ಹೆಲ್ಮೆಟ್ ಕಡ್ಡಾಯ: ಬೆಂಗಳೂರಿಗರಿಗೆ ಜನವರಿ 20 ಅಂತಿಮ ಗಡುವು
ಬೆಂಗಳೂರು, ಜನವರಿ, 12: ಈಗ ಎಲ್ಲ ಕಡೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯದ್ದೇ ಮಾತು. ಹೆಲ್ಮೆಟ್ ಕಡ್ಡಾಯ ನೀತಿ ಜನವರಿ 12 ರಿಂದಲೇ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಗೆ ಬಂದಿದೆ. ಪೊಲೀಸ್ ಇಲಾಖೆ ಕೊಂಚ ಸಡಿಲತೆ ತೋರಿಸಿದ್ದು ಜನವರಿ 20ರ ವರೆಗೆ ಕಾಲಾವಕಾಶ ನೀಡಿದೆ.
"ಜನವರಿ 20 ರ ನಂತರವೂ ಹೆಲ್ಮೆಟ್ ಧರಿಸದಿದ್ದಲ್ಲಿ ದಂಡ ವಿಧಿಸಲಾಗುತ್ತದೆ. 12 ವರ್ಷದ ಮೇಲಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇದು ಹೇರಿಕೆಯ ಕಾನೂನಲ್ಲ. ಜನರ ಪ್ರಾಣ ರಕ್ಷಣೆಗೆ ಮಾಡಿಕೊಳ್ಳಬೇಕಾದ ಸ್ವಯಂ ತಂತ್ರ" ಎಂದು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ ಮತ್ತು ಭದ್ರತೆ) ಡಾ.ಎಂ.ಎ.ಸಲೀಂ ಸ್ಪಷ್ಟಪಡಿಸಿದರು.[ಥತ್ತೇರಿಕೆ ... ಹುಡುಗಿ ಡ್ರಾಪ್ ಕೇಳಿದ್ರೂ ಕೊಡಂಗಿಲ್ಲ!]
ಬೆಂಗಳೂರು ಜಯನಗರದ ಸಾಗರ್ ಆಸ್ಪತ್ರೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಸಲೀಂ ಮಾತನಾಡಿ, "ಬೆಂಗಳೂರು ನಾಗರಿಕರಿಗೆ ಕಾನೂನು ಪರಿಪಾಲನೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಕಾಯ್ದೆ ಸಮರ್ಪಕ ಅನುಷ್ಠಾನವಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಟ್ರಾಫಿಕ್ ನಿಯಂತ್ರಣ, ರಸ್ತೆ ಸುರಕ್ಷತೆ ಮತ್ತು ಹೆಲ್ಮೆಟ್ ಯಾಕೆ ಧರಿಸಬೇಕು ಎಂಬ ವಿಚಾರಗಳನ್ನು ಮುಂದೆ ಇಟ್ಟರು. ಸಾಗರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಮಧುಸೂದನ್ ಹೆಲ್ಮೆಟ್ ಬಳಕೆ ಅಗತ್ಯದ ಬಗ್ಗೆ ವಿವರಣೆ ನೀಡಿದರು.[ಹೆಲ್ಮೆಟ್ ರೂಲಿಗೆ 'ಠೇಂಗಾ' ಅಂದ ಹಿಂಬದಿ ಸವಾರ!]

ಬೆಂಗಳೂರಿಗರೇ ಅದೃಷ್ಟವಂತರು!
ನವದೆಹಲಿ, ಮುಂಬೈ, ಜೈಪುರದಂಥ ನಗರಗಳಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಅನೇಕ ವರ್ಷಗಳೇ ಕಳೆದು ಹೋಗಿವೆ. ದೇಶದ ಉಳಿದ ನಗರಗಳಿಗೆ ಹೋಲಿಸಿದರೆ ಬೆಂಗಳೂರ ವಾತಾವರಣ ಚೆನ್ನಾಗಿದೆ. ಸೆಕೆ ಎಂಬ ಮತ್ತಿತರ ಕಾರಣ ನೀಡುವುದು ಸಮಂಜಸವಲ್ಲ ಎಂದು ಸಲೀಂ ಹೇಳಿದರು.

ಹಿಂಬದಿ ಸವಾರಿಗೆ ಎಚ್ಚರ ಕಡಿಮೆ
ವಾಹನ ಚಲಾಯಿಸುತ್ತಿರುವವರಿಗೆ ಮುಂದೆ ಏನಾಗುತ್ತಿದೆ? ವಾಹನವನ್ನು ಯಾವ ಕಡೆ ಚಲಾಯಿಸಬೇಕು? ಎಂಬುದರ ಅರಿವಿರುತ್ತದೆ. ಅಪಾಯ ಎದುರಾದಾಗ ಪ್ರತಿಕ್ರಿಯಿಸಲು ಕೊಂಚ ಸಮಯಾವಕಾಶ ದೊರೆಯುತ್ತದೆ. ಆದರೆ ಹಿಂಬದಿ ಸವಾರರಿಗೆ ಇದಾವುದರ ಅರಿವಿರಲ್ಲ. ಹಾಗಾಗಿ ಅವರು ಹೆಲ್ಮೆಟ್ ಧರಿಸಬೇಕು.

12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕಡ್ಡಾಯ
12 ವರ್ಷ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇದರಲ್ಲಿ ಯಾವ ಹೊಂದಾಣಿಕೆ ಇಲ್ಲ. ನಾವು ಜನವರಿ 20 ರಿಂದ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಲಿದ್ದೇವೆ ಎಂದು ಸಲೀಂ ತಿಳಿಸಿದರು.

ಜಾಗೃತಿ ಕಾರ್ಯಕ್ಕೆ ಕೈ ಜೋಡಿಸುತ್ತೇವೆ
ಬೆಂಗಳೂರು ಟ್ರಾಫಿಕ್ ಪೊಲೀಸರೊಂದಿಗೆ ನಾವು ಸದಾ ಸಂಪರ್ಕದಲ್ಲಿದ್ದೇವೆ. ಅವರು ಹಮ್ಮಿಕೊಂಡಿರುವ ರಸ್ತೆ ಸುರಕ್ಷಾ ಅಭಿಯಾನ ಮತ್ತು ಜಾಗೃತಿ ಕಾರ್ಯಕ್ರಮಗಳಿಗೆ ಆಸ್ಪತ್ರೆ ಕೈಜೋಡಿಸುತ್ತದೆ ಎಂದು ಸಾಗರ್ ಆಸ್ಪತ್ರೆಯ ಮುಖ್ಯ ನ್ಯೂರೋ ಸರ್ಜನ್ ಡಾ. ಮಧುಸೂದನ್ ಹೇಳಿದರು.

ಮಹಾನಗರ ಪಾಲಿಕೆಗಳು ಯಾವವು?
ಬೆಂಗಳೂರು, ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಢ, ಬೆಳಗಾವಿ, ಕಲಬುರಗಿ, ಬಳ್ಳಾರಿ ಮತ್ತು ವಿಜಯಪುರದಲ್ಲಿ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ.
-
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ












Click it and Unblock the Notifications