ಬೆಂಗಳೂರು ಭಾರತದ 5ನೇ ಅತ್ಯಂತ ಕೊಳಕು ನಗರ! ಮತ್ತೆ ಟ್ರೋಲ್ಗೆ ಕಾರಣವಾದ ರಿಪೋರ್ಟ್
Swachh Survekshan 2025: ರಾಷ್ಟ್ರ ಮಟ್ಟದಲ್ಲಿ ಬೆಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಬೆಂಗಳೂರಿಗೆ ಕೆಟ್ಟ ಹೆಸರು ಬರುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಿವೇ ಕಾರಣ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಇದರಲ್ಲಿ ಸರ್ಕಾರದ ನಿರ್ಲಕ್ಷ್ಯವೂ ಮುಂದುವರಿದಿದೆ. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು, ಕಸ ಸಂಗ್ರಹ ಲೋಪ ಹಾಗೂ ಮಿಶ್ರ ಕಸ ಅಂದರೆ ಒಣ ಹಾಗೂ ಹಸಿಕಸವನ್ನು ಸೇರಿಸಿ ತೆಗೆದುಕೊಳ್ಳುವುದು ಹೆಚ್ಚಾಗಿದೆ. ಇದರೊಂದಿಗೆ ಬೆಂಗಳೂರಿನ ರಸ್ತೆಗಳಲ್ಲಿ ಕಳೆದ ಎರಡು ಮೂರು ವರ್ಷಗಳ ಅವಧಿಯಲ್ಲಿ ತೀರ ಎಂದರೆ ತೀರ ಕಳಪೆ ಹಂತಕ್ಕೆ ತಲುಪಿದೆ. ಇದೀಗ ಈ ವಿಷಯವು ಬೆಂಗಳೂರಿನ ಟ್ರೋಲ್ಗೆ ಹಾಗೂ ಅಪಹಾಸ್ಯಕ್ಕೂ ಕಾರಣವಾಗಿದೆ.
ಬೆಂಗಳೂರು ಈ ಬಾರಿಯೂ ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2025ರಲ್ಲಿ ಸಂಪೂರ್ಣ ಫೇಲ್ ಆಗಿದೆ. ಬೆಂಗಳೂರಿನಲ್ಲಿ ಕಸ ನಿರ್ವಹಣೆಯಲ್ಲಿ ಮಿಸ್ ಮ್ಯಾನೇಜ್ಮೆಂಟ್ ಕಾರಣಕ್ಕೆ ಕೇಂದ್ರ ಸರ್ಕಾರವು ಈ ರ್ಯಾಂಕಿಂಗ್ ಕೊಟ್ಟಿದೆ. ಕೇಂದ್ರ ಸರ್ಕಾರವು ದೇಶದಾದ್ಯಂತ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯನ್ನು ಪ್ರತಿ ವರ್ಷವೂ ನಡೆಸುತ್ತದೆ. ಆದರೆ ಈ ಸಮೀಕ್ಷೆಯಲ್ಲಿ ಬೆಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಇದು ಮತ್ತೆ ಬೆಂಗಳೂರನ್ನು ಆಡಿಕೊಳ್ಳುವವರಿಗೆ ಆಹಾರವಾಗಿದೆ. ಇದು ಬ್ರ್ಯಾಂಡ್ ಬೆಂಗಳೂರಿಗೆ ಭಾರೀ ಪೆಟ್ಟು ಕೊಟ್ಟಿದೆ ಎಂದೇ ಹೇಳಲಾಗುತ್ತಿದೆ. ಬೆಂಗಳೂರನ್ನು ಬ್ರ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ರಾಜ್ಯ ಸರ್ಕಾರವು ಹೇಳಿತ್ತು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದ್ದರು. ಆದರೆ, ಅದು ಹೆಸರಿಗೆ ಮಾತ್ರ ಸೀಮಿತವಾಗಿದೆ. ಕಸ ವಿಲೇವಾರಿ ವಿಚಾರದಲ್ಲಿ ಬಿಬಿಎಂಪಿ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಬೆಂಗಳೂರಿಗೆ ಕೊಳಕು ನಗರ ಎನ್ನುವ ಹಣೆಪಟ್ಟಿ ಬಂದಿದೆ. ಸ್ವಚ್ಛ ಸರ್ವೇಕ್ಷಣ 2025 ಸಮೀಕ್ಷೆಯಲ್ಲಿ ಬೆಂಗಳೂರು ಭಾರತದ ಐದನೇ ಕೊಳಕು ನಗರವೆಂದು ಸ್ಥಾನ ಪಡೆದಿದೆ. ಇದು ನಿಜಕ್ಕೂ ಬೆಂಗಳೂರಿಗರಿಗೆ ಮುಜುಗರವನ್ನು ತರುವ ಸಂಗತಿಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಒಂದು ಕಾಲದಲ್ಲಿ ಗಾರ್ಡ್ಸಿಟಿ ಹಾಗೂ ಸಿಲಿಕಾನ್ ಸಿಟಿ ಎನ್ನುವ ಖ್ಯಾತಿಯನ್ನು ಗಳಿಸಿರುವ ಬೆಂಗಳೂರು ಇದೀಗ ಗಾರ್ಬೇಜ್ ಸಿಟಿ ಎನ್ನುವ ಕುಖ್ಯಾತಿಯನ್ನು ಗಳಿಸಿದೆ. ಸ್ವಚ್ಛ ಸರ್ವೇಕ್ಷಣಾ 2025 ಸಮೀಕ್ಷೆಯಲ್ಲಿ ಒಂದು ಮಿಲಿಯನ್ಗಿಂತಲೂ ಹೆಚ್ಚು ಜನಸಂಖ್ಯೆಯ ಇರುವ ನಗರಗಳ ವಿಭಾಗದಲ್ಲಿ ದೇಶದ ಐದನೇ ಕೊಳಕು ನಗರ ಎನ್ನುವ ಸ್ಥಾನವನ್ನು ಬೆಂಗಳೂರು ಪಡೆದುಕೊಂಡಿದ್ದು. ಭಾರೀ ಮುಜುಗರಕ್ಕೆ ಒಳಗಾಗುವಂತೆ ಆಗಿದೆ. ದೇಶದಲ್ಲಿರುವ ಪ್ರಮುಖ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನ ಸ್ವಚ್ಛತೆ ಕಳಪೆ ಆಗಿದೆ. ಬೆಂಗಳೂರಿನ ಸ್ವಚ್ಛತೆಯು ರಾಷ್ಟ್ರೀಯ ರ್ಯಾಂಕಿಂಗ್ ನಲ್ಲಿ 36ನೇ ಸ್ಥಾನದಲ್ಲಿದ್ದರೆ, ಕರ್ನಾಟಕ 15 ನೇ ರ್ಯಾಂಕಿಂಗ್ ನಲ್ಲಿದೆ.
ಬೆಂಗಳೂರಿನೊಂದಿಗೆ ರಾಂಚಿ, ಚೆನ್ನೈ, ಲುಧಿಯಾನ ಹಾಗೂ ಮಧುರೈ ಪ್ರದೇಶಗಳು ಅತ್ಯಂತ ಕೊಳಕು ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಇದರೊಂದಿಗೆ ಅಹಮದಾಬಾದ್, ಭೋಪಾಲ್, ಲಕ್ನೋ, ರಾಯ್ಪುರ ಹಾಗೂ ಜಬಲ್ಪುರಗಳು ಮೊದಲ ಐದು ಸ್ವಚ್ಛ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications