Bengaluru Weather: ದೆಹಲಿಗಿಂತ ಬೆಂಗಳೂರಿನ ತಾಪಮಾನ ಹೆಚ್ಚಳ; ಹವಾಮಾನ ಇಲಾಖೆ ಹೇಳಿದ್ದೇನು?
ಬೆಂಗಳೂರು ಸಿಲಿಕಾನ್ ಸಿಟಿ, ಐಟಿ ಸಿಟಿ ಎಂದೆಲ್ಲಾ ಹೆಸರು ಪಡೆದಿದೆ. ಅದಕ್ಕೂ ಮುನ್ನ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ಕರೆಯಲಾಗುತ್ತಿತ್ತು, ಬೇಸಿಗೆಯಲ್ಲೂ ಬೆಂಗಳೂರು ಕೂಲ್ ಆಗಿರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿಗೂ ಬೇಸಿಗೆ ಬಿಸಿ ತಟ್ಟಲು ಆರಂಭಿಸಿದೆ. 2025ರಲ್ಲಿ ಕೂಡ ಬೇಸಿಗೆ ತಾಪ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಫೆಬ್ರವರಿ 17 ರಂದು (ಸೋಮವಾರ) ನಗರದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದೆ. ದೆಹಲಿಯ ತಾಪಮಾನವನ್ನು ಮೀರಿಸಿರುವುದು ವಿಶೇಷ. ಸೋಮವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ನಗರದ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಭಾರತೀಯ ಹಮಾಮಾನ ಇಲಾಖೆ ( ಐಎಂಡಿ) ತಿಳಿಸಿದೆ.

ವರ್ಷಪೂರ್ತಿ ಆಹ್ಲಾದಕರ ವಾತಾವರಣ ಹೊಂದಿರುವ ಬೆಂಗಳೂರು, ಮುಂದಿನ ದಿನಗಳಲ್ಲಿ ತಾಪಮಾನದ ವಿಚಾರದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯನ್ನೇ ಮೀರಿಸಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಈ ಬಾರಿ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ತಾಪಮಾನ ಹೆಚ್ಚವುದು ಖಚಿತವಾಗಿದೆ. 2024ರ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಬೆಂಗಳೂರಿನ ತಾಪಮಾನ 2.7 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ. ದೆಹಲಿಯಲ್ಲಿ ಸೋಮವಾರ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬೆಂಗಳೂರಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ.
ಫೆಬ್ರವರಿ 17, 2025 ರಂದು 35.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು ಈವರೆಗಿನ ಬಿಸಿಯಾದ ದಿನವಾಗಿದೆ. ಹಗಲಿನ ಹೊತ್ತು ನಗರದಲ್ಲಿ ತಾಪಮಾನ ಹೆಚ್ಚುತ್ತಿದ್ದು, ಸಂಜೆ ವೇಳೆ ಚಳಿ ವಾತಾವರಣ ಇರುತ್ತದೆ. ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರುತ್ತದೆ, ಆದರೂ ಬೆಂಗಳೂರು ದೆಹಲಿಗಿಂತ ಹೆಚ್ಚಿನ ತಾಪಮಾನವಿರುತ್ತದೆ.
ಬೇಸಿಗೆ ಯಾವಾಗ ಆರಂಭ?
ಸಾಮಾನ್ಯವಾಗಿ ಮಾರ್ಚ್ ಮೊದಲವಾರದಲ್ಲಿ ಬೆಂಗಳೂರಿನಲ್ಲಿ ಬೇಸಿಗೆ ಆರಂಭವಾಗುತ್ತದೆ. ಆದರೆ ಈ ವರ್ಷ ಫೆಬ್ರವರಿ ಕೊನೆಯ ವಾರದಲ್ಲೇ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಮಾರುತಗಳು ಬೀಸದೆ ಇರುವುದೇ ಇದಕ್ಕೆ ಕಾರಣ ಎಂದು ಐಎಂಡಿ ತಿಳಿಸಿದೆ. ಉತ್ತರ ಮಾರುತಗಳು ತಾಪಮಾನವನ್ನು ತಂಪು ಮಾಡುವ ಮೂಲಕ ಸಮತೋಲಗೊಳಿಸಲು ಸಹಾಯ ಮಾಡುತ್ತದೆ. ಲಾ ನಿನಾ ವಿದ್ಯಮಾನವು ಬೆಂಗಳೂರಿನ ಹವಾಮಾನದ ಮೇಲೆ ಪರಿಣಾಮ ಬೀರುತ್ತಿರಬಹುದು ಎಂದು ಹವಾಮಾನಶಾಸ್ತ್ರಜ್ಞರು ಸುಳಿವು ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications