ಈ ಬಾರಿಯ ಬಸವನಗುಡಿ ಕಡ್ಲೆಕಾಯಿ ಪರಿಷೆಯಲ್ಲಿ ಏನೇನಿದೆ?
ಬೆಂಗಳೂರು, ಡಿಸೆಂಬರ್, 06: ಬಸವನಗುಡಿಯಲ್ಲಿ ಕಡ್ಲೆಕಾಯಿ ಕಲರವ ಆರಂಭವಾಗಿದೆ. ಡಿಸೆಂಬರ್ 7 ರಂದು ಪ್ರಸಿದ್ಧ ಕಡ್ಲೆಕಾಯಿ ಪರಿಷೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ.
ಸೋಮವಾರದಿಂದ ಮೂರು ದಿನಗಳ ಕಾಲ ಪರಿಷೆಗೆ ತೆರಳಿ ಬಸವಣ್ಣನ ಅನುಗ್ರಹ ಪಡೆದುಕೊಳ್ಳಬಹುದು.|
ರಾಮಕೃಷ್ಣ ಆಶ್ರಮ ಸರ್ಕಲ್ನಿಂದ ಬಿಎಂಎಸ್ ಕಾಲೇಜುವರೆಗೂ ಕಡಲೆಕಾಯಿ, ಕಳ್ಳೆಪುರಿ, ತಿಂಡಿ-ತಿನಿಸು ಆಟಿಕೆ ಸಾಮಾನುಗಳು, ಗೃಹಾಲಂಕಾರ ವಸ್ತುಗಳು, ಬಲೂನ್ ಅಂಗಡಿಗಳು ತಲೆ ಎತ್ತವ. ಈಗಾಗಲೇ ಹಬ್ಬದ ವಾತಾವರಣ ಮನೆ ಮಾಡಿದೆ.[ಕಡ್ಲೆಕಾಯಿ ಪರಿಷೆ ಉದ್ಘಾಟನೆ ವಿಶೇಷವೇನು?]
ಪ್ಲಾಸ್ಟಿಕ್ ಮುಕ್ತ ಪರಿಷೆ, ಕಸ ಮುಕ್ತ ಪರಿಷೆ ಈ ಬಾರಿಯ ಸವಾಲು. ಆಡಳಿತದೊಂದಿಗೆ ನಾಗರಿಕರು ಸಹಕರಿಸಿದರೆ ಸ್ವಚ್ಛ ಭಾರತದ ಕಲ್ಪನೆಯ ಪರಿಷೆ ನಡೆಯಲು ಸಾಧ್ಯವಿದೆ. ಶನಿವಾರವೇ ಸಾಕಷ್ಟು ಜನ ಆಗಮಿಸಿದ್ದು ಕಂಡುಬಂತು. ಹಬ್ಬದ ಸಂಭ್ರಮ ಸವಿಯಲು ವರುಣನ ಕೃಪೆಯೂ ಬೇಕಾಗಿದೆ.

ಬಿಎಂಎಸ್ ಕಾಲೇಜಿಂದ ಬಟ್ಟೆ ಬ್ಯಾಗ್
ಕಡಲೆ ಕಾಯಿ ವ್ಯಾಪಾರಸ್ಥರಿಗೆ ಅಂಗಡಿ ಸಂಖ್ಯೆ ಮತ್ತು ಬಟ್ಟೆ ಬ್ಯಾಗ್ ಗಳನ್ನು ಕಾಲೇಜು ನೀಡಿದೆ. 100 ಬ್ಯಾಗ್ ಗೆ 50 ರು. ನೀಡಬೇಕಿದ್ದು ಪ್ಲಾಸ್ಟಿಕ್ ಗೆ ಹೊಲೀಸಿದರೆ ಇದು ದುಬಾರಿ ಎಂಬುದು ವ್ಯಾಪಾರಸ್ಥರ ಅಳಲು.

ಮಕ್ಕಳಿಗೆ ಹಬ್ಬ
ಹಸಿ ಕಡಲೆಕಾಯಿ, ಹುರಿದ, ಬೇಯಿಸಿದ ಕಡಲೆಕಾಯಿ, ಖಾರ- ಮಂಡಕ್ಕಿ, ಬಾಂಬೆ ಮಿಠಾಯಿ ತಿನಿಸುಗಳು ರಸ್ತೆ ಆಕ್ರಮಿಸಿಕೊಂಡಿವೆ. ಕೊಲಂಬಸ್, ಬ್ರೇಕ್ ಡಾನ್ಸ್, ಜಾಯಿಂಟ್ ವ್ಹೀಲ್, ಮಕ್ಕಳಿಗಾಗಿ ಜೋಕಾಲಿ, ಪುಟಾಣಿ ರೈಲು ಮನರಂಜನೆ ನೀಡುತ್ತಿವೆ. ಬೆಂಗಳೂರಿನ ಹೃದಯ ಭಾಗದಲ್ಲಿ ಹಳ್ಳಿ ಸೊಗಡು ತಲೆ ಎತ್ತಿದೆ.

ಕ್ಯಾಮರಾ ಕಣ್ಣು
ಭದ್ರತೆ ದೃಷ್ಟಿಯಿಂದ ಪ್ರಮುಖ ಸ್ಥಳಗಳಲ್ಲಿ ಹಾಗೂ ದೇವಸ್ಥಾನದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಸಿದ್ಧವಾಗಿದ್ದು ಭದ್ರತೆಯೊಂದಿಗೆ ಟ್ರಾಫಿಕ್ ಕಂಟ್ರೊಲ್ ಗೂ ಕ್ರಮ ತೆಗೆದುಕೊಂಡಿದೆ. ಜತೆಗೆ 108 ಆಂಬುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಉದ್ಘಾಟನೆ ಇಲ್ಲ
ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಸರಳ ಕಾರ್ಯಕ್ರಮ ನಡೆಯಲಿದೆ. ಸೋಮವಾರ ದೊಡ್ಡ ಬಸವಣ್ಣ, ಗಣಪತಿಗೆ ವಿಶೇಷ ಪೂಜೆ, ಅಭಿಷೇಕದ ಮೂಲಕ ಹಬ್ಬ ಆರಂಭಗೊಳ್ಳಲಿದೆ.

ಸಂಚಾರ ಬದಲು
ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು ಲಾಲ್ಬಾಗ್ ಪಶ್ಚಿಮ ದ್ವಾರದಿಂದ ವಾಣಿವಿಲಾಸ್ ರಸ್ತೆ, ಚಾಮರಾಜಪೇಟೆ 5ನೇ ಮುಖ್ಯರಸ್ತೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಹನುಮಂತನಗರಕ್ಕೆ ಹೋಗುವ ವಾಹನಗಳು ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆಯಬೇಕು.

ವಾಹನ ನಿಲುಗಡೆಗೆ ವ್ಯವಸ್ಥೆ
ಆಗಮಿಸುವ ಭಕ್ತರಿಗೆ ನ್ಯಾಷನಲ್ ಕಾಲೇಜು ಆಟದ ಮೈದಾನ, ಕೊಹಿನೂರು ಆಟದ ಮೈದಾನ, ಹಯವದನ ರಸ್ತೆ ಗವಿಪುರ, ಬಸವನಗುಡಿ ರಸ್ತೆ ಮತ್ತು ಸಾಯಿರಂಗ ಆಟದ ಮೈದಾನದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications