ಬೆಂಗಳೂರಿನ ಪ್ರಸಿದ್ಧ ಹೋಟೆಲ್ನಲ್ಲಿ ದೋಸಾ, ಚಿಕನ್ ಕರಿ ಜೊತೆ 'ಗ್ಯಾಸ್' ಶುಲ್ಕ ವಸೂಲಿ: ರೊಚ್ಚಿಗೆದ್ದ ಗ್ರಾಹಕ ಮಾಡಿದ್ದೇನು?
Bengaluru Hotel Bill: ಬೆಂಗಳೂರಿನ ಜನಪ್ರಿಯ 'ಮಿಸ್ಟರ್ ಆಂಧ್ರ ಮೀಲ್ಸ್' (Mr Andhra Meals) ಎಂಬ ಹೋಟೆಲ್ಗೆ ಗ್ರಾಹಕರೊಬ್ಬರು ತಿಂಡಿಗೆಂದು ಭೇಟಿ ನೀಡಿದ್ದರು. ಈ ವೇಳೆ ಹೋಟೆಲ್ ಬಿಲ್ನಲ್ಲಿ 'ಗ್ಯಾಸ್ ಸಪ್ಲೈ ಶುಲ್ಕ' (gas supply issue) ಎಂಬ ಹೆಸರಿನಲ್ಲಿ ಹೆಚ್ಚುವರಿಯಾಗಿ 30 ರೂಪಾಯಿಗಳನ್ನು ವಿಧಿಸಿರುವ ಅಚ್ಚರಿ ಘಟನೆ ನಡೆದಿದೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಗ್ರಾಹಕರು ತಾವು ತಂಗಿದ್ದ ಪಿಜಿಯಲ್ಲಿ (PG) ಆಹಾರದ ಕೊರತೆಯಿದ್ದ ಕಾರಣ ಹೋಟೆಲ್ಗೆ ಹೋಗಿದ್ದರು. ಅಲ್ಲಿ ಇಂತಹ ವಿಚಿತ್ರ ಶುಲ್ಕ ವಿಧಿಸಿರುವುದನ್ನು ಕಂಡು, ಇದು ಎಲ್ಪಿಜಿ ಕೊರತೆ ಎಂಬ ಹೆಸರು ಬಳಸಿಕೊಂಡು ನಡೆಯುತ್ತಿರುವ "ದೊಡ್ಡ ಹಗರಣ" ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ನ ಫೋಟೋ ಹಂಚಿಕೊಂಡಿರುವ ಅವರು, ಬೆಂಗಳೂರು ಪೊಲೀಸರಿಗೆ ದೂರು ನೀಡುವಂತೆ ಟ್ಯಾಗ್ ಮಾಡಿ, ಹೋಟೆಲ್ಗಳು ಜನರನ್ನು ಲೂಟಿ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋಟೆಲ್ ಅಸೋಸಿಯೇಷನ್ ಪ್ರತಿಕ್ರಿಯೆ
ಈ ವಿವಾದದ ಬಗ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಪ್ರತಿಕ್ರಿಯಿಸಿದ್ದು, ಸದರಿ ಹೋಟೆಲ್ ತಮ್ಮ ಸದಸ್ಯತ್ವವನ್ನು ಹೊಂದಿಲ್ಲ ಮತ್ತು ಈ ವಿಷಯದ ಬಗ್ಗೆ ಗಮನಹರಿಸುವುದಾಗಿ ಎಂದು ತಿಳಿಸಿದ್ದಾರೆ. ಅಲ್ಲದೆ, ಇಂತಹ ಪದ್ಧತಿಗಳನ್ನು ಕೈಬಿಡುವಂತೆ ಹೋಟೆಲ್ ಆಡಳಿತ ಮಂಡಳಿಯೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಬಿಲ್ನಲ್ಲಿ ಆಹಾರದ ಜೊತೆಗೆ ಗ್ಯಾಸ್ ಶುಲ್ಕ
* ಪ್ಲೇನ್ ಪೆಸರಾ ದೋಸಾ 2 - 80 ರೂಪಾಯಿ
* ಚಿಕನ್ ಕರಿ (Half) - 120 ರೂಪಾಯಿ
* ಗ್ಯಾಸ್ (Gas Supply issue) - 30 ರೂಪಾಯಿ
ಸಾಮಾಜಿಕ ಜಾಲತಾಣದಲ್ಲಿ ಈ ವಿಷಯದ ಕುರಿತು ಚರ್ಚೆ ನಡೆಯುತ್ತಿದ್ದು, ಗ್ರಾಹಕರು ಇದನ್ನು 'ದೊಡ್ಡ ವಂಚನೆ' ಎಂದು ಕರೆದಿದ್ದಾರೆ ಮತ್ತು ಎಲ್ಪಿಜಿ (LPG) ಕೊರತೆಯ ಲಾಭವನ್ನು ಹೋಟೆಲ್ ಪಡೆದುಕೊಳ್ಳುತ್ತಿದೆ. ಈ ರೀತಿ ಸಾರ್ವಜನಿಕರನ್ನು ಲೂಟಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗೆ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿನ ಕೊರತೆಯ ನಡುವೆಯೇ, ಭಾರತದ ಕೆಲವು ಭಾಗಗಳಲ್ಲಿನ ರೆಸ್ಟೋರೆಂಟ್ಗಳು ಗ್ರಾಹಕರ ಬಿಲ್ನಲ್ಲಿ 'ಎಲ್ಪಿಜಿ ಶುಲ್ಕ'ವನ್ನು ವಿಧಿಸಲು ಪ್ರಾರಂಭಿಸಿದ್ದು, ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಗಳು ವ್ಯಕ್ತವಾಗುತ್ತಿವೆ.
Already in Bangalore PG announced food shortages and won’t be varieties. Went to hotel they are charging for gas shortage. Such a scam, they looting us every possible way @BlrCityPolice @CPBlr pic.twitter.com/ssBmc26DaA
— naresh kumar (@naresh__kumar_) March 11, 2026
ಇಸ್ರೇಲ್-ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದಿಂದ ಎಲ್ಪಿಜಿ ರವಾನೆಯಲ್ಲಿ ಉಂಟಾಗಿರುವ ಕೊರತೆಯು ಬೆಲೆ ಏರಿಕೆಗೆ ಕಾರಣವಾಗಿದೆ. ಈ ಪರಿಸ್ಥಿತಿಯಿಂದಾಗಿ ರೆಸ್ಟೋರೆಂಟ್ಗಳು, ಹೋಟೆಲ್ಗಳಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಗೆ ಅಡ್ಡಿಯುಂಟಾಗಿದೆ. ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಎಲ್ಪಿಜಿ ಸಿಲಿಂಡರ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವರು ಇದನ್ನೇ ನೆಪವಾಗಿ ಇಟ್ಟುಕೊಂಡು ಗ್ರಾಹಕರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
ರೆಸ್ಟೋರೆಂಟ್ ಅಸೋಸಿಯೇಷನ್ ಹೇಳೋದೇನು?
ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಈ ಮೊದಲೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಬಳಿ ಆತಂಕ ವ್ಯಕ್ತಪಡಿಸಿತ್ತು. ಎಲ್ಪಿಜಿ ಪೂರೈಕೆಯ ವಿಷಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇತ್ತೀಚೆಗೆ ಹೊರಡಿಸಲಾದ ನಿರ್ದೇಶನವು, ವಾಣಿಜ್ಯ ಅಡುಗೆ ಅನಿಲವನ್ನೇ ಅವಲಂಬಿಸಿರುವ ರೆಸ್ಟೋರೆಂಟ್ಗಳಂತಹ ಸಂಸ್ಥೆಗಳಿಗೆ ಅನುಕೂಲಕರವಾಗಿಲ್ಲ ಎಂದು ಸಂಘವು ತಿಳಿಸಿತ್ತು.
ಪತ್ರದ ಮೂಲಕ ಮನವಿ ಮಾಡಿದ್ದು, "ರೆಸ್ಟೋರೆಂಟ್ ಉದ್ಯಮವು ವಾಣಿಜ್ಯ ಎಲ್ಪಿಜಿ ಮೇಲೆ ಅವಲಂಬಿತವಾಗಿದೆ. ಇದರಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾದರೂ, ಅದು ಬಹುಪಾಲು ರೆಸ್ಟೋರೆಂಟ್ಗಳು ಮುಚ್ಚುವಂತಹ ಪರಿಸ್ಥಿತಿಗೆ ಕಾರಣವಾಗಲಿದೆ," ಎಂದು ತಿಳಿಸಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications