ಡಿಸೆಂಬರ್ 25 ರಂದು ಬೆಂಗಳೂರಲ್ಲಿ ನಕ್ಕರೆ ಅದೇ ಸ್ವರ್ಗ
ಬೆಂಗಳೂರು, ಡಿಸೆಂಬರ್, 23: ಬೆಂಗಳೂರಿನ ಜನರಿಗೆ ವರ್ಷಾಂತ್ಯಕ್ಕೆ ನಗುವಿನ ಹಬ್ಬ. ಕ್ರಿಸ್ ಮಸ್ ಹಬ್ಬದ ರಜಾ ದಿನವನ್ನು ನಗುವಿನ ಸ್ವರ್ಗದಲ್ಲಿ ಕಳೆಯಬಹುದು. ನೀವೂ ಬನ್ನಿ ನಿಮ್ಮವರನ್ನು ಕರೆತನ್ನಿ....
ಡಿಸೆಂಬರ್ 25ರ ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ನಗುವಿನ ರಸದೌತಣ ಸವಿಯಲು ಜಯನಗರದ ನ್ಯಾಶನಲ್ ಕಾಲೇಜಿನ ಎಚ್ ಎನ್ ಕಲಾಕ್ಷೇತ್ರಕ್ಕೆ ಭೇಟಿ ನೀಡಲೇಬೇಕು. ಚುಟುಕು ಕವಿ ದಿನಕರ ದೇಸಾಯಿ ಅವರ ಸಂಸ್ಮರಣೆ ನಿಮಿತ್ತ ಅಕಾಡೆಮಿ ಆಫ್ ಹ್ಯೂಮರ್ 'ಹಾಸ್ಯೋತ್ಸವ-2015' ನ್ನು ಆಯೋಜಿಸಿದೆ.[ಆಯುಧ ಪೂಜೆ ಕುಂಬ್ಳಕಾಯಿ ತಲೆ ಮೇಲೆ ಒಡೆದಂಗಾಯ್ತ]

ಪ್ರಜಾವಾಣಿ, ಉಪಕಾರ್ ಹೌಸಿಂಗ್ ಡೆವಲಪ್ ಮೆಂಟ್ ಕಾರ್ಪೋರೇಷನ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ನಿರ್ಮಾಣ ಶೆಲ್ಟರ್ಸ್ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ.[ಲಗ್ನ ಪತ್ರಿಕೇಲಿ (ಎಂಎ) ಅಂತ ಬರೆಸಿಕೊಳ್ಳೋಣ ಅಂತಿದ್ದೆ!]
ಬೇಲೂರು ರಾಮಮೂರ್ತಿ ಮತ್ತು ವೈ ವಿ ಗುಂಡೂರಾವ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು ಹಿರಿಯ ಹಾಸ್ಯ ಲೇಖಕ ಬಿ ಎಸ್ ಕೇಶವರಾವ್ ಅವರಿಗೆ ಅಭಿನಂದನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ನ್ಯಾಷನಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಎ ಎಚ್ ರಾಮರಾವ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶ್ರಾಂತ ನಿರ್ದೇಶಕ ಮನು ಬಳಿಗಾರ್ ಭಾಗವಹಿಸಲಿದ್ದಾರೆ.

ಹಾಸ್ಯ ಕಲಾವಿದರ ದಂಡೇ ಇದೆ
ಚುಟುಕು ಕವಿ ಡುಂಡಿರಾಜ್, ರಿಚರ್ಡ್ ಲೂಯಿಸ್, ಗಂಗಾವತಿ ಪ್ರಾಣೇಶ್, ಬಸವರಾಜ ಮಹಾಮನಿ, ವೈ ವಿ ಗುಂಡೂರಾವ್, ಬೇಲೂರು ರಾಮಮೂರ್ತಿ, ಎನ್ ರಾಮನಾರ್ಥ, ಎಂ ಆರ್ ಸುಬ್ಬರಾವ್ ಮತ್ತು ಗಾನವಿನೋದಿನಿ ತಂಡದ ಸದಸ್ಯರು ಕಾರ್ಯಕ್ರಮ ನಡೆಸಿಕೊಡಲಿದ್ದು ಎಚ್ ಎನ್ ಆನಂದ್ ನಿರ್ವಹಣೆ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications