ಹೆಲ್ಮೆಟ್ ಕಡ್ಡಾಯ: ಬೆಂಗಳೂರಿಗರಿಗೆ ಜನವರಿ 20 ಅಂತಿಮ ಗಡುವು
ಬೆಂಗಳೂರು, ಜನವರಿ, 12: ಈಗ ಎಲ್ಲ ಕಡೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯದ್ದೇ ಮಾತು. ಹೆಲ್ಮೆಟ್ ಕಡ್ಡಾಯ ನೀತಿ ಜನವರಿ 12 ರಿಂದಲೇ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಗೆ ಬಂದಿದೆ. ಪೊಲೀಸ್ ಇಲಾಖೆ ಕೊಂಚ ಸಡಿಲತೆ ತೋರಿಸಿದ್ದು ಜನವರಿ 20ರ ವರೆಗೆ ಕಾಲಾವಕಾಶ ನೀಡಿದೆ.
"ಜನವರಿ 20 ರ ನಂತರವೂ ಹೆಲ್ಮೆಟ್ ಧರಿಸದಿದ್ದಲ್ಲಿ ದಂಡ ವಿಧಿಸಲಾಗುತ್ತದೆ. 12 ವರ್ಷದ ಮೇಲಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇದು ಹೇರಿಕೆಯ ಕಾನೂನಲ್ಲ. ಜನರ ಪ್ರಾಣ ರಕ್ಷಣೆಗೆ ಮಾಡಿಕೊಳ್ಳಬೇಕಾದ ಸ್ವಯಂ ತಂತ್ರ" ಎಂದು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ ಮತ್ತು ಭದ್ರತೆ) ಡಾ.ಎಂ.ಎ.ಸಲೀಂ ಸ್ಪಷ್ಟಪಡಿಸಿದರು.[ಥತ್ತೇರಿಕೆ ... ಹುಡುಗಿ ಡ್ರಾಪ್ ಕೇಳಿದ್ರೂ ಕೊಡಂಗಿಲ್ಲ!]
ಬೆಂಗಳೂರು ಜಯನಗರದ ಸಾಗರ್ ಆಸ್ಪತ್ರೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಸಲೀಂ ಮಾತನಾಡಿ, "ಬೆಂಗಳೂರು ನಾಗರಿಕರಿಗೆ ಕಾನೂನು ಪರಿಪಾಲನೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಕಾಯ್ದೆ ಸಮರ್ಪಕ ಅನುಷ್ಠಾನವಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಟ್ರಾಫಿಕ್ ನಿಯಂತ್ರಣ, ರಸ್ತೆ ಸುರಕ್ಷತೆ ಮತ್ತು ಹೆಲ್ಮೆಟ್ ಯಾಕೆ ಧರಿಸಬೇಕು ಎಂಬ ವಿಚಾರಗಳನ್ನು ಮುಂದೆ ಇಟ್ಟರು. ಸಾಗರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಮಧುಸೂದನ್ ಹೆಲ್ಮೆಟ್ ಬಳಕೆ ಅಗತ್ಯದ ಬಗ್ಗೆ ವಿವರಣೆ ನೀಡಿದರು.[ಹೆಲ್ಮೆಟ್ ರೂಲಿಗೆ 'ಠೇಂಗಾ' ಅಂದ ಹಿಂಬದಿ ಸವಾರ!]

ಬೆಂಗಳೂರಿಗರೇ ಅದೃಷ್ಟವಂತರು!
ನವದೆಹಲಿ, ಮುಂಬೈ, ಜೈಪುರದಂಥ ನಗರಗಳಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಅನೇಕ ವರ್ಷಗಳೇ ಕಳೆದು ಹೋಗಿವೆ. ದೇಶದ ಉಳಿದ ನಗರಗಳಿಗೆ ಹೋಲಿಸಿದರೆ ಬೆಂಗಳೂರ ವಾತಾವರಣ ಚೆನ್ನಾಗಿದೆ. ಸೆಕೆ ಎಂಬ ಮತ್ತಿತರ ಕಾರಣ ನೀಡುವುದು ಸಮಂಜಸವಲ್ಲ ಎಂದು ಸಲೀಂ ಹೇಳಿದರು.

ಹಿಂಬದಿ ಸವಾರಿಗೆ ಎಚ್ಚರ ಕಡಿಮೆ
ವಾಹನ ಚಲಾಯಿಸುತ್ತಿರುವವರಿಗೆ ಮುಂದೆ ಏನಾಗುತ್ತಿದೆ? ವಾಹನವನ್ನು ಯಾವ ಕಡೆ ಚಲಾಯಿಸಬೇಕು? ಎಂಬುದರ ಅರಿವಿರುತ್ತದೆ. ಅಪಾಯ ಎದುರಾದಾಗ ಪ್ರತಿಕ್ರಿಯಿಸಲು ಕೊಂಚ ಸಮಯಾವಕಾಶ ದೊರೆಯುತ್ತದೆ. ಆದರೆ ಹಿಂಬದಿ ಸವಾರರಿಗೆ ಇದಾವುದರ ಅರಿವಿರಲ್ಲ. ಹಾಗಾಗಿ ಅವರು ಹೆಲ್ಮೆಟ್ ಧರಿಸಬೇಕು.

12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕಡ್ಡಾಯ
12 ವರ್ಷ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇದರಲ್ಲಿ ಯಾವ ಹೊಂದಾಣಿಕೆ ಇಲ್ಲ. ನಾವು ಜನವರಿ 20 ರಿಂದ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಲಿದ್ದೇವೆ ಎಂದು ಸಲೀಂ ತಿಳಿಸಿದರು.

ಜಾಗೃತಿ ಕಾರ್ಯಕ್ಕೆ ಕೈ ಜೋಡಿಸುತ್ತೇವೆ
ಬೆಂಗಳೂರು ಟ್ರಾಫಿಕ್ ಪೊಲೀಸರೊಂದಿಗೆ ನಾವು ಸದಾ ಸಂಪರ್ಕದಲ್ಲಿದ್ದೇವೆ. ಅವರು ಹಮ್ಮಿಕೊಂಡಿರುವ ರಸ್ತೆ ಸುರಕ್ಷಾ ಅಭಿಯಾನ ಮತ್ತು ಜಾಗೃತಿ ಕಾರ್ಯಕ್ರಮಗಳಿಗೆ ಆಸ್ಪತ್ರೆ ಕೈಜೋಡಿಸುತ್ತದೆ ಎಂದು ಸಾಗರ್ ಆಸ್ಪತ್ರೆಯ ಮುಖ್ಯ ನ್ಯೂರೋ ಸರ್ಜನ್ ಡಾ. ಮಧುಸೂದನ್ ಹೇಳಿದರು.

ಮಹಾನಗರ ಪಾಲಿಕೆಗಳು ಯಾವವು?
ಬೆಂಗಳೂರು, ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಢ, ಬೆಳಗಾವಿ, ಕಲಬುರಗಿ, ಬಳ್ಳಾರಿ ಮತ್ತು ವಿಜಯಪುರದಲ್ಲಿ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ









Click it and Unblock the Notifications