ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೂತನ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲಿಗೆ ಇಂದು ಹಸಿರು ನಿಶಾನೆ

|
Google Oneindia Kannada News

ಬೆಂಗಳೂರು, ಮಾರ್ಚ್ 7: ಯಶವಂತಪುರ- ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್‌ ರೈಲಿಗೆ ಇಂದು ಹಸಿರು ನಿಶಾನೆ ದೊರೆಯಲಿದೆ.

ಬೆಂಗಳೂರಿನ ಯಶವಂತಪುರದಿಂದ ಹೊರಡುವ ರೈಲು ಗೋವಾದ ವಾಸ್ಕೋ ತನಕ ಸಂಚಾರ ನಡೆಸುತ್ತದೆ. ಹಲವು ವರ್ಷಗಳಿಂದ ಬೆಂಗಳೂರು-ವಾಸ್ಕೋ ನಡುವಿನ ನೇರ ರೈಲಿಗಾಗಿ ಬೇಡಿಕೆ ಇಡಲಾಗಿತ್ತು. ಉಭಯ ನಗರಗಳನ್ನು ರೈಲು 16 ಗಂಟೆಗಳಲ್ಲಿ ಕ್ರಮಿಸಲಿದೆ.

ಕೊಂಕಣ ರೈಲ್ವೆ ನಿಗಮವು(ಕೆಆರ್‌ಸಿಎಲ್) ರೈಲ್ವೆ ಸಚಿವಾಲಯದೊಂದಿಗೆ ಪ್ರಸ್ತಾವಿಸಿರುವ ಕಾರವಾರ ಮಾರ್ಗದ ಮೂಲಕ ನೂತನ ಯಶವಂತಪುರ-ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ಗೆ ಇಂದು ಹಸಿರು ನಿಶಾನೆ ತೋರಲಾಗುತ್ತಿದೆ.

Train

ಈ ಕುರಿತು ರೈಲ್ವೆ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಯಶವಂತಪುರದಲ್ಲಿ ಹೊಸ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಕರ್ನಾಟಕದಲ್ಲಿ ಮಾ.22ರಿಂದ ಗೋಲ್ಡನ್ ಚಾರಿಯೆಟ್ ರೈಲು ಸೇವೆ ಶುರುಕರ್ನಾಟಕದಲ್ಲಿ ಮಾ.22ರಿಂದ ಗೋಲ್ಡನ್ ಚಾರಿಯೆಟ್ ರೈಲು ಸೇವೆ ಶುರು

ಈ ವಿಶೇಷ ರೈಲಿನ ಅಗತ್ಯತೆಯ ಬಗ್ಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಅನಂತ್ ಕುಮಾರ್ ಹೆಗಡೆ ಮತ್ತು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗಡೆ ಪ್ರಸ್ತಾಪಿಸಿದ್ದರು. ಈ ಪ್ರಸ್ತಾವನೆಗೆ ಬೆಂಬಲವಾಗಿ ನಿಂತ ಸುರೇಶ್ ಅಂಗಡಿಯವರು ಕೊನೆಗೂ ಕ್ರಮ ಕೈಗೊಂಡು ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ.

English summary
The Railway Ministry on Friday handed out good news and bad news for travellers between Bengaluru and Karwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X