Bengaluru: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ಗೆ ಬಾಂಬ್ ಬೆದರಿಕೆ
ಬೆಂಗಳೂರಿನ ಪ್ರತಿತಿಷ್ಠಿಯ ಐಷಾರಾಮಿ ಹೋಟೆಲ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಕೆಲಕಾಲ ಆತಂಕ ಮೂಡಿಸಿತ್ತು. ನಗರದ ರಾಜಾರಾಮ್ ಮೋಹನ್ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್ನ ಇಮೇಲ್ ವಿಳಾಸಕ್ಕೆ ಅಪರಿತ ಮೂಲಗಳಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಹೋಟೆಲ್ ಸಿಬ್ಬಂದ ಸಂಪಂಗಿರಾಮ ನಗರ ಪೊಲೀಸ್ ಸ್ಟೇಷನ್ಗೆ ಮಾಹಿತಿ ನೀಡಿದರು.
ವಿಷಯ ತಿಳಿಯುತ್ತಿದ್ದಂತೆ ಸಂಪಂಗಿರಾಮ ನಗರ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆದಳದ ಜೊತೆ ಸ್ಥಳಕ್ಕೆ ದೌಡಾಯಿಸಿದರು. ಹೋಟೆಲ್ನಲ್ಲಿದ್ದ ಎಲ್ಲರನ್ನೂ ಹೊರಗೆ ಕಳಿಸಿ ತಪಾಸಣೆ ಮಾಡಿದರು. ಸೋಮವಾರ ಸಂಜೆ 7 ಗಂಟೆಗೆ ಹೋಟೆಲ್ ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿದ್ದು, ಯಾವುದೇ ಕ್ಷಣದಲ್ಲಿ ಬಾಂಬ್ ಸ್ಫೋಟಗೊಳ್ಳಬಹುದು ಎಂದು ಬೆದರಿಕೆ ಹಾಕಲಾಗಿತ್ತು.

ಹೋಟೆಲ್ನಲ್ಲಿ ಸಂಪೂರ್ಣ ಪರಿಶೀಲನೆ ಮಾಡಿದ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಗೊತ್ತಾಗಿದೆ. ಹೋಟೆಲ್ನಲ್ಲಿ ಯಾವುದೇ ಸ್ಫೋಟದ ವಸ್ತುಗಳು ಪತ್ತೆಯಾಗಿಲ್ಲ. ಅಪರಿಚಿತರ ಒಂದು ಹುಸಿ ಬೆದರಿಕೆಯಿಂದ ಹೋಟೆಲ್ನಲ್ಲಿದ್ದ ನೂರಾರು ಮಂದಿ ಕ್ಷಣ ಕಾಲ ಆತಂಕಕ್ಕೆ ಒಳಗಾಗಿದ್ದರು.
ಹೆಚ್ಚುತ್ತಿರುವ ಹುಸಿ ಬಾಂಬ್ ಬೆದರಿಕೆ
ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳಿಂದ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳಿಗೆ ಸತತವಾಗಿ ಬಾಂಬ್ ಸ್ಫೋಟದ ಬೆದರಿಕೆ ಕರೆಗಳು ಬಂದಿದ್ದರಿಂದ, ವಿಮಾನ ಸಂಸ್ಥೆಯ ಸಿಬ್ಬಂದಿ ಹೈರಾಣಾಗಿದ್ದರು. ಸಾಲು ಸಾಲು ಬೆದರಿಕೆ ಸಂದೇಶಗಳು ಬಂದ ಬಳಿಕ ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸಲಾಯಿತು.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ಗು ಬೆದರಿಕೆ ಕರೆ ಬಂದಿತ್ತು. ನಗರದ ಪ್ರತಿಷ್ಠಿಯ ಹೋಟೆಲ್ ಇದಾಗಿದ್ದು, ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ತಾರೆಯರು, ಕ್ರಿಕೆಟಿಗರು ಬಂದು ವಾಸ್ತವ್ಯ ಹೂಡುತ್ತಾರೆ. ಬೆದರಿಕೆ ಕರೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಸಂಪೂರ್ಣ ತಪಾಸಣೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂದು ತಿಳಿದುಬಂದಿತ್ತು.
2024ರ ಮಾರ್ಚ್ 1ರಂದು ನಗರದ ಜನಪ್ರಿಯ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಈ ಘಟನೆ ಬೆಂಗಳೂರು ನಗರದ ಜನರಲ್ಲಿ ಆತಂಕ ಮೂಡಿಸಿತ್ತು. ಅದಾದ ಬಳಿಕ ಅನೇಕ ಬಾರಿ ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಕಾಲೇಜು, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಲೇ ಇದ್ದು, ಜನರನ್ನು ಆತಂಕಕ್ಕೆ ದೂಡಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications