Bengaluru-Kalaburagi Train: ಕೊನೆಗೂ 'ಯಾದಗಿರಿ'ಯಲ್ಲಿ ವಂದೇ ಭಾರತ್ ನಿಲುಗಡೆ, ಸಮಯ-ವೇಳಾಪಟ್ಟಿ
ಬೆಂಗಳೂರು, ಆಗಸ್ಟ್ 04: ರಾಜ್ಯದ ದಕ್ಷಿಣದ ತುದಿಯಿಂದ ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಭಾರೀ ಬೇಡಿಕೆ ಇದೆ. ಹೀಗಾಗಿಯೇ ಯಾದಗಿರಿಯಲ್ಲಿ ಈ ರೈಲು ನಿಲುಗಡೆಗೆ ಮನವಿ ಮಾಡಲಾಗಿದೆ. ಅದರಂತೆ ಆಗಸ್ಟ್ 03ರಂದು ಯಾದಗಿರಿ ನಿಲುಗಡೆ ಅಧಿಕೃತಗೊಳಿಸಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.
ಬೆಂಗಳೂರಿಂದ ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಈ ಹಿಂದೆ ಯಾದಗಿರಿಗೆ ನಿಲುಗಡೆ ನೀಡಿತ್ತು. ತದನಂತರ ಕೆಲವು ಕಾರಣ ನೀಡಿ ಆ ನಿಲುಗಡೆ ರದ್ದುಗೊಳಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದಾಗ ಬಳಿಕ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರ ಬಳಿಕ ಯಾದಗಿರಿ ಹಾಗೂ ಸ್ಥಳ ನಾಯಕರು, ಜನರು ನಿಲುಗಡೆಗೆ ಒತ್ತಾಯಿಸಿದ್ದರು.

ಇದಕ್ಕೆ ಮಣಿದ ನೈಋತ್ಯ ರೈಲ್ವೆ ವಲಯವು ಇತ್ತೀಚೆಗೆ ನಿಲುಗಡೆ ನೀಡುವುದಾಗಿ ಘೋಷಿಸಿತ್ತು. ಅದರಂತೆ ಕೇಂದ್ರ ರೈಲ್ವೆ ಇಲಾಖೆ ಕರ್ನಾಟಕ ರಾಜ್ಯ ಖಾತೆಗೆ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ಬೆಂಗಳೂರಿಂದ ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 22232) ಯಾದಗಿರಿಯಲ್ಲಿ ಹೆಚ್ಚುವರಿ ನಿಲುಗಡೆಗೆ ಹಸಿರುವ ನಿಶಾನೆ ತೋರಿಸಿದರು. ಈ ಮೂಲಕ ಯಾದಗಿರಿಯಲ್ಲಿ ವಂದೇ ಭಾರತ್ ನಿಲ್ಲದೆ ಎಂದು ಅವರು ಅಧಿಕೃತ ಪಡಿಸಿದರು.
ವಾರದ 06 ದಿನ ಸಂಚಾರ, ವೇಳಾಪಟ್ಟಿ
'ಪ್ರಾದೇಶಿಕ ಸಂಪರ್ಕಕ್ಕೆ ಉತ್ತೇಜನ' ಹೆಸರಿನಲ್ಲಿ ಯಾದಗಿರಿಯಲ್ಲಿ ನಿಲುಗಡೆ ನೀಡಲಾಗಿದೆ ಎಂದು ರೈಲ್ವೆ ತಿಳಿಸಿದೆ. ಈ ವಂದೇ ಭಾರತ್ ರೈಲು (ಸಂಖ್ಯೆ 22232/31) ವಾರದ ಆರು ದಿನ ಸಂಚರಿಸಲಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ((ಸಂಖ್ಯೆ 22231) ಕಲಬುರಗಿಯಿಂದ ಬೆಳಗ್ಗೆ 5.15ಕ್ಕೆ ಹೊರಟರೇ ಯಾದಗಿರಯಲ್ಲಿ 5.54ಕ್ಕೆ ನಿಲುಗಡೆ ನೀಡಿ 5.55 ಅಲ್ಲಿಂದ ಬಿಡುತ್ತದೆ. ನಂತರ ರಾಯಚೂರು, ಮಂತ್ರಾಲಯಂ ರಸ್ತೆ, ಗುಂಟಕಲ್, ಅನಂತಪುರ, ಯಲಹಂಕ ಮಾರ್ಗವಾಗಿ ಸಾಗಿ ಬೆಂಗಳೂರು ಎಸ್ಎಂವಿಟಿಗೆ ಮಧ್ಯಾಹ್ನ 02 ಗಂಟೆಗೆ ತಲುಪುತ್ತದೆ.

ಬೆಂಗಳೂರು ಎಸ್ಎಂವಿಟಿ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 22232) ಮಧ್ಯಾಹ್ನ 2.40ಕ್ಕೆ ಸಂಚಾರ ಆರಂಭಿಸಿದರೆ, ಪುನಃ ಯಲಹಂಕ, ಅನಂತಪುರ, ಗುಂಟಕಲ್, ಮಂತ್ರಾಲಯಂ ರಸ್ತೆ, ರಾಯಚೂರು, ಯಾದಗಿರಿ (ರಾತ್ರಿ 21.44) ತಲುಪಿ ಅಲ್ಲಿಂದ ಕಲಬುರಗಿಯನ್ನು 21.45ಕ್ಕೆ ತಲುಪುತ್ತದೆ.
ಬೆಂಗಳೂರು ಕಲಬುರಗಿ ಮಾರ್ಗದಲ್ಲಿ ಓಡಾಡುವ ಪ್ರಯಾಣಿಕರಿಗೆ ಈ ರೈಲಿನಿಂದ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೇ ಯಾದಗಿರಿಗೆ ನಿಲುಗಡೆ ಮಾಡದ್ದರಿಂದ ತೊಂದರೆ ಆಗಿತ್ತು. ಆದ್ದರಿಂದ ಈ ಭಾಗದ ಜನರಿಗೆ ಅನುಕೂಲವಾಗುಂತೆ ಮಾಡಲು ಸ್ಥಳೀಯರು, ಮುಖಂಡರು ರೈಲ್ವೆ ಇಲಾಖೆ ಮೇಲೆ ಒತ್ತಡ ಹೇರಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications