ಒಕ್ಕಲಿಗರ ಸಂಘದ ಅಧ್ಯಕ್ಷರಿಗೆ ನರ್ಸ್ಗಳಿಂದ ಬಾಗಿನ
ಬೆಂಗಳೂರು, ಅಕ್ಟೋಬರ್. 05: ಸೇವೆ ಕಾಯಂಮಾತಿಗೆ ಆಗ್ರಹಿಸಿ ಕಿಮ್ಸ್ ನರ್ಸ್ ಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು ಸೋಮವಾರ ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿ ಗೌಡ ಅವರ ಕಚೇರಿ ಎದುರು ಬಾಗಿನ ಇಟ್ಟು ನರ್ಸ್ ಗಳು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಸೇವೆ ಕಾಯಂ ಮಾಡಿ ಇಲ್ಲವೇ, ಬಳೆ ತೊಟ್ಟಿಕೊಳ್ಳಿ ಎಂದು ಘೋಷಣೆ ಕೂಗಿದರು. ಪ್ರತಿಭಟನೆಗೆ ನರ್ಸ್ ಗಳ ಪಾಲಕರು ಸೋಮವಾರ ಬೆಂಬಲ ಸೂಚಿಸಿ ಪಾಲ್ಗೊಂಡಿದ್ದರು .

ನಮ್ಮ ಹೋರಾಟಕ್ಕೆ ಆಡಳಿತ ಮಂಡಳಿಯಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ನಮ್ಮ ಬಳಿ ಮಾತುಕತೆ ಮಾಡುವ ಔದಾರ್ಯವನ್ನು ಸಂಸ್ಥೆ ಮಾಡಿಲ್ಲ ಎಂದು ಆರೋಪಿಸಿದರು. ನಮ್ಮ ಎಲ್ಲ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಬದಲಾದ ಆಡಳಿತ ಮಂಡಳಿ ನಮ್ಮ ಹಕ್ಕುಗಳನ್ನು ಕಸಿದುಕೊಂಡಿದೆ. ನಾಲ್ಕೈದು ವರ್ಷಗಳಿಂದ ಸ್ಟಾಫ್ ನರ್ಸ್ ಹಾಗೂ ಕಂಪ್ಯೂಟರ್ ಆಪರೇಟರ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಸುಮಾರು 130 ಮಂದಿಯನ್ನುಕಾಯಂಗೊಳಿಸಬೇಕು. 2011ರಲ್ಲಿ ಒಂದು ವರ್ಷ ತರಬೇತಿ ಸೇರಿದಂತೆ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಎಲ್ಲಾ 28 ಶುಶ್ರೂಷಕಿಯರನ್ನು ಅಂದಿನ ಆಡಳಿತ ಮಂಡಳಿ ಕಾಯಂಗೊಳಿಸಿದೆ. ಆದರೆ ಈ ಆಡಳಿತ ಮಂಡಳಿ ನಮ್ಮನ್ನು ಕಾಯಂ ಮಾಡುತ್ತಿಲ್ಲ ಎಂಬ ಆರೋಪವನ್ನು ಪ್ರತಿಭಟನಾಕಾರರು ಮಾಡುತ್ತಿದ್ದಾರೆ.
ಕಿಮ್ಸ್ 720 ಹಾಸಿಗೆಯುಳ್ಳ ಆಸ್ಪತ್ರೆ, ಆಸ್ಪತ್ರೆಗೆ 350 ದಾದಿಯರು ಸಾಕಾಗಿತ್ತು, ಆದರೂ ಆಸ್ಪತ್ರೆಯಲ್ಲಿ 670 ದಾದಿಯರಿದ್ದಾರೆ. ಅವರೆಲ್ಲರಿಗೂ ವೇತನ ನೀಡಲಾಗುತ್ತಿದೆ. ತಾತ್ಕಾಲಿಕವಾಗಿ ನೇಮಕ ಮಾಡಿಕೊಂಡವರು ಕಾಯಂ ಮಾಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ. ಸಂಸ್ಥೆಗೆ ಪ್ರತಿ ವರ್ಷ 110 ಕೋಟಿ ಹಣ ಖರ್ಚಿಗೆ ಬೇಕಿದ್ದು ಆದಾಯ 95 ಕೋಟಿ ಇದೆ. ಸಂಸ್ಥೆಯೇ ನಷ್ಟದಲ್ಲಿರುವಾಗ ಸೇವೆ ಕಾಯಂ ಮಾಡುವ ಬೇಡಿಕೆ ಸರಿಯಲ್ಲ ಎಂಬುದು ಕಿಮ್ಸ್ ಅಧ್ಯಕ್ಷ ಅಪ್ಪಾಜಿ ಗೌಡ ಅವರ ಸಮರ್ಥನೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications