ಮಹಾರಾಣಿ ಕಾಲೇಜು ಯುವತಿಯರ ಒಳ ಉಡುಪು ಕಳ್ಳನ ಬಂಧನ
ಬೆಂಗಳೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ಮಧ್ಯರಾತ್ರಿ ನುಗ್ಗಿ ಒಳ ಉಡುಪು ಕದ್ದೊಯ್ಯುತ್ತಿದ್ದ ಯುವಕನನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು, ಮಾರ್ಚ್ 22: ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ಮಧ್ಯರಾತ್ರಿ ನುಗ್ಗಿ ಒಳ ಉಡುಪು ಕದ್ದೊಯ್ಯುತ್ತಿದ್ದ ಯುವಕನನ್ನು ಹೈಗ್ರೌಂಡ್ ಪೊಲೀಸರು ಬುಧವಾರದಂದು ಬಂಧಿಸಿದ್ದಾರೆ.
ಮಧ್ಯರಾತ್ರಿ ವೇಳೆ ಹಾಸ್ಟೆಲ್ ತಾರಸಿಗೆ ನುಗ್ಗುತ್ತಿದ್ದ ಈ ಯುವಕ, ಯುವತಿಯರ ಒಳ ಉಡುಪನ್ನು ಧರಿಸಿಕೊಂಡು ಬಂದು, ಯುವತಿಯರು ಒಣಗಲು ಹಾಕಿರುವ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.[ವಿದ್ಯಾರ್ಥಿನಿಯರ ಒಳ ಉಡುಪು ಕದಿಯುವ ಯಾರು ಈ ವಿಕೃತ ಕಾಮಿ?]
ಇದಲ್ಲದೆ ಹುಡುಗಿಯರಂತೆ ನಡೆಯುವುದು, ನಾಚಿಕೊಳ್ಳುತ್ತಿದ್ದ, ವಿಚಿತ್ರ ಕಾಟ ಕೊಡುತ್ತಿದ್ದ ಈತನ ಬಗ್ಗೆ ನಗರದ ಹೈಗ್ರೌಂಡ್ ಠಾಣೆಗೆ ದೂರು ನೀಡಲಾಗಿತ್ತು.

ಯುವಕನನ್ನು ಬಂಧಿಸಲು ಪೊಲೀಸರು ವಿಶೇಷ ತಂಡ ರಚಿಸಿದ್ದರು. ಆತನ ತಲೆಯಲ್ಲಿ ಎರಡು ಸುಳಿ ಇರುವುದು ಪತ್ತೆಯಾಯಿತು. ಇದರಿಂದ ಮಫ್ತಿಯಲ್ಲಿ ಆತನನ್ನು ಹಿಂಬಾಲಿಸಿ ಬುಧವಾರದಂದು ಬಂಧಿಸಲು ಸಾಧ್ಯವಾಯಿತು, ಆತನ ಹೆಸರು ಅಬು ತಾಲಿಮ್(24 ವರ್ಷ) ಎಂದು ಪೊಲೀಸರು ಹೇಳಿದರು.
ಫೆಬ್ರವರಿ 12ರಂದು ರಾತ್ರಿ 12ಕ್ಕೆ ಹಾಸ್ಟೆಲ್ಗೆ ಆತ ಬಂದಿದ್ದ. ಆಗ ಆತನ ವಿಚಿತ್ರ ನಡವಳಿಕೆ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ದೃಶ್ಯವನ್ನೇ ಆಧರಿಸಿ ಹಾಸ್ಟೆಲ್ನ ವಾರ್ಡನ್ ಸುಮಿತ್ರಾ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಸೋಮವಾರ ದೂರು ನೀಡಿದ್ದರು.
#CAUGHTONCAM: Man enters college hostel in Bengaluru, flees with women's innerwear pic.twitter.com/FcvE7Bnicn
— ANI (@ANI_news) March 22, 2017
ಮೂರು ಅಥವಾ ಆರು ತಿಂಗಳಿಗೊಮ್ಮೆ ಬಂದು ಹೋಗುವ ಈ ವ್ಯಕ್ತಿ ಯುವತಿಯರ ಒಳ ಉಡುಪುಗಳನ್ನೆಲ್ಲ ಕದ್ದೊಯ್ಯುತ್ತಿದ್ದ, ಒಳ ಉಡುಪು ಕದಿಯುವುದರಲ್ಲಿ ಮಾನಸಿಕ ತೃಪ್ತಿ ಅನುಭವಿಸುತ್ತಿದ್ದ ಎಂದು ತಿಳಿದು ಬಂದಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ











Click it and Unblock the Notifications