ಕೊರೊನಾ ಲಸಿಕೆ ಕೊಡುವ ವೈಧ್ಯರ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ
ಬೆಂಗಳೂರು, ಡಿ. 30: ನಾವು ವೈದ್ಯರು, ಕೊರೊನಾಗೆ ಹೊಸ ರೀತಿಯ ವ್ಯಾಕ್ಸಿನ್ ಕೊಡ್ತೀವಿ ಎಂದು ಹೇಳಿಕೊಂಡು ಮನೆಗೆ ನುಗ್ಗಿರುವ ಕಿರಾತಕರು ಮನೆಯಲ್ಲಿದ್ದವರನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ತಡವಾಗಿ ಬೆಳಕಿಗೆ ಬಂದಿದೆ. ದರೋಡೆ ಮಾಡಿದ್ದ ಪ್ರಮುಖ ಆರೋಪಿ ಜಾಡು ಹಿಡಿದು ಬಂಧಿಸಲು ತೆರಳಿದ ಯಶವಂತಪುರ ಪೊಲೀಸ್ ಸಬ್ಇನ್ಸಪೆಕ್ಟರ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.
ಹೌದು ಇಂತಹ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡಿ. 29 ರಂದು ಜೆ.ಪಿ. ಪಾರ್ಕ್ ಸಮೀಪ ಸಂಪಂತ್ ಸಿಂಗ್ ಎಂಬುವರ ಮನೆಗೆ ವೈದ್ಯರ ಸೋಗಿನಲ್ಲಿ ದರೋಡೆಕೋರರು ಎಂಟ್ರಿ ಕೊಟ್ಟಿದ್ದಾರೆ.
ವೈದ್ಯರ ಸಮವಸ್ತ್ರ ಧರಿಸಿದ್ದ ಕಿರಾತಕರು, ಸಂಪತ್ ಸಿಂಗ್ ಪತ್ನಿ ಪಿಸ್ತಾ ಸಿಂಗ್ ಹಾಗೂ ಅವರ ಸೊಸೆ ರಕ್ಷಾ ಕೈಕಾಲು ಕಟ್ಟಿ ಪಿಸ್ತೂಲು ತೋರಿಸಿ ಹೆದರಿಸಿದ್ದಾರೆ. ಆ ಬಳಿಕ ಮನೆಯಲ್ಲಿದ್ದ ಚಿನ್ನಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಸಂಪಂತ್ ಸಿಂಗ್ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಿಸಿಟಿವಿ ಆಧರಸಿ ದರೋಡೆಕೋರರ ಬೆನ್ನಟ್ಟಿ ಯಶವಂತಪುರ ಠಾಣೆ ಸಬ್ಇನ್ಸ್ಪೆಕ್ಟರ್ ವಿನೋದ್ ರಾಥೋಡ್ ತನಿಖೆ ನಡೆಸಿದ್ದು, ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ. ಸಂಜಯ್ ನಗರ ಠಾಣಾ ವ್ಯಾಪ್ತಿಯ ಭೂಪಸಂದ್ರದಲ್ಲಿ ಆರೋಪಿಯೊಬ್ಬ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಅಲ್ಲಿಗೆ ತೆರಳಿದ್ದಾರೆ. ಭೂಪಸಂದ್ರದ ರೈಲ್ವೇ ಹಳಿಯ ನಿರ್ಜನ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಬಂಧಿಸಲು ತೆರಳಿದ್ದಾರೆ.

ಪ್ರಮುಖ ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನೋದ್ ರಾಥೋಡ್ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿರುವ ವಿನೋದ್ ಅವರನ್ನು ಬಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಯಾನಕ ಪ್ಲಾನ್: ವೈದ್ಯರ ಸೋಗಿನಲ್ಲಿ ಸಂಪತ್ ಸಿಂಗ್ ಮನೆಗೆ ಮೂವರು ಎಂಟ್ರಿ ಕೊಟ್ಟಿದ್ರು. ಒಂದು ಕಾರು ಹಾಗೂ ಬೈಕ್ ನಲ್ಲಿ ತೆರಳಿ, ನಾವು ವೈದ್ಯರು. ಕೊರೊನಾಗೆ ಹೊಸ ರೀತಿಯ ಲಸಿಕೆ ಬಂದಿದೆ. ಇದು ಹಾಕಿಸಿಕೊಂಡರೆ ಓಮಿಕ್ರಾನ್ ಬರಲ್ಲ ಎಂದು ನಂಬಿಸಿದ್ದಾರೆ. ಕಡ್ಡಾಯವಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲೇಬೇಕು ಎಂದು ಹೇಳಿದ್ದಾರೆ. ಇದನ್ನು ಖಚಿತ ಪಡಿಸಿಕೊಳ್ಳಲು ಪಿಸ್ತಾದೇವಿ ಗಂಡನಿಗೆ ಪೋನ್ ಮಾಡಲು ಯತ್ನಿಸಿದ್ದಾರೆ. ಆ ಬಳಿಕ ಪಿಸ್ತೂಲ್ ಹಣೆಗೆ ಇಟ್ಟು ಬೆದರಿಸಿದ್ದಾರೆ. ಬಳಿಕ ಸೊಸೆ ರಕ್ಷಾ ಅವರನ್ನು ಹಗ್ಗದಿಂದ ಕಟ್ಟಿಹಾಕಿ 50 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಪೊಲೀಸ್ ವ್ಯಾಯಾಮ ಶಾಲೆಗೆ ಚಾಲನೆ: ನಗರ ಸಶಸ್ತ್ರ ಪೊಲೀಸ್ (ದಕ್ಷಿಣ ಘಟಕ) ದಲ್ಲಿ, ಇನ್ಫೋಸಿಸ್ ಫೌಂಡೇಶನ್ ನೆರವಿನಿಂದ ನಿರ್ಮಿಸಿರುವ ಕ್ರೀಡಾ ಮೈದಾನವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಗೃಹ ಸಚಿವರು, ಪೊಲೀಸರು ಯಾವಾಗಲೂ ಶಿಸ್ತಿನಿಂದ ಇರಬೇಕು. ದೈಹಿಕವಾಗಿಯೂ ಆರೋಗ್ಯವಂತವಾಗಿರಬೇಕು. ಈ ನಿಟ್ಟಿನಲ್ಲಿ ಪ್ರಾರಂಭಿಸಿರುವ ಜಿಮ್ನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ ರಾಮಲಿಗಾರೆಡ್ಡಿ, ರಾಜ್ಯ ಸಭಾ ಸದಸ್ಯ ಕೆ ಸಿ ರಾಮಮೂರ್ತಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹಾಗೂ ಇತರರು, ಉಪಸ್ಥಿತರಿದ್ದರು.
Recommended Video
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications