ಬೆಂಗಳೂರು-ಹುಬ್ಬಳ್ಳಿ ನಡುವೆ ವಾರಾಂತ್ಯ ವಿಶೇಷ ರೈಲು
ಬೆಂಗಳೂರು, ಆಗಸ್ಟ್ 29; ನೈಋತ್ಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಹುಬ್ಬಳ್ಳಿ ನಡುವೆ ವಾರಾಂತ್ಯದ ವಿಶೇಷ ರೈಲನ್ನು ಓಡಿಸುತ್ತಿದೆ. ಸೆಪ್ಟೆಂಬರ್ 3ರಂದು ವಿಶೇಷ ರೈಲು ಬೆಂಗಳೂರಿನಿಂದ ಹೊರಡಲಿದೆ.
ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ-ಹುಬ್ಬಳ್ಳಿ ನಡುವೆ ವಾರಾಂತ್ಯದ ವಿಶೇಷ ರೈಲನ್ನು ಓಡಿಸುತ್ತಿದೆ. ಪ್ರತಿ ಶುಕ್ರವಾರ ಮತ್ತು ಶನಿವಾರ ವಿಶೇಷ ರೈಲು ಸಂಚಾರ ನಡೆಸುತ್ತಿದೆ.
ಬೈಯಪ್ಪನಹಳ್ಳಿ-ಕೆಂಗೇರಿ ನಮ್ಮ ಮೆಟ್ರೋ ರೈಲು ದರ ಪಟ್ಟಿ
ಬೆಂಗಳೂರಿನ ಯಶವಂತರಪುರದಿಂದ ರೈಲು ಸೆಪ್ಟೆಂಬರ್ 3ರಂದು 11.50ಕ್ಕೆ ಹೊರಡಲಿದೆ. ಹುಬ್ಬಳ್ಳಿಯಿಂದ ಸೆಪ್ಟೆಂಬರ್ 4ರಂದು ರಾತ್ರಿ 7.35ಕ್ಕೆ ವಿಶೇಷ ರೈಲು ಹೊರಡಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು-ಶಿವಮೊಗ್ಗ ನಡುವೆ ಮತ್ತೊಂದು ರೈಲು; ವೇಳಾಪಟ್ಟಿ
ಯಶವಂತಪುರದಿಂದ ಹೊರಡುವ ರೈಲು ತುಮಕೂರು, ಅರಸೀಕೆರೆ ಜಂಕ್ಷನ್, ದಾವಣಗೆರೆ, ಹರಿಹರ, ಹಾವೇರಿ ಮಾರ್ಗವಾಗಿ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ.
ಗುಡ್ಡ ಕುಸಿತ; 345 ಜನರ ಜೀವ ಉಳಿಸಿದ ರೈಲು ಸಿಬ್ಬಂದಿಗಳು
ಬೆಂ.-ಚಾಮರಾಜನಗರ ರೈಲು; ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಚಾಮರಾಜನಗರ ನಡುವೆ ಸೆಪ್ಟೆಂಬರ್ 1ರಿಂದ ಕಾಯ್ದಿರಿಸದ ರೈಲನ್ನು ಓಡಿಸಲಿದೆ. ರೈಲಿನ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.
ಮೈ-ಚಾಮರಾಜನಗರ; ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿನ ಜನರ ಅನುಕೂಲಕ್ಕಾಗಿ ಎರಡು ನಗರಗಳ ನಡುವೆ ಕಾಯ್ದಿರಿಸದ ಪ್ಯಾಸೆಂಜರ್ ರೈಲು ಸೇವೆಯನ್ನು ಸೆಪ್ಟೆಂಬರ್ 1ರಿಂದ ಆರಂಭವಾಗಲಿದೆ. ನಿತ್ಯ ಪ್ರಯಾಣಿಸುವವರಿಗೆ ಈ ರೈಲು ಸೇವೆಯಿಂದ ಅನುಕೂಲವಾಗಲಿದೆ.
ನೈಋತ್ಯ ರೈಲ್ವೆಯಿಂದ ಇನ್ನೊಂದು ಕಾಯ್ದಿರಿಸದ ಪ್ಯಾಸೆಂಜರ್ ರೈಲು ಸೇವೆ ಯಶವಂತಪುರ ಹಾಗೂ ಸೇಲಂ ನಡುವೆ. ಆಗಸ್ಟ್ 30ರಿಂದ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
Recommended Video
Facilitating travel..
— South Western Railway (@SWRRLY) August 28, 2021
An Unreserved passenger Special train to commence from 1 st Sep. between KSR Bengaluru and ChamarajaNagar pic.twitter.com/2x9tBSLjoz