ಬೆಂಗಳೂರು - ಜಪಾನ್ ನಡುವೆ ಮಹತ್ವದ ಒಪ್ಪಂದ, ಜಂಟಿ ಉದ್ದೇಶ ಘೋಷಣೆ!
ಬೆಂಗಳೂರು ನಗರ ಹಾಗೂ ಜಪನ್ ದೇಶದ ನಡುವೆ ಮಹತ್ವದ ಚರ್ಚೆ ನಡೆದಿದೆ. ಬೆಂಗಳೂರು ನಗರ ಹಾಗೂ ಜಪಾನ್ ದೇಶದ ನಗೋಯಾ ನಗರಗಳ ನಡುವೆ ಆರ್ಥಿಕ ವಿನಿಮಯವನ್ನು ಉತ್ತೇಜಿಸಲು ನಗೋಯಾ ನಗರದ ಮೇಯರ್ ಇಚಿರೋ ಹಿರೊಸಾವಾ ಮತ್ತು ಬಿಬಿಎಂಪಿಯ ಆಡಳಿತಾಧಿಕಾರಿಯಾದ ತುಷಾರ್ ಗಿರಿನಾಥ್ ಅವರು ಪರಸ್ಪರ ಸಹಿಹಾಕುವ ಮೂಲಕ ಜಂಟಿ ಉದ್ದೇಶ ಘೋಷಣೆ (Joint Declaration of Intent) ಮಾಡಿಕೊಳ್ಳಲಾಗಿದೆ. ಇದು ಬೆಂಗಳೂರು ಇತಿಹಾಸದಲ್ಲಿ ಹೊಸ ಬದಲಾವಣೆ ಎಂದೇ ಹೇಳಲಾಗುತ್ತಿದೆ.
ಸಹೋದರ ನಗರಗಳ ಉತ್ತೇಜನಕ್ಕಾಗಿ ಈ ಜಂಟಿ ಉದ್ದೇಶ ಘೋಷಣೆ (Joint Declaration of Intent) ಯನ್ನು ನಗೋಯಾ ನಗರ ಮತ್ತು ಬೆಂಗಳೂರು ನಗರಗಳ ನಡುವೆ ವಿಕಾಸಸೌಧದ ಕೊಠಡಿ ಸಂಖ್ಯೆ 422 ರಲ್ಲಿ ಕೈಗೊಳ್ಳಲಾಗಿದೆ. ನಗೋಯಾ ನಗರ ಮತ್ತು ಬೆಂಗಳೂರು ನಗರಗಳ ನಡುವಿನ ಸ್ನೇಹ ಸಂಬಂಧಗಳನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ, ಕೆಳಗಿನಂತೆ ಪರಸ್ಪರ ಸಹಕರಿಸುವ ಉದ್ದೇಶ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ಮಾಡಲಾಗಿದೆ.

1. ಎರಡೂ ನಗರಗಳ ನಡುವೆ ಆರ್ಥಿಕ ವಿನಿಮಯವನ್ನು ಉತ್ತೇಜಿಸುವ ಸಲುವಾಗಿ, ತಮ್ಮ ತಮ್ಮ ಪ್ರದೇಶಗಳ ಕೈಗಾರಿಕಾ ಪ್ರವೃತ್ತಿಗಳ ಕುರಿತು ಮಾಹಿತಿಯನ್ನು ಪರಸ್ಪರ ಹಂಚಿಕೊಳ್ಳುವುದು ಮತ್ತು ಆ ಮಾಹಿತಿಯನ್ನು ವ್ಯಾಪಾರ ಸಂಸ್ಥೆಗಳು ಹಾಗೂ ಇತರ ಸಂಬಂಧಿತ ಘಟಕಗಳಿಗೆ ಲಭ್ಯವಾಗುವಂತೆ ಮಾಡುವುದು.
2. ಎರಡೂ ನಗರಗಳು ಉದ್ಯಮಿಗಳನ್ನು, ವ್ಯಾಪಾರ ಸಂಸ್ಥೆಗಳನ್ನು ತಮ್ಮ ವ್ಯವಹಾರ ವಿಸ್ತರಣೆಗಾಗಿ ಪ್ರೋತ್ಸಾಹಿಸುತ್ತವೆ. ವಿಶೇಷವಾಗಿ ಪ್ರತಿ ಪ್ರದೇಶದ ಶಕ್ತಿ ಹೊಂದಿರುವ ಕೈಗಾರಿಕಾ ಕ್ಷೇತ್ರಗಳಲ್ಲಿ.
3. ಎರಡೂ ಪ್ರದೇಶಗಳ ಆರ್ಥಿಕತೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ, ಆಯಾ ಪ್ರದೇಶಗಳ ವಿಶ್ವವಿದ್ಯಾಲಯಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳೊಂದಿಗೆ ಸಹಕರಿಸುವ ಮೂಲಕ ಮಾನವ ಸಂಪನ್ಮೂಲ ವಿನಿಮಯವನ್ನು ಉತ್ತೇಜಿಸುವುದು.
ಬಿಬಿಎಂಪಿ ಆಡಳಿತಾಧಿಕಾರಿಯಾದ ತುಷಾರ್ ಗಿರಿ ನಾಥ್ ಅವರು ಮಾತನಾಡಿ, ನಗೋಯಾ ನಗರವು ಸುಂದರವಾದ ಸ್ಥಳವಾಗಿದ್ದು, ಅಲ್ಲಿನ ಸಂಸ್ಥೆಗಳು ಹೆಚ್ಚಾಗಿ ಬೆಂಗಳೂರು ನಗರಕ್ಕೆ ಬರಬೇಕೆಂದು ಇಚ್ಛಿಸುತ್ತೇನೆ ಎಂದು ಹೇಳಿದರು.
ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮಾತನಾಡಿ, ಬಿಬಿಎಂಪಿ ಜೊತೆ ನಗೋಯ ಜಂಟಿ ಉದ್ದೇಶ ಘೋಷಣೆ ಮಾಡಿಕೊಂಡಿರುವುದು ವ್ಯಾಪಾರ ಬೆಳವಣಿಗೆಗೆ ಭಾರಿ ಉತ್ತೇಜನ ನೀಡಲಿದೆ. ಇದರಿಂದ ಜಪಾನ್ನ ಸಾಕಷ್ಟು ಸಂಸ್ಥೆಗಳು ಬೆಂಗಳೂರು ನಗರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನಗೋಯಾದ ಮೇಯರ್ ಇಚಿರೋ ಹಿರೊಸಾವಾ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ ಈಗಾಗಲೇ ಸಾಕಷ್ಟು ಸಂಸ್ಥೆಗಳಿದ್ದು, ಎರಡೂ ನಗರಗಳ ಜೊತೆ ಆರ್ಥಿಕ ವಿನಿಮಯವನ್ನು ಉತ್ತೇಜಿಸಲು ಬಿಬಿಎಂಪಿಯ ಜೊತೆ ಜಂಟಿ ಉದ್ದೇಶ ಘೋಷಣೆ ಮಾಡಿಕೊಳ್ಳುತ್ತಿರುವುದು ಸಂತೋಷದ ವಿಷಯ ಎಂದಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications