ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 'ಟರ್ಮಿನಲ್ 3' ನಿರ್ಮಾಣ ಕೆಲಸ 10 ವರ್ಷಗಳ ನಂತರ ಆರಂಭ
ಬೆಂಗಳೂರು, ನವೆಂಬರ್ 23: ಎರಡನೇ ಟರ್ಮಿನಲ್ ಉದ್ಘಾಟನೆ ಕಂಡ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಉದ್ದೇಶಿತ ಟರ್ಮಿನಲ್ 3 ಕಾಮಗಾರಿ ಹತ್ತು ವರ್ಷಗಳ ನಂತರ ಆರಂಭವಾಗಲಿದೆ ಎಂದು ಫೇರ್ಫಾಕ್ಸ್ ಕಂಪನಿ ತಿಳಿಸಿದೆ.
ಟರ್ಮಿನಲ್ ನಿರ್ಮಾಣವು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸುವ ಉದ್ದೇಶದ ಭಾಗವೇ ಆಗದೆ. ಆದರೆ ಕಾರಣಾಂತರಗಳಿಂದ ಸದ್ಯಕ್ಕೆ ಕಾಮಗಾರಿ ಆರಂಭವಾಗುವುದಿಲ್ಲ ಎನ್ನಲಾಗಿದೆ. 2034ರ ವೇಳೆಗೆ ಕೆಐಎನಲ್ಲಿ ಉದ್ದೇಶಿತ ಬೃಹತ್ ಟರ್ಮಿನಲ್ 3 ಕಾಮಗಾರಿ ಶುರುವಾಗುವ ನಿರೀಕ್ಷೆಗಳು ಇವೆ.
ಕೆಐಎ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಜವಾಬ್ದಾರಿಯನ್ನು ಫೇರ್ಫ್ಯಾಕ್ಸ್ ಇಂಡಿಯಾ ಕಂಪನಿ (ಶೇ.54 ಪಾಲು) ಹಾಗೂ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (KIAL) ಹೊಂದಿವೆ. ಈ ಪೈಕಿ ಫೇರ್ಫ್ಯಾಕ್ಸ್ ಇಂಡಿಯಾ ಸಂಸ್ಥೆ ತನ್ನ ಮೂರನೇ ತ್ರೈಮಾಸಿಕ ಹಣಕಾಸು ಫಲಿತಾಂಶ ಪ್ರಕಟಿಸುವ ಸಂದರ್ಭದಲ್ಲಿ ಟರ್ಮಿನಲ್ 3 ರ ನಿರ್ಮಾಣ ಕುರಿತು ಮಾಹಿತಿ ನೀಡಿದೆ.

ನವೆಂಬರ್ 11ರಂದು ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಮತ್ತು ಉದ್ಯಾನದ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಈ ವಿಷಯವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು.
ಹೊಸ ಟರ್ಮಿನಲ್ 2.5 ಲಕ್ಷ ಚದರ ಮೀಟರ್ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಟರ್ಮಿನಲ್ ವಾರ್ಷಿಕವಾಗಿ 25ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದೆ. ಈ ಟರ್ಮಿನಲ್ ಮುಂದಿನ ಒಂದೂವರೆ ತಿಂಗಳ ನಂತರ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ. ಅಲ್ಲಿಯವರೆಗೆ ಸಣ್ಣಪುಟ್ಟ ಬಾಕಿ ಕೆಲಸ ಪೂರ್ಣಗೊಳಿಸಲಿದೆ. ಇದೀಗ ಕೆಐಎ ವಿಸ್ತರಣೆ ಭಾಗವೇ ಆದ ಟರ್ಮಿನಲ್ 3ನಿರ್ಮಾಣವು ಹತ್ತು ವರ್ಷ ವಿಳಂಬವಾಗಲಿದೆ ಎಂಬ ಸುದ್ದಿ ಬಹಿರಂಗವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications