Get Updates
Get notified of breaking news, exclusive insights, and must-see stories!

Bengaluru Karaga: ಏಪ್ರಿಲ್ 23ರಂದು ಬೆಂಗಳೂರಿನ ಈ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದೆ. ಏಪ್ರಿಲ್ 23 ರಂದು ಪ್ರಸಿದ್ಧವಾದ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಹಲವು ಕಡೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಏಪ್ರಿಲ್ 23 ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 24 ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರು ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಕಮೀಷನರ್ ದಯಾನಂದ ಆದೇಶ ನೀಡಿದ್ದಾರೆ.

Bengaluru Karaga Liquor Sales Banned in Four Bengaluru Police Station Limits on April 23

ಬೆಂಗಳೂರಿನ ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧ

ಬೆಂಗಳೂರು ಕರಗ ವಿಶ್ವಪ್ರಸಿದ್ಧಿ ಪಡೆದಿದೆ. ಕರಗ ಸಾಗುವ ಹಾದಿಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಾರೆ. ಪೊಲೀಸರು ಕೂಡ ಸೂಕ್ತ ಬಂದೋಬಸ್ತ್‌ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.

ಏಪ್ರಿಲ್ 15 ರಿಂದಲೇ ಕರಗ ಮಹೋತ್ಸವ ಆರಂಭವಾಗಿದ್ದು, ಏಪ್ರಿಲ್ 23ರವರೆಗೆ ನಡೆಯಲಿದೆ. ಪ್ರತಿ ವರ್ಷ ಚೈತ್ರ ಪೌರ್ಣಮಿಯ ದಿನದಂದು ಕರಗ ಮಹೋತ್ಸವ ನಡೆದುಕೊಂಡು ಬರುತ್ತಿದೆ. ನಗರದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಮಹೋತ್ಸವದ ಚಟುವಟಿಕೆ ಆರಂಭವಾಗುತ್ತದೆ. ಕೈನಿಂದ ಮುಟ್ಟದೆ ತಲೆಯ ಮೇಲೆ ಕರಗ ಹೊತ್ತು ಸಾಗುವುದು ವಿಶೇಷವಾಗಿದೆ.

11 ದಿನಗಳ ಕಾಲ ಕರಗ ಮಹೋತ್ಸವ ನಡೆಯಲಿದೆ. ದೀಪಾರತಿ ಉತ್ಸವ, ಹಸಿ ಕರಗ, ಪೊಂಗಲು ಸೇವೆ, ಹೂವಿನ ಕರಗ, ವಸಂತೋತ್ಸವ, ಗಾವು ಸೇವೆಗಳು ನಡೆಯುತ್ತವೆ.

ಕರಗದ ಮೆರವಣಿಗೆ ಮಸ್ತಾನ್ ಸಾಬ್‌ ದರ್ಗಾಕ್ಕೆ ಕೂಡ ತೆರಳುವುದು ವಿಶೇಷವಾಗಿದೆ. ತಿಗಳರ ಪೇಟೆ, ಬಳೇಪೇಟೆ, ಚಿಕ್ಕಪೇಟೆ, ಅಣ್ಣಮ್ಮ ದೇವಸ್ಥಾನಗಳಲ್ಲಿ ಕರಗ ಮೆರವಣಿಗೆ ನಡೆಸಿದ ಬಳಿಕ, ಬೆಳಗಿನಜಾವದ ವೇಳೆಗೆ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರುತ್ತಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+