,130 ರೂ ಗಳನ್ನು ವಿಧಿಸಲಾಗುತ್ತಿದ್ದು ಇದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗೆ ಚಾಲನಾ ಸೇವೆಯನ್ನು ಒಳಗೊಂಡಿದೆ ಅಲ್ಲದೆ 15 ಕೆಜಿ ತೂಕದ ಲಗೇಜ್ ಗಳನ್ನು ಒಬ್ಬ ಪ್ರಯಾಣಿಕ ತೆಗೆದುಕೊಂಡು ಹೋಗಬಹುದಾಗಿದೆ ಇದಕ್ಕಿಂತ ಹೆಚ್ಚು ಭಾರದ ಲಗೇಜ್ ಗಳಿಗೆ ಹೆಚ್ಚುವರಿ ಶುಲ್ಕವನ್ನು ತೆರಬೇಕಾಗುತ್ತದೆ.
ಹೆಲಿ ಟ್ಯಾಕ್ಸಿ ಬುಕ್ ಮಾಡುವುದು ಹೇಗೆ: ಪ್ರಯಾಣಿಕರು ಟಿಕೇಟ್ ಗಳನ್ನು ಬುಕ್ ಮಾಡಲು 'ಫ್ಲೈ ನೌ' ಎನ್ನುವ ಮೊಬೈಲ್ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಬೇಕು. ಫೆ.23 ರಿಂದ ಟಿಕೇಟ್ ಗಳನ್ನು ಬುಕ್ ಮಾಡಬಹುದಾಗಿದೆ. ಅದಲ್ಲದೆ ಮುಂಗಡವಾಗಿ ಟಿಕೇಟ್ ಕಾಯ್ದಿರಿಸಲು ಕೂಡ 'ಫ್ಲೈ ಲೇಟರ್' ಆಪ್ಷನ್ ಒಳಗೊಂಡು ಟಿಕೇಟ್ ಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ವಿವರಗಳಿಗಾಗಿ ಇದೇ ವೇಳೆ ಡ್ರಾಪ್ ಮತ್ತು ಪಿಕ್ ಅಪ್ ವಿವರಗಳನ್ನು ಬೆಂಗಳೂರು ಏರ್ ಪೋರ್ಟ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಎಂದು ನಮೂದಿಸಬಹುದಾಗಿದೆ. ಹೆಲಿಟ್ಯಾಕ್ಸಿ ಸವೆಯನ್ನು ಮುಂಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ಸಿಟಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಎಚ್ ಎಎಲ್ ವಿಮಾನ ನಿಲ್ದಾಣ ಹೊರತುಪಡಿಸಿ ವಿವಿಧೆಡೆಯಲ್ಲೂ ಅವಕಾಶ ಕಲ್ಪಿಸಲಾಗುತ್ತದೆ ಥಂಬಿ ಏವಿಯೇಷನ್ ನ ವ್ಯವಹಾರ ಅಭಿವೃದ್ಧಿ ನಿರ್ದೇಶಕ ಗೋವಿಂದ್ ನಾಯರ್ ತಿಳಿಸಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications