ಬೆಂಗಳೂರಲ್ಲಿ HR ಕೆಲಸ ಖಾಲಿ ಇದೆ, ಆದ್ರೆ ಕನ್ನಡಿಗರು ಬೇಡ: ವಿವಾದ ಸೃಷ್ಟಿಸಿದ ಉದ್ಯೋಗ ಜಾಹೀರಾತು
ಕರ್ನಾಟಕದಲ್ಲಿ ಈಗಾಗಲೇ ಎಲ್ಲ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸಬೇಕು ಎನ್ನುವ ಕಡ್ಡಾಯ ನಿಯಮ ಜಾರಿಯಲ್ಲಿದೆ. ಆದರೆ ಬೆಂಗಳೂರಿನ ಖಾಸಗಿ ಕಂಪನಿಯೊಂದು ನೀಡಿರುವ ಉದ್ಯೋಗ ಜಾಹೀರಾತು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಾನವ ಸಂಪನ್ಮೂಲ (HR) ಹುದ್ದೆಗೆ ಅರ್ಜಿ ಆಹ್ವಾನಿಸುವ ವೇಳೆ, ಜಾಹೀರಾತಿನಲ್ಲಿ 'ಕನ್ನಡೇತರ' ಅಭ್ಯರ್ಥಿಗಳಿಗೆ ಆದ್ಯತೆ ಎಂಬ ಷರತ್ತು ಹಾಕಿರುವ ಆರೋಪ ಕೇಳಿಬಂದಿದೆ. ಈ ಜಾಹೀರಾತಿನ ಸ್ಕ್ರೀನ್ಶಾಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಕನ್ನಡಿಗರು ಹಾಗೂ ಕನ್ನಡಪರ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ ಎಂಬ ಖಾಸಗಿ ಕಂಪನಿಯ ನೀಡಿರುವ ಈ ಉದ್ಯೋಗ ಜಾಹೀರಾತಿನ ಸ್ಕ್ರೀನ್ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, "ಇದು ಕನ್ನಡ ಭಾಷೆ ಮತ್ತು ಸ್ಥಳೀಯ ಸಂಸ್ಕೃತಿಗೆ ಮಾಡಿದ ಅವಮಾನ" ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕಂಪನಿಯೇ ಈ ರೀತಿಯ ಷರತ್ತು ವಿಧಿಸಿರುವುದು ಸ್ವೀಕಾರಾರ್ಹವಲ್ಲ ಎಂದು ಕನ್ನಡ ಪರ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲ್ ಆದ ಪೋಸ್ಟ್ನಲ್ಲಿ 'ಡೈವರ್ಸಿಟಿ' (diversity) ಎಂಬ ಪದವನ್ನು ಉಲ್ಲೇಖಿಸಲಾಗಿದೆ. ಆದರೂ 'ನಾನ್-ಕನ್ನಡ' ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಅಗತ್ಯವೇನು? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಭಾಷಾ ವೈವಿಧ್ಯತೆ ಹೆಸರಿನಲ್ಲಿ ಸ್ಥಳೀಯರಿಗೆ ಅನ್ಯಾಯವಾಗುವ ರೀತಿಯಲ್ಲಿ ನೇಮಕಾತಿ ನಡೆಸುವುದು ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ "ಇದು ಉದ್ಯೋಗದಲ್ಲಿ ಭಾಷಾ ಆಧಾರಿತ ಭೇದಭಾವ", "ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಅವಕಾಶ ನಿರಾಕರಣೆ ಯಾಕೆ?" ಎಂಬ ಪ್ರಶ್ನೆಗಳು ಟ್ರೆಂಡ್ ಆಗುತ್ತಿವೆ.
ಕನ್ನಡಪರ ಸಂಘಟನೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿವೆ. ಸಂಬಂಧಿಸಿದ ಕಂಪನಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಜಾಹೀರಾತುಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮಾರ್ಗಸೂಚಿ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
'ಡೈವರ್ಸಿಟಿ' ಎಂಬ ಪದದ ಅರ್ಥವನ್ನು ಹೇಗೆ ಬಳಸಲಾಗಿದೆ? 'ನಾನ್-ಕನ್ನಡ' ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಹಿನ್ನಲೆ ಏನು ಎಂಬುದರ ಕುರಿತು ಕಂಪನಿಯಿಂದ ಅಧಿಕೃತ ಪ್ರತಿಕ್ರಿಯೆ ಕೇಳುತ್ತಿದ್ದಾರೆ. ಉದ್ಯೋಗ ಕ್ಷೇತ್ರದಲ್ಲಿ ಭಾಷಾ ಗೌರವ ಮತ್ತು ಸ್ಥಳೀಯರ ಹಕ್ಕುಗಳ ಕುರಿತು ಮತ್ತೊಮ್ಮೆ ದೊಡ್ಡ ಚರ್ಚೆಗೆ ಈ ಘಟನೆ ದಾರಿ ಮಾಡಿಕೊಟ್ಟಿದೆ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಉದ್ಯೋಗಾವಕಾಶಗಳ ರಕ್ಷಣೆಯ ವಿಷಯದಲ್ಲಿ ಸರ್ಕಾರ ಯಾವ ರೀತಿಯ ನಿಲುವು ತಾಳುತ್ತದೆ ಎಂಬುದು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಇಂದು ವಿಷಯ ತಿಳಿದಾಗ ನಮ್ಮ ಯುವ ಕರ್ನಾಟಕ ವೇದಿಕೆ ಕಂಪನಿ ಮುಂದೆ ಪ್ರತಿಭಟನೆ ಮಾಡಲು ಮುಂದಾಗಿದ್ದು
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) January 12, 2026
ಕಂಪನಿ ಬೆಂಗಳೂರು ಮುಖ್ಯಸ್ಥರ ಜೊತೆಗೆ ಖುದ್ದಾಗಿ ಕರೆ ಮಾಡಿ ಮಾತನಾಡಲಾಗಿ
ಆಗಿರುವ ತಪ್ಪಿಗೆ ಸ್ಕಿಲ್ ಸೋನಿಕ್ಸ್ ಕ್ಷಮೆ ಕೇಳಿದೆ.ಹಾಗೂ ಮುಂದೆ ಕನ್ನಡಿಗರಿಗೆ ಆದ್ಯತೆ ಕೊಡುವ ಭರವಸೆ ನೀಡಿದ್ದಾರೆ, ಇಲ್ಲ ನಾವು ಬಿಡಲ್ಲ.
ಜೈ ಕರ್ನಾಟಕ 💛❤️ pic.twitter.com/nbh29TkvaD
ಕ್ಷಮೆ ಕೇಳಿದ ಸಂಸ್ಥೆ
ಈ ಜಾಹೀರಾತು ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಕಂಪನಿ ಮುಂದೆ ಪ್ರತಿಭಟನೆಗೆ ಮುಂದಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಕಂಪನಿಯು ಕನ್ನಡಿಗರ ಕ್ಷಮೆಯಾಚಿಸಿದೆ. ನಾವು ದೇಶದಾದ್ಯಂತ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ನಮ್ಮ ಕಲ್ಕತ್ತಾ ಬ್ರಾಂಚ್ನಿಂದ ಆಗಿರುವ ತಪ್ಪು. ಇದಕ್ಕಾಗಿ ನಾವು ಸಮಸ್ತ ಕನ್ನಡ ಜನತೆಗೆ ಕ್ಷಮೆಯಾಚಿಸುತ್ತೇವೆ. ಇನ್ನು ಮುಂದೆ ಈ ರೀತಿ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ, ಜೈ ಕರ್ನಾಟಕ ಎಂದು ವಿಡಿಯೋದಲ್ಲಿ ಕ್ಷಮೆ ಕೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications