Bengaluru: LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ, ತಿಂಡಿ ದರ ಹೆಚ್ಚಾಗುತ್ತಾ?, ಹೋಟೆಲ್ ಸಂಘ ಹೇಳಿದ್ದೇನು?
ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಳೆ ಏರಿಕೆ ಮಧ್ಯೆ ಪುನಃ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಾಗಿದೆ. ಇದು ಹೋಟೆಲ್ ತಿಂಡಿ, ತಿನಿಸುಗಳ ದರ ಏರಿಕೆಯ ಮುನ್ಸೂಚನೆಯಾಗಿದೆ.
ಬೆಂಗಳೂರು, ಮಾರ್ಚ್ 01: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಳೆ ಏರಿಕೆ ಮಧ್ಯೆ ಪುನಃ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ (LPG Cylinder) ದರವನ್ನು ಮತ್ತೆ ಹೆಚ್ಚಳ ಮಾಡಿದೆ. ಇದು ಹೋಟೆಲ್ ತಿಂಡಿ, ತಿನಿಸುಗಳ ದರ ಏರಿಕೆಯ ಮುನ್ಸೂಚನೆಯಾಗಿದೆ.
ಸರ್ಕಾರ ಪದೇ ಪದೆ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುತ್ತಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬೀಳುವ ಸಾಧ್ಯತೆ ಇದೆ. ಸರ್ಕಾರದ ದರ ಏರಿಕೆ ನಿರ್ಧಾರಕ್ಕೆ ಬೃಹತ್ ಬೆಂಗಳೂರು ಹೋಟೆಲುಗಳ ಸಂಘವು ವಿರೋಧ ವ್ಯಕ್ತಪಡಿಸಿದೆ.

ಬೆಲೆ ಏರಿಕೆ ಮಾಡದಂತೆ ನಾವು ಈ ಹಿಂದೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಹೀಗದ್ದರು ಸಿಲಿಂಡರ್ ದರ ಹೆಚ್ಚಾಗಿದೆ. ಈ ಸಂಬಂಧ ಸಭೆ ಸೇರಿ ಮತ್ತೊಮ್ಮೆ ಮನವಿ ಪತ್ರ ಸಲ್ಲಿಸಲಿದ್ದೇವೆ. ಅಲ್ಲಿಯವರೆಗೆ ಹೋಟೆಲ್ಗಳ ತಿಂಡಿ ತಿನಿಸು ಊಟಗಳ ಬೆಲೆಯಲ್ಲಿ ಏರಿಕೆ ಇಲ್ಲ ಎಂದು ಸಂಘದ ಅಧ್ಯಕ್ಷ ಪಿ.ಸಿ.ರಾವ್ ಸ್ಪಷ್ಟಪಡಿಸಿದ್ದಾರೆ. ಸಂಘವು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಅವರ ಮನವಿಗೆ ಬೆಲೆ ಸಿಗದಿದ್ದ ಪಕ್ಷದಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಜನ ಸಾಮಾನ್ಯರಿಗೆ ಹಾಗೂ ಹೋಟೆಲ್ ಮಾಲೀಕರಿಗೂ ದರ ಏರಿಕೆ ಆರ್ಥೀಕ ಹೊರೆಯಾಗಲಿದೆ. ಈ ಸಂಬಂಧ ಮಾರ್ಚ್ 16ರಂದು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇವೆ. ಜಿಎಸ್ಟಿ ತೆರಿಗೆ ಹೇರಿಕೆ ನಮಗೆ ಹೆಚ್ಚಾಗಿದೆ. ಡೊಮೆಸ್ಟಿಕ್ ರೇಟ್ನಲ್ಲಿ 5% ಜಿಎಸ್ಟಿ ಇದೆ. ಆದರೆ ನಮಗೆ ಕಮರ್ಷಿಯಲ್ ರೇಟ್ನಲ್ಲಿ ಜಿಎಸ್ಟಿ 18% ಹಾಕಲಾಗಿದೆ.ಅಲ್ಲದೇ ನಮಗೆ ರಿಯಾಯಿತಿ ದರವು ಜಾಸ್ತಿ ಮಾಡಲಾಗಿದೆ. ಈ ಕುರಿತು ಕೇಂದ್ರ ಸಚಿವರ ಬಳಿ ಮಾತನಾಡಿ ಮುಂದಿನ ನಿರ್ಧಾರ ಪ್ರಕಟಿಸಲಿದ್ದೇವೆ ಎಂದು ಪಿ.ಸಿ ರಾವ್ ತಿಳಿಸಿದರು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಮನೆ ಬಳಕೆಯ LPG ಸಿಲಿಂಡರ್ ಬೆಲೆ ಮೊದಲಿದ್ದ 1055.50ರೂ.ನಿಂದ 1105.50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಇನ್ನೂ ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ LPG ಸಿಲಿಂಡರ್ ಬೆಲೆ ಮೊದಲಿದ್ದ 1839.520ರೂ.ನಿಂದ 2190 ರೂಪಾಯಿಗೆ ಏರಿಕೆ ಆಗಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಕರ್ನಾಟಕದ ಚುನಾವಣೆಯು ಇನ್ನೇನು ಸಮೀಪಿಸುತ್ತಿದೆ. ಸದ್ಯ ಯಾವುದೇ ಬೆಲೆ ಏರಿಕೆ ಮಾಡದೇ ಕೇಂದ್ರ ಸರ್ಕಾರ ಚುನಾವಣೆ ಬಳಿಕ ಕೆಲವು ವಸ್ತುಗಳ/ಸಿಲಿಂಡರ್ ಬೆಲೆ ಹೆಚ್ಚಾಗಬಹುದು ಎಂದು ಊಹಿಸಲಾಗಿತ್ತು. ಆದರೆ ಚುನಾವಣೆಗೂ ಮುನ್ನವೇ ಬೆಲೆ ಏರಿಕೆ ಆಗಿ ಅಚ್ಚರಿ ಮೂಡಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications