Get Updates
Get notified of breaking news, exclusive insights, and must-see stories!

ಬೆಂಗಳೂರು ಐಟಿ ನೌಕರರೇ ಇತ್ತ ಗಮನಿಸಿ, ನಿಮ್ಮ ಕಚೇರಿ ಸಮಯ ಬದಲಾವಣೆಯಾಗಬಹುದು

ಬೆಂಗಳೂರು, ಅಕ್ಟೋಬರ್‌ 07: ಬೆಂಗಳೂರಿನ ಸಂಚಾರ ಸುಗಮಗೊಳಿಸಲು ಖಾಸಗಿ ನೌಕರರ ಕೆಲಸದ ಸಮಯವನ್ನು ಪರಿಷ್ಕರಣೆ ಮಾಡಲು ಕರ್ನಾಟಕ ಕಾರ್ಮಿಕ ಇಲಾಖೆಯು ನಗರದಲ್ಲಿ ಇರುವ ಕಂಪನಿಗಳೊಂದಿಗೆ ಸಭೆ ನಡೆಸಿದೆ.

ಈ ಸಂಬಂಧ ಅಕ್ಟೋಬರ್ 5 ರಂದು ಕರ್ನಾಟಕ ಕಾರ್ಮಿಕ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಶಾಲೆಗಳು, ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ವಾಣಿಜ್ಯ ಮನೆಗಳು ಮತ್ತು ಇತರ ಕಂಪನಿಗಳ ಸಮಯವನ್ನು ಬದಲಾಯಿಸುವ ಬಗ್ಗೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಪೀಠ ಸೂಚಿಸಿದ ನಂತರ ಸಭೆ ನಡೆಸಲಾಗಿದೆ.

Bengaluru IT employees please note, your office hours may be subject to change

ಸಭೆಯಲ್ಲಿ ಭಾಗವಹಿಸಿದ್ದ ಕಂಪನಿಗಳಿಂದ ಟ್ರಾಫಿಕ್ ಕಡಿಮೆ ಮಾಡುವ ಕುರಿತು ಕಾರ್ಮಿಕ ಇಲಾಖೆ ಮಾಹಿತಿ ಸಂಗ್ರಹಿಸಿದೆ. ಸಭೆಯಲ್ಲಿ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ, ಪೀಣ್ಯ ಇಂಡಸ್ಟ್ರೀಸ್ ಅಸೋಸಿಯೇಷನ್, ಭಾರತೀಯ ಕೈಗಾರಿಕೆಗಳ ಒಕ್ಕೂಟ, ರಾಷ್ಟ್ರೀಯ ಸಾಫ್ಟ್‌ವೇರ್ ಮತ್ತು ಸೇವಾ ಕಂಪನಿಗಳ ಸಂಘ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ, ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ ಮತ್ತು ಇತರರು ಭಾಗವಹಿಸಿದ್ದರು.

ಐಟಿ ಕಂಪೆನಿಗಳ ಬಳಿಕ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅಕ್ಟೋಬರ್ 9 ರಂದು ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದೆ. ಸೆಪ್ಟೆಂಬರ್‌ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಸಮಯ ಬದಲಾವಣೆ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ್ದರು.

ವರದಿಗಳ ಪ್ರಕಾರ, ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸರ್ಕಾರವು ಬೆಳಿಗ್ಗೆ ಬೇಗನೆ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಖಾಸಗಿ ಶಾಲಾ ಸಂಘಗಳು ಮತ್ತು ಪೋಷಕರು ಈ ಹಿಂದೆ ಇದೇ ರೀತಿಯ ಸಲಹೆಗಳನ್ನು ನಿರಾಕರಿಸಿದ್ದರು ಎನ್ನಲಾಗಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯ ಬಗ್ಗೆ ಕಳೆದ ಎರಡು ತಿಂಗಳಿನಿಂದ ಅನೇಕ ಸಂದರ್ಭಗಳಲ್ಲಿ ನೆಟಿಜನ್‌ಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ 27 ರಂದು ಹೊರ ವರ್ತುಲದ ಮೇಲೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರಯಾಣಿಕರು ಒಂದು ಕಿಲೋಮೀಟರ್ ಅಥವಾ ಎರಡು ಕಿಲೋಮೀಟರ್ ಚಲಿಸುವ ಸಮಯವನ್ನು ಹೇಗೆ ಕಳೆದರು ಎಂಬುದರ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ನಮ್ಮ ಮೆಟ್ರೋದ ಸಂಪೂರ್ಣ ನೇರಳೆ ಮಾರ್ಗವನ್ನು ಪ್ರಾರಂಭಿಸಲು ಸಾಮಾಜಿಕ ಮಾಧ್ಯಮದಲ್ಲಿ ಜನರು ನಿಯಮಿತವಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ನಗರದಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು.

ಇದಲ್ಲದೆ ಭಾರೀ ಟ್ರಾಫಿಕ್ ಜಾಮ್‌ಗೆ ಸಾಕ್ಷಿಯಾಗುತ್ತಿರುವ ಬೆಂಗಳೂರು ನಗರದ ಒಂಬತ್ತು ರಸ್ತೆಗಳಿಗೆ ಕರ್ನಾಟಕ ಸರ್ಕಾರವು 'ದಟ್ಟಣೆ ತೆರಿಗೆ' ವಿಧಿಸಲು ಯೋಜಿಸುತ್ತಿದೆ. ದಟ್ಟಣೆ ತೆರಿಗೆಯು ರಸ್ತೆಗಳಲ್ಲಿ ಖಾಸಗಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ದಟ್ಟಣೆ ತೆರಿಗೆಯಿಂದ ಹೆಚ್ಚಿನ ಜನರು ಸಾರ್ವಜನಿಕ ಸಾರಿಗೆ ಸೇವೆಗಳನ್ನು ಆರಿಸಿಕೊಳ್ಳುವಂತೆ ಮಾಡುತ್ತದೆ ಎಂದು ಸಾರಿಗೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಶೀಘ್ರದಲ್ಲೇ ದಟ್ಟಣೆ ತೆರಿಗೆ ವಿಧಿಸಲ್ಪಡುವ ಪ್ರಮುಖ ರಸ್ತೆಗಳೆಂದರೆ, ಹೊರ ವರ್ತುಲ ರಸ್ತೆ (ಓಆರ್‌ಆರ್‌), ಹಳೆ ಮದ್ರಾಸ್ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ (ಒಎಆರ್‌), ಸರ್ಜಾಪುರ ರಸ್ತೆ, ಬನ್ನೇರುಘಟ್ಟ ರಸ್ತೆ, ತುಮಕೂರು ರಸ್ತೆ, ಹೊಸೂರು ರಸ್ತೆ, ಬಳ್ಳಾರಿ ರಸ್ತೆ, ಕನಕಪುರ ರಸ್ತೆ, ಮಾಗಡಿ ರಸ್ತೆ, ಮತ್ತು ವೆಸ್ಟ್ ಆಫ್ ಕಾರ್ಡ್ ರೋಡ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+