ನೂತನ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲಿಗೆ ಇಂದು ಹಸಿರು ನಿಶಾನೆ

ಬೆಂಗಳೂರು, ಮಾರ್ಚ್ 7: ಯಶವಂತಪುರ- ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್‌ ರೈಲಿಗೆ ಇಂದು ಹಸಿರು ನಿಶಾನೆ ದೊರೆಯಲಿದೆ.

ಬೆಂಗಳೂರಿನ ಯಶವಂತಪುರದಿಂದ ಹೊರಡುವ ರೈಲು ಗೋವಾದ ವಾಸ್ಕೋ ತನಕ ಸಂಚಾರ ನಡೆಸುತ್ತದೆ. ಹಲವು ವರ್ಷಗಳಿಂದ ಬೆಂಗಳೂರು-ವಾಸ್ಕೋ ನಡುವಿನ ನೇರ ರೈಲಿಗಾಗಿ ಬೇಡಿಕೆ ಇಡಲಾಗಿತ್ತು. ಉಭಯ ನಗರಗಳನ್ನು ರೈಲು 16 ಗಂಟೆಗಳಲ್ಲಿ ಕ್ರಮಿಸಲಿದೆ.

ಕೊಂಕಣ ರೈಲ್ವೆ ನಿಗಮವು(ಕೆಆರ್‌ಸಿಎಲ್) ರೈಲ್ವೆ ಸಚಿವಾಲಯದೊಂದಿಗೆ ಪ್ರಸ್ತಾವಿಸಿರುವ ಕಾರವಾರ ಮಾರ್ಗದ ಮೂಲಕ ನೂತನ ಯಶವಂತಪುರ-ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ಗೆ ಇಂದು ಹಸಿರು ನಿಶಾನೆ ತೋರಲಾಗುತ್ತಿದೆ.

Train

ಈ ಕುರಿತು ರೈಲ್ವೆ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಯಶವಂತಪುರದಲ್ಲಿ ಹೊಸ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಈ ವಿಶೇಷ ರೈಲಿನ ಅಗತ್ಯತೆಯ ಬಗ್ಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಅನಂತ್ ಕುಮಾರ್ ಹೆಗಡೆ ಮತ್ತು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗಡೆ ಪ್ರಸ್ತಾಪಿಸಿದ್ದರು. ಈ ಪ್ರಸ್ತಾವನೆಗೆ ಬೆಂಬಲವಾಗಿ ನಿಂತ ಸುರೇಶ್ ಅಂಗಡಿಯವರು ಕೊನೆಗೂ ಕ್ರಮ ಕೈಗೊಂಡು ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+